Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಬುದ್ಧ ಪೂರ್ಣಿಮೆ ಹಿನ್ನೆಲೆ; ಇಂದು ನೇಪಾಳಕ್ಕೆ ಪ್ರಧಾನಿ ನರೇಂದ್ರ ಮೋದಿ

Buddha Purnima: ಬೌದ್ಧ ಸಂಸ್ಕೃತಿ ಮತ್ತು ಪರಂಪರೆ ಕೇಂದ್ರ ಸ್ಥಾಪನೆಗೆ ಇದೇ ಸಂದರ್ಭದಲ್ಲಿ ಎರಡೂ ದೇಶದ ಪ್ರಧಾನಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

PM Modi: ಬುದ್ಧ ಪೂರ್ಣಿಮೆ ಹಿನ್ನೆಲೆ; ಇಂದು ನೇಪಾಳಕ್ಕೆ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 16, 2022 | 11:07 AM

ದೆಹಲಿ: ಬುದ್ಧ ಪೂರ್ಣಿಮೆ (Buddha Purnima) ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬುದ್ಧನ ಜನ್ಮಸ್ಥಳವಾದ ನೇಪಾಳದ ಲುಂಬಿನಿಗೆ ಸೋಮವಾರ (ಮೇ 16) ಭೇಟಿ ನೀಡಲಿದ್ದಾರೆ. ಮೋದಿ ಅವರ ನೇಪಾಳ ಭೇಟಿಯು ಭಾರತ-ನೇಪಾಳ ಸಂಬಂಧವನ್ನು ಮತ್ತಷ್ಟು ಭದ್ರಗೊಳಿಸಲಿದೆ. ಈ ವೇಳೆ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವ್​ಬಾ ಅವರೊಂದಿಗೆ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಬೌದ್ಧ ಸಂಸ್ಕೃತಿ ಮತ್ತು ಪರಂಪರೆ ಕೇಂದ್ರ ಸ್ಥಾಪನೆಗೆ ಇದೇ ಸಂದರ್ಭದಲ್ಲಿ ಎರಡೂ ದೇಶದ ಪ್ರಧಾನಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮೋದಿ ನೇಪಾಳ ಭೇಟಿಯ ಮುಖ್ಯ ಅಂಶಗಳಿವು…

  1. ಬುದ್ಧನ ಜನ್ಮಸ್ಥಳ ಲುಂಬಿನಿಯಲ್ಲಿ ಎರಡೂ ದೇಶಗಳ ಪ್ರಧಾನಿ ಪರಸ್ಪರ ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
  2. ಲುಂಬಿನಿಯಲ್ಲಿ ನೇಪಾಳ ಪ್ರಧಾನಿ ಶೇರ್​ ಬಹದ್ದೂರ್ ದೇವ್​ಬಾ ಆಯೋಜಿಸಿರುವ ಭೋಜನ ಕೂಟದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
  3. ಉತ್ತರ ಪ್ರದೇಶದ ಖುಷಿನಗರದಿಂದ ಲುಂಬಿನಿಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ.
  4. ಲುಂಬಿನಿಯಲ್ಲಿಯೇ ಬುದ್ಧ ನಿರ್ವಾಣ ಹೊಂದಿದ ಎಂದು ಹೇಳಲಾಗುತ್ತದೆ.
  5. ಭಾರತ ಮತ್ತು ನೇಪಾಳಗಳಲ್ಲಿರುವ ಬೌದ್ಧ ಧರ್ಮದ ಯಾತ್ರಾ ಸ್ಥಳಗಳನ್ನು ಪರಸ್ಪರ ಬೆಸೆಯಲು ಎರಡೂ ದೇಶಗಳು ಪ್ರಯತ್ನಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಲುಂಬಿನಿ ಭೇಟಿ ಸಹ ಇಂಥ ಪ್ರಯತ್ನಗಳಿಗೆ ಪುಷ್ಟಿ ನೀಡಲಿದೆ.
  6. ನೇಪಾಳ ಭೇಟಿಯ ವೇಳೆ ನರೇಂದ್ರ ಮೋದಿ ಅವರು ಮಾಯಾ ದೇವಿ ದೇಗುಲಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
  7. ಲುಂಬಿನಿ ಡೆವಲಪ್​ಮೆಂಟ್​ ಟ್ರಸ್ಟ್​ ಆಯೋಜಿಸಿರುವ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಲಿದ್ದಾರೆ.
  8. ಬೌದ್ಧ ಸಂಸ್ಕೃತಿ ಮತ್ತು ಪರಂಪರಾ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿಯೂ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಯೋಜನೆಗೆ ಭಾರತ ಸರ್ಕಾರವು ಸಹಾಯ ಒದಗಿಸಿದೆ.
  9. ಭಾರತ ಮತ್ತು ನೇಪಾಳ ಸರ್ಕಾರಗಳ ನಡುವೆ ಇದೇ ಸಂದರ್ಭದಲ್ಲಿ ಹಲವು ಒಡಂಬಡಿಕೆಗಳು ಏರ್ಪಡಲಿದ್ದು, ಎರಡೂ ದೇಶಗಳ ಪ್ರಧಾನಿಗಳು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
  10. ಆರ್ಥಿಕ ಬಿಕ್ಕಟ್ಟಿನ ಸುಳಿಯಲ್ಲಿರುವ ನೇಪಾಳದಲ್ಲಿ ದಿನದಿಂದ ದಿನಕ್ಕೆ ವಿದೇಶಿ ಮೀಸಲು ಮೊತ್ತ ಕುಸಿಯುತ್ತಿದೆ. ಇಂದು ಶ್ರೀಲಂಕಾ ಎದುರಿಸುತ್ತಿರುವಂಥದ್ದೇ ಸಮಸ್ಯೆಗಳು ಮುಂದಿನ ದಿನಗಳಲ್ಲಿ ನೇಪಾಳದಲ್ಲಿಯೂ ಎದುರಾಗಬಹುದು ಎಂದು ವಿಶ್ಲೇಷಿಸಲಾಗಿದ್ದು, ನೇಪಾಳವು ಭಾರತದ ನೆರವಿನ ನಿರೀಕ್ಷೆಯಲ್ಲಿದೆ.

ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Mon, 16 May 22

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ