AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ಮೋದಿಯವರ ಭೇಟಿಯ ವರದಿಯನ್ನು ದೃಢೀಕರಿಸಿದ ರಾಜ್ಯ ಬಿಜೆಪಿ ಮುಖ್ಯಸ್ಥ ವಿ.ಡಿ.ಶರ್ಮಾ ಅವರು, ಜೂ.22 ರಂದು ಬಿಜೆಪಿಯ ರಾಜ್ಯ ಘಟಕವು  ಪ್ರಾರಂಭಿಸಿದ ರಾಣಿ ದುರ್ಗಾವತಿ ಗೌರವ ಯಾತ್ರೆಯಲ್ಲಿ ಸಮಾರೋಪ ಭಾಷಣ ಮಾಡಲು ಪ್ರಧಾನಿ ಜುಲೈ 1 ರಂದು ಶಹದೋಲ್‌ಗೆ ಭೇಟಿ ನೀಡಲಿದ್ದಾ

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 30, 2023 | 8:58 PM

Share

ಮಧ್ಯಪ್ರದೇಶದ (Madhya Pradesh) ಶಹದೋಲ್ (Shahdol) ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ(ಜುಲೈ1)ಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಪ್ರದೇಶ ಬಿಜೆಪಿ ಪ್ರಕಾರ ಮೋದಿ ಅವರು ‘ರಾಣಿ ದುರ್ಗಾವತಿ ಗೌರವ್ ಯಾತ್ರೆ’ ಕಾರ್ಯಕ್ರಮ ಮತ್ತು ನ್ಯಾಷನಲ್ ಸಿಕಲ್ ಸೆಲ್ ಅನೇಮಿಯಾ ನಿವಾರಣೆ ಮಿಷನ್(National Sickle Cell Anemia Elimination Mission) ಅನ್ನು ಪ್ರಾರಂಭಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆಯುಷ್ಮಾನ್ ಕಾರ್ಡ್‌ಗಳ ವಿತರಣೆ ಸೇರಿದಂತೆ ಪ್ರಧಾನಿ ಮೋದಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ರಾಜ್ಯ ಬಿಜೆಪಿಯ ಹಿರಿಯ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರು ಶಾಹದೋಲ್ ಜಿಲ್ಲೆಯ ಪಕಾರಿಯಾ ಗ್ರಾಮಕ್ಕೆ ಭೇಟಿ ನೀಡಲಿದ್ದು ಗ್ರಾಮದ ವಿವಿಧ ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 3.57 ಕೋಟಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್‌ಗಳ ವಿತರಣೆಯನ್ನು ಕೂಡಾ ಮೋದಿ ಮಾಡಲಿದ್ದಾರೆ.ಆಯುಷ್ಮಾನ್ ಕಾರ್ಡ್ ವಿತರಣೆ ಸಮಾರಂಭವನ್ನು ರಾಜ್ಯಾದ್ಯಂತ ನಗರ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಮತ್ತು ಅಭಿವೃದ್ಧಿ ಬ್ಲಾಕ್‌ಗಳಲ್ಲಿ ಆಯೋಜಿಸಲಾಗಿದೆ.

ಇದೇ ವೇಳೆ 16 ನೇ ಶತಮಾನದ ಮಧ್ಯಭಾಗದಲ್ಲಿ ಗೊಂಡ್ವಾನಾದ ಆಡಳಿತ ರಾಣಿಯಾಗಿದ್ದ ರಾಣಿ ದುರ್ಗಾವತಿಗೆ ಮೋದಿ ಗೌರವ ನಮನ ಸಲ್ಲಿಸಲಿದ್ದಾರೆ. ಮೊಘಲರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕೆಚ್ಚೆದೆಯ, ನಿರ್ಭೀತ ಮತ್ತು ಧೈರ್ಯಶಾಲಿಯಾಗಿದ್ದಾರೆ ರಾಣಿ ದುರ್ಗಾವತಿ.

ಮೋದಿ ಸಂಜೆ 5 ಗಂಟೆಗೆ ಶಹದೋಲ್ ಜಿಲ್ಲೆಯ ಪಕಾರಿಯಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಬುಡಕಟ್ಟು ಸಮುದಾಯದ ಮುಖಂಡರು, ಸ್ವ-ಸಹಾಯ ಗುಂಪುಗಳು, ಗ್ರಾಮ ಫುಟ್ಬಾಲ್ ಕ್ಲಬ್ ಕ್ಯಾಪ್ಟನ್‌ಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಪ್ರಧಾನಿ ಮೋದಿಯವರ ಭೇಟಿಯ ವರದಿಯನ್ನು ದೃಢೀಕರಿಸಿದ ರಾಜ್ಯ ಬಿಜೆಪಿ ಮುಖ್ಯಸ್ಥ ವಿ.ಡಿ.ಶರ್ಮಾ ಅವರು, ಜೂ.22 ರಂದು ಬಿಜೆಪಿಯ ರಾಜ್ಯ ಘಟಕವು  ಪ್ರಾರಂಭಿಸಿದ ರಾಣಿ ದುರ್ಗಾವತಿ ಗೌರವ ಯಾತ್ರೆಯಲ್ಲಿ ಸಮಾರೋಪ ಭಾಷಣ ಮಾಡಲು ಪ್ರಧಾನಿ ಜುಲೈ 1 ರಂದು ಶಹದೋಲ್‌ಗೆ ಭೇಟಿ ನೀಡಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುಟಿನ್ ಜತೆ ಮೋದಿ ದೂರವಾಣಿ ಮಾತುಕತೆ: ರಾಜತಾಂತ್ರಿಕತೆ ಮೂಲಕ ಉಕ್ರೇನ್ ಬಿಕ್ಕಟ್ಟನ್ನು ಪರಿಹರಿಸಲು ಹೇಳಿದ ಪ್ರಧಾನಿ

ಈ ಕಾರ್ಯಕ್ರಮಗಳಿಗಾಗಿ ಪ್ರಧಾನಿ ಮೋದಿ ಈ ಹಿಂದೆ ಜೂನ್ 27 ರಂದು ಶಹದೋಲ್‌ಗೆ ಭೇಟಿ ನೀಡಬೇಕಿತ್ತು. ಆದರೆ ಭಾರೀ ಮಳೆಯಿಂದಾಗಿ ಭೇಟಿಯನ್ನು ಮುಂದೂಡಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Fri, 30 June 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ