Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಇಂದು ಉತ್ತರ ಪ್ರದೇಶದ ಕಾನ್ಪುರಕ್ಕೆ ಪ್ರಧಾನಿ ಮೋದಿ ಭೇಟಿ; ಕಾನ್ಪುರ ಮೆಟ್ರೋ ಉದ್ಘಾಟನೆ, ಘಟಿಕೋತ್ಸವದಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು ಐಐಟಿ ಮೆಟ್ರೋ ಸ್ಟೇಶನ್​​ನಿಂದ ಗೀತಾ ನಗರದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿ, ಪರಿಶೀಲನೆ ನಡೆಸಲಿದ್ದಾರೆ. 

PM Modi: ಇಂದು ಉತ್ತರ ಪ್ರದೇಶದ ಕಾನ್ಪುರಕ್ಕೆ ಪ್ರಧಾನಿ ಮೋದಿ ಭೇಟಿ; ಕಾನ್ಪುರ ಮೆಟ್ರೋ ಉದ್ಘಾಟನೆ, ಘಟಿಕೋತ್ಸವದಲ್ಲಿ ಭಾಗಿ
ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Dec 28, 2021 | 10:00 AM

ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಕಾನ್ಪುರ (PM Modi Kanpur Visit)ಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆಯ ಸಂಪೂರ್ಣಗೊಂಡ ಮೊದಲ ಹಂತವನ್ನು ಉದ್ಘಾಟನೆ ಮಾಡಲಿದ್ದಾರೆ.  ಐಐಟಿ ಕಾನ್ಪುರದಿಂದ ಮೋಟಿ ಝೀಲ್​ವರೆಗಿನ 9 ಕಿಮೀ ಉದ್ದದ ಮೆಟ್ರೋ ಮಾರ್ಗ ಸಂಪೂರ್ಣವಾಗಿದ್ದು, ಅದನ್ನಿಂದು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಅಂದಹಾಗೆ,  ಕಾನ್ಪುರದ ಮೆಟ್ರೋ ರೈಲು ಯೋಜನೆಯ ಒಟ್ಟೂ ಉದ್ದ 32 ಕಿಮೀ ಆಗಿದ್ದು, ಒಟ್ಟಾರೆ ವೆಚ್ಚ 11 ಸಾವಿರ ಕೋಟಿ ರೂಪಾಯಿ.   

ಪ್ರಧಾನಿ ನರೇಂದ್ರ ಮೋದಿಯವರು ಇಂದು ಐಐಟಿ ಮೆಟ್ರೋ ಸ್ಟೇಶನ್​​ನಿಂದ ಗೀತಾ ನಗರದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿ, ಪರಿಶೀಲನೆ ನಡೆಸಲಿದ್ದಾರೆ.  ನಗರಾಭಿವೃದ್ಧಿ, ಅದರಲ್ಲೂ ನಗರದಲ್ಲಿ ಸಂಚಾರ ಮಾರ್ಗ ಸುಧಾರಣೆ ಪ್ರಧಾನಿ ಮೋದಿಯವರ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆ ಇನ್ನೊಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.  ಹಾಗೇ, ಇಂದಿನ ಕಾನ್ಪುರ ಭೇಟಿ ವೇಳೆ ಪ್ರಧಾನಿ ಮೋದಿ, ಬಿನಾ-ಪಂಕಿ ಮಲ್ಟಿಪ್ರೊಡಕ್ಟ್ ಪೈಪ್‌ಲೈನ್ ಯೋಜನೆ ಉದ್ಘಾಟಿಸುವರು. ಅದಾದ ಬಳಿಕ ಐಐಟಿ ಕಾನ್ಪುರ 54ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವರು.  ಈ ವೇಳೆ ಐಐಟಿ ಕಾನ್ಪುರದ ಎಲ್ಲ ವಿದ್ಯಾರ್ಥಿಗಳಿಗೆ ಆಂತರಿಕ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಡಿಜಿಟಲ್​ ಪದವಿ ನೀಡಲಾಗುತ್ತದೆ. ಇದನ್ನು ರಾಷ್ಟ್ರೀಯ ಬ್ಲಾಕ್​ಚೈನ್​ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿದ್ದು, ಇದನ್ನು ಜಾಗತಿಕವಾಗಿಯೂ ಪರಿಗಣಿಸಬಹುದಾಗಿದೆ.

ಬಿನಾ-ಪಂಕಿ ಪೈಪ್​ಲೈನ್​ ಯೋಜನೆ ಬಿನಾ-ಪಿಂಕಿ ಪೈಪ್​ಲೈನ್ ಯೋಜನೆ 1500 ಕೋಟಿ ರೂಪಾಯಿಯೂ ಅಧಿಕ ವೆಚ್ಚದ ಯೋಜನೆಯಾಗಿದೆ. ಇದು ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆ ಸಲುವಾಗಿ ನಿರ್ಮಿಸಲಾದ ಪೈಪ್​ಲೈನ್ ಆಗಿದ್ದು, ಮಧ್ಯಪ್ರದೇಶದ ಬಿನಾ ಸಂಸ್ಕರಣಾಗಾರದಿಂದ ಕಾನ್ಪುರ ಪಂಕಿಯವರೆಗೆ 356 ಕಿಮೀ ಉದ್ದದ ಪೈಪ್​ಲೈನ್​ ಹಾಕಲಾಗಿದೆ. ಇದು ವಾರ್ಷಿಕವಾಗಿ 3.45 ಮಿಲಿಯನ್​ ಮೆಟ್ರಿಕ್​ ಟನ್​ಗಳಷ್ಟು ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆ ಸಾಮರ್ಥ್ಯ ಹೊಂದಿದೆ. ಭಾರತ್​ ಪೆಟ್ರೋಲಿಯಂ ಕಾರ್ಪೋರೇಶನ್​ ಇದರ ಕಾರ್ಯನಿರ್ವಹಿಸುತ್ತದೆ.

ನಿನ್ನೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ ಇಂದು ಉತ್ತರಪ್ರದೇಶದ ಕಾನ್ಪುರಕ್ಕೆ ಭೇಟಿ ನೀಡುವ ಬಗ್ಗೆ ನಿನ್ನೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು. ಡಿ.28ರಂದು ನಾನು ಕಾನ್ಪುರಕ್ಕೆ ತೆರಳುತ್ತಿದ್ದೇನೆ. ಅಲ್ಲಿ ಘಟಿಕೋತ್ಸವದಲ್ಲಿ ಮಾತನಾಡಲಿದ್ದೇನೆ. ಅದಕ್ಕೂ ಮೊದಲು ಕಾನ್ಪುರ ಮೆಟ್ರೋ ಯೋಜನೆಯ ಸಂಪೂರ್ಣಗೊಂಡ ಹಂತ ಮತ್ತು ಬಿನಾ-ಪಂಕಿ ಯೋಜನೆಯ ಉದ್ಘಾಟನೆ ಮಾಡಲಿದ್ದೇನೆ ಎಂದು ಹೇಳಿದ್ದರು. ಅಂದಹಾಗೆ ಉತ್ತರ ಪ್ರದೇಶಕ್ಕೆ ಅವರು ಒಂದು ತಿಂಗಳಿಂದಲೂ ಪದೇಪದೆ ಭೇಟಿ ಕೋಡುತ್ತಿದ್ದು ಈಗಾಗಲೇ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ನಾನಾ ಕಡೆಗಳಲ್ಲಿ ಡಿಸೆಂಬರ್ 29 ಕ್ಕೆ ವಿದ್ಯುತ್ ವ್ಯತ್ಯಯ, ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ನೋ ಪವರ್

Published On - 9:40 am, Tue, 28 December 21

ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ