PM Modi: ಬುದ್ಧ ಪೂರ್ಣಿಮೆ ಹಿನ್ನೆಲೆ; ಇಂದು ನೇಪಾಳಕ್ಕೆ ಪ್ರಧಾನಿ ನರೇಂದ್ರ ಮೋದಿ

Buddha Purnima: ಬೌದ್ಧ ಸಂಸ್ಕೃತಿ ಮತ್ತು ಪರಂಪರೆ ಕೇಂದ್ರ ಸ್ಥಾಪನೆಗೆ ಇದೇ ಸಂದರ್ಭದಲ್ಲಿ ಎರಡೂ ದೇಶದ ಪ್ರಧಾನಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

PM Modi: ಬುದ್ಧ ಪೂರ್ಣಿಮೆ ಹಿನ್ನೆಲೆ; ಇಂದು ನೇಪಾಳಕ್ಕೆ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 16, 2022 | 11:07 AM

ದೆಹಲಿ: ಬುದ್ಧ ಪೂರ್ಣಿಮೆ (Buddha Purnima) ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬುದ್ಧನ ಜನ್ಮಸ್ಥಳವಾದ ನೇಪಾಳದ ಲುಂಬಿನಿಗೆ ಸೋಮವಾರ (ಮೇ 16) ಭೇಟಿ ನೀಡಲಿದ್ದಾರೆ. ಮೋದಿ ಅವರ ನೇಪಾಳ ಭೇಟಿಯು ಭಾರತ-ನೇಪಾಳ ಸಂಬಂಧವನ್ನು ಮತ್ತಷ್ಟು ಭದ್ರಗೊಳಿಸಲಿದೆ. ಈ ವೇಳೆ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವ್​ಬಾ ಅವರೊಂದಿಗೆ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಬೌದ್ಧ ಸಂಸ್ಕೃತಿ ಮತ್ತು ಪರಂಪರೆ ಕೇಂದ್ರ ಸ್ಥಾಪನೆಗೆ ಇದೇ ಸಂದರ್ಭದಲ್ಲಿ ಎರಡೂ ದೇಶದ ಪ್ರಧಾನಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮೋದಿ ನೇಪಾಳ ಭೇಟಿಯ ಮುಖ್ಯ ಅಂಶಗಳಿವು…

  1. ಬುದ್ಧನ ಜನ್ಮಸ್ಥಳ ಲುಂಬಿನಿಯಲ್ಲಿ ಎರಡೂ ದೇಶಗಳ ಪ್ರಧಾನಿ ಪರಸ್ಪರ ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
  2. ಲುಂಬಿನಿಯಲ್ಲಿ ನೇಪಾಳ ಪ್ರಧಾನಿ ಶೇರ್​ ಬಹದ್ದೂರ್ ದೇವ್​ಬಾ ಆಯೋಜಿಸಿರುವ ಭೋಜನ ಕೂಟದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
  3. ಉತ್ತರ ಪ್ರದೇಶದ ಖುಷಿನಗರದಿಂದ ಲುಂಬಿನಿಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ.
  4. ಲುಂಬಿನಿಯಲ್ಲಿಯೇ ಬುದ್ಧ ನಿರ್ವಾಣ ಹೊಂದಿದ ಎಂದು ಹೇಳಲಾಗುತ್ತದೆ.
  5. ಭಾರತ ಮತ್ತು ನೇಪಾಳಗಳಲ್ಲಿರುವ ಬೌದ್ಧ ಧರ್ಮದ ಯಾತ್ರಾ ಸ್ಥಳಗಳನ್ನು ಪರಸ್ಪರ ಬೆಸೆಯಲು ಎರಡೂ ದೇಶಗಳು ಪ್ರಯತ್ನಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಲುಂಬಿನಿ ಭೇಟಿ ಸಹ ಇಂಥ ಪ್ರಯತ್ನಗಳಿಗೆ ಪುಷ್ಟಿ ನೀಡಲಿದೆ.
  6. ನೇಪಾಳ ಭೇಟಿಯ ವೇಳೆ ನರೇಂದ್ರ ಮೋದಿ ಅವರು ಮಾಯಾ ದೇವಿ ದೇಗುಲಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
  7. ಲುಂಬಿನಿ ಡೆವಲಪ್​ಮೆಂಟ್​ ಟ್ರಸ್ಟ್​ ಆಯೋಜಿಸಿರುವ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಲಿದ್ದಾರೆ.
  8. ಬೌದ್ಧ ಸಂಸ್ಕೃತಿ ಮತ್ತು ಪರಂಪರಾ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿಯೂ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಯೋಜನೆಗೆ ಭಾರತ ಸರ್ಕಾರವು ಸಹಾಯ ಒದಗಿಸಿದೆ.
  9. ಭಾರತ ಮತ್ತು ನೇಪಾಳ ಸರ್ಕಾರಗಳ ನಡುವೆ ಇದೇ ಸಂದರ್ಭದಲ್ಲಿ ಹಲವು ಒಡಂಬಡಿಕೆಗಳು ಏರ್ಪಡಲಿದ್ದು, ಎರಡೂ ದೇಶಗಳ ಪ್ರಧಾನಿಗಳು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
  10. ಆರ್ಥಿಕ ಬಿಕ್ಕಟ್ಟಿನ ಸುಳಿಯಲ್ಲಿರುವ ನೇಪಾಳದಲ್ಲಿ ದಿನದಿಂದ ದಿನಕ್ಕೆ ವಿದೇಶಿ ಮೀಸಲು ಮೊತ್ತ ಕುಸಿಯುತ್ತಿದೆ. ಇಂದು ಶ್ರೀಲಂಕಾ ಎದುರಿಸುತ್ತಿರುವಂಥದ್ದೇ ಸಮಸ್ಯೆಗಳು ಮುಂದಿನ ದಿನಗಳಲ್ಲಿ ನೇಪಾಳದಲ್ಲಿಯೂ ಎದುರಾಗಬಹುದು ಎಂದು ವಿಶ್ಲೇಷಿಸಲಾಗಿದ್ದು, ನೇಪಾಳವು ಭಾರತದ ನೆರವಿನ ನಿರೀಕ್ಷೆಯಲ್ಲಿದೆ.

ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Mon, 16 May 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ