AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಇಂದು ಉತ್ತರ ಪ್ರದೇಶದ ಕಾನ್ಪುರಕ್ಕೆ ಪ್ರಧಾನಿ ಮೋದಿ ಭೇಟಿ; ಕಾನ್ಪುರ ಮೆಟ್ರೋ ಉದ್ಘಾಟನೆ, ಘಟಿಕೋತ್ಸವದಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು ಐಐಟಿ ಮೆಟ್ರೋ ಸ್ಟೇಶನ್​​ನಿಂದ ಗೀತಾ ನಗರದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿ, ಪರಿಶೀಲನೆ ನಡೆಸಲಿದ್ದಾರೆ. 

PM Modi: ಇಂದು ಉತ್ತರ ಪ್ರದೇಶದ ಕಾನ್ಪುರಕ್ಕೆ ಪ್ರಧಾನಿ ಮೋದಿ ಭೇಟಿ; ಕಾನ್ಪುರ ಮೆಟ್ರೋ ಉದ್ಘಾಟನೆ, ಘಟಿಕೋತ್ಸವದಲ್ಲಿ ಭಾಗಿ
ಪ್ರಧಾನಿ ಮೋದಿ
TV9 Web
| Edited By: |

Updated on:Dec 28, 2021 | 10:00 AM

Share

ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಕಾನ್ಪುರ (PM Modi Kanpur Visit)ಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆಯ ಸಂಪೂರ್ಣಗೊಂಡ ಮೊದಲ ಹಂತವನ್ನು ಉದ್ಘಾಟನೆ ಮಾಡಲಿದ್ದಾರೆ.  ಐಐಟಿ ಕಾನ್ಪುರದಿಂದ ಮೋಟಿ ಝೀಲ್​ವರೆಗಿನ 9 ಕಿಮೀ ಉದ್ದದ ಮೆಟ್ರೋ ಮಾರ್ಗ ಸಂಪೂರ್ಣವಾಗಿದ್ದು, ಅದನ್ನಿಂದು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಅಂದಹಾಗೆ,  ಕಾನ್ಪುರದ ಮೆಟ್ರೋ ರೈಲು ಯೋಜನೆಯ ಒಟ್ಟೂ ಉದ್ದ 32 ಕಿಮೀ ಆಗಿದ್ದು, ಒಟ್ಟಾರೆ ವೆಚ್ಚ 11 ಸಾವಿರ ಕೋಟಿ ರೂಪಾಯಿ.   

ಪ್ರಧಾನಿ ನರೇಂದ್ರ ಮೋದಿಯವರು ಇಂದು ಐಐಟಿ ಮೆಟ್ರೋ ಸ್ಟೇಶನ್​​ನಿಂದ ಗೀತಾ ನಗರದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿ, ಪರಿಶೀಲನೆ ನಡೆಸಲಿದ್ದಾರೆ.  ನಗರಾಭಿವೃದ್ಧಿ, ಅದರಲ್ಲೂ ನಗರದಲ್ಲಿ ಸಂಚಾರ ಮಾರ್ಗ ಸುಧಾರಣೆ ಪ್ರಧಾನಿ ಮೋದಿಯವರ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆ ಇನ್ನೊಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.  ಹಾಗೇ, ಇಂದಿನ ಕಾನ್ಪುರ ಭೇಟಿ ವೇಳೆ ಪ್ರಧಾನಿ ಮೋದಿ, ಬಿನಾ-ಪಂಕಿ ಮಲ್ಟಿಪ್ರೊಡಕ್ಟ್ ಪೈಪ್‌ಲೈನ್ ಯೋಜನೆ ಉದ್ಘಾಟಿಸುವರು. ಅದಾದ ಬಳಿಕ ಐಐಟಿ ಕಾನ್ಪುರ 54ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವರು.  ಈ ವೇಳೆ ಐಐಟಿ ಕಾನ್ಪುರದ ಎಲ್ಲ ವಿದ್ಯಾರ್ಥಿಗಳಿಗೆ ಆಂತರಿಕ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಡಿಜಿಟಲ್​ ಪದವಿ ನೀಡಲಾಗುತ್ತದೆ. ಇದನ್ನು ರಾಷ್ಟ್ರೀಯ ಬ್ಲಾಕ್​ಚೈನ್​ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿದ್ದು, ಇದನ್ನು ಜಾಗತಿಕವಾಗಿಯೂ ಪರಿಗಣಿಸಬಹುದಾಗಿದೆ.

ಬಿನಾ-ಪಂಕಿ ಪೈಪ್​ಲೈನ್​ ಯೋಜನೆ ಬಿನಾ-ಪಿಂಕಿ ಪೈಪ್​ಲೈನ್ ಯೋಜನೆ 1500 ಕೋಟಿ ರೂಪಾಯಿಯೂ ಅಧಿಕ ವೆಚ್ಚದ ಯೋಜನೆಯಾಗಿದೆ. ಇದು ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆ ಸಲುವಾಗಿ ನಿರ್ಮಿಸಲಾದ ಪೈಪ್​ಲೈನ್ ಆಗಿದ್ದು, ಮಧ್ಯಪ್ರದೇಶದ ಬಿನಾ ಸಂಸ್ಕರಣಾಗಾರದಿಂದ ಕಾನ್ಪುರ ಪಂಕಿಯವರೆಗೆ 356 ಕಿಮೀ ಉದ್ದದ ಪೈಪ್​ಲೈನ್​ ಹಾಕಲಾಗಿದೆ. ಇದು ವಾರ್ಷಿಕವಾಗಿ 3.45 ಮಿಲಿಯನ್​ ಮೆಟ್ರಿಕ್​ ಟನ್​ಗಳಷ್ಟು ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆ ಸಾಮರ್ಥ್ಯ ಹೊಂದಿದೆ. ಭಾರತ್​ ಪೆಟ್ರೋಲಿಯಂ ಕಾರ್ಪೋರೇಶನ್​ ಇದರ ಕಾರ್ಯನಿರ್ವಹಿಸುತ್ತದೆ.

ನಿನ್ನೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ ಇಂದು ಉತ್ತರಪ್ರದೇಶದ ಕಾನ್ಪುರಕ್ಕೆ ಭೇಟಿ ನೀಡುವ ಬಗ್ಗೆ ನಿನ್ನೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು. ಡಿ.28ರಂದು ನಾನು ಕಾನ್ಪುರಕ್ಕೆ ತೆರಳುತ್ತಿದ್ದೇನೆ. ಅಲ್ಲಿ ಘಟಿಕೋತ್ಸವದಲ್ಲಿ ಮಾತನಾಡಲಿದ್ದೇನೆ. ಅದಕ್ಕೂ ಮೊದಲು ಕಾನ್ಪುರ ಮೆಟ್ರೋ ಯೋಜನೆಯ ಸಂಪೂರ್ಣಗೊಂಡ ಹಂತ ಮತ್ತು ಬಿನಾ-ಪಂಕಿ ಯೋಜನೆಯ ಉದ್ಘಾಟನೆ ಮಾಡಲಿದ್ದೇನೆ ಎಂದು ಹೇಳಿದ್ದರು. ಅಂದಹಾಗೆ ಉತ್ತರ ಪ್ರದೇಶಕ್ಕೆ ಅವರು ಒಂದು ತಿಂಗಳಿಂದಲೂ ಪದೇಪದೆ ಭೇಟಿ ಕೋಡುತ್ತಿದ್ದು ಈಗಾಗಲೇ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ನಾನಾ ಕಡೆಗಳಲ್ಲಿ ಡಿಸೆಂಬರ್ 29 ಕ್ಕೆ ವಿದ್ಯುತ್ ವ್ಯತ್ಯಯ, ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ನೋ ಪವರ್

Published On - 9:40 am, Tue, 28 December 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ