AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; 8,500 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಮಣಿಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ (ಶನಿವಾರ) 8,500 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 2023ರ ಜನಾಂಗೀಯ ಹಿಂಸಾಚಾರದ ನಂತರ ಮಣಿಪುರಕ್ಕೆ ಪ್ರಧಾನಿಯ ಮೊದಲ ಭೇಟಿ ಇದಾಗಿದೆ. ಜನಾಂಗೀಯ ಘರ್ಷಣೆಗಳು ಮಣಿಪುರವನ್ನು ತಲ್ಲಣಗೊಳಿಸಿದ 2 ವರ್ಷಗಳ ನಂತರ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಮಣಿಪುರಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; 8,500 ಕೋಟಿ ರೂ. ಯೋಜನೆಗಳಿಗೆ ಚಾಲನೆ
Modi
ಸುಷ್ಮಾ ಚಕ್ರೆ
|

Updated on: Sep 12, 2025 | 5:04 PM

Share

ನವದೆಹಲಿ, ಸೆಪ್ಟೆಂಬರ್ 12: ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಶನಿವಾರ) ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ, 2023ರಲ್ಲಿ 200ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಜನಾಂಗೀಯ ಹಿಂಸಾಚಾರದ ನಂತರ ಈ ರಾಜ್ಯಕ್ಕೆ ಮೋದಿಯ ಮೊದಲ ಪ್ರವಾಸ ಇದಾಗಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ಸಂಘರ್ಷ ಪೀಡಿತ ಈಶಾನ್ಯ ಪ್ರದೇಶದ ಪರಿಸ್ಥಿತಿಯನ್ನು ಪರಿಶೀಲಿಸಲು ಮಣಿಪುರ ರಾಜ್ಯಕ್ಕೆ ಭೇಟಿ ನೀಡದಿದ್ದಕ್ಕಾಗಿ ವಿರೋಧ ಪಕ್ಷಗಳು ಪ್ರಧಾನಿಯನ್ನು ಗುರಿಯಾಗಿಸಿಕೊಂಡಿತ್ತು.

ಮಣಿಪುರದ ಮುಖ್ಯ ಕಾರ್ಯದರ್ಶಿ ಪುನೀತ್ ಕುಮಾರ್ ಗೋಯಲ್ ಅವರು ಸೆಪ್ಟೆಂಬರ್ 13ರಂದು ಪ್ರಧಾನಿ ಮೋದಿ 8,500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ ಮೊದಲು ಮಿಜೋರಾಂನಿಂದ ಚುರಾಚಂದ್‌ಪುರಕ್ಕೆ ಆಗಮಿಸಲಿದ್ದಾರೆ. ನಂತರ ಇಂಫಾಲ್‌ಗೆ ತೆರಳಲಿದ್ದಾರೆ. “ಮಣಿಪುರದ ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಚುರಾಚಂದ್‌ಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಉಂಗುರದಿಂದ ಹಿಡಿದು ರಾಜನಾಥ್ ಸಿಂಗ್ ಹೊಂದಿರುವ ಪೈಪ್​ಗನ್​​ವರೆಗೆ ಯಾವ್ಯಾವ ಸಚಿವರ ಆಸ್ತಿ ಎಷ್ಟೆಷ್ಟಿದೆ?

ಜನಾಂಗೀಯ ಹಿಂಸಾಚಾರದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾದ ಚುರಾಚಂದ್‌ಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ನಂತರ ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ 1,200 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಹಾಗೇ, ಮಣಿಪುರದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳ ಮತ್ತು ಚುನಾವಣೆ ನಡೆಯಲಿರುವ ಬಿಹಾರಕ್ಕೆ ಹೋಗುವ ಮೊದಲು ಮಿಜೋರಾಂ ಮತ್ತು ಅಸ್ಸಾಂ ಸೇರಿದಂತೆ ಇತರ ಈಶಾನ್ಯ ರಾಜ್ಯಗಳಿಗೂ ಭೇಟಿ ನೀಡಲಿದ್ದಾರೆ. ನಾಳೆ ಅವರು ಮಿಜೋರಾಂನಲ್ಲಿ ತಮ್ಮ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ಅಲ್ಲಿ ಅವರು ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಇದರ ನಂತರ ಅವರು ಮಣಿಪುರಕ್ಕೆ ಪ್ರಯಾಣಿಸಲಿದ್ದಾರೆ. ನಾಳೆ ಸಂಜೆ ಪ್ರಧಾನ ಮಂತ್ರಿ ಮೋದಿ ಗುವಾಹಟಿಯಲ್ಲಿ ನಡೆಯಲಿರುವ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಮಳೆಯಿಂದ ಹಾನಿಗೊಳಗಾದ ಉತ್ತರಾಖಂಡಕ್ಕೆ ಪ್ರಧಾನಿ ಮೋದಿ 1,200 ಕೋಟಿ ರೂ.ನೆರವು ಘೋಷಣೆ

ಸೆಪ್ಟೆಂಬರ್ 14ರಂದು ಪ್ರಧಾನ ಮಂತ್ರಿ ಮೋದಿ ಮತ್ತೊಮ್ಮೆ ಅಸ್ಸಾಂನಲ್ಲಿ 18,530 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಪ್ರಮುಖ ಮೂಲಸೌಕರ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮರುದಿನ, ಸೆಪ್ಟೆಂಬರ್ 15ರಂದು ಅವರು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ 16ನೇ ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನ -2025 ಅನ್ನು ಉದ್ಘಾಟಿಸಲಿದ್ದಾರೆ. ನಂತರ ಬಿಹಾರಕ್ಕೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಮಧ್ಯಾಹ್ನ ಪೂರ್ಣಿಯಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!