AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಮಹಿಳಾ ಸಬಲೀಕರಣ ಯೋಜನೆಗಳ ಫಲಾನುಭವಿಗಳಿಗೆ ₹1000 ಕೋಟಿ ವರ್ಗಾವಣೆ ಮಾಡಲಿದ್ದಾರೆ ಮೋದಿ

ಪ್ರಧಾನಿ ಮೋದಿಯವರು ಸ್ವಸಹಾಯ ಗುಂಪುಗಳ (SHGs) ಬ್ಯಾಂಕ್ ಖಾತೆಗೆ ₹ 1,000 ಕೋಟಿಗಳನ್ನು ವರ್ಗಾಯಿಸಲಿದ್ದು ಈ ಗುಂಪುಗಳಲ್ಲಿ 16 ಲಕ್ಷ ಮಹಿಳಾ ಸದಸ್ಯರು ಫಲಾನುಭವಿಗಳಾಗಿದ್ದಾರೆ.

ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಮಹಿಳಾ ಸಬಲೀಕರಣ ಯೋಜನೆಗಳ ಫಲಾನುಭವಿಗಳಿಗೆ ₹1000 ಕೋಟಿ ವರ್ಗಾವಣೆ ಮಾಡಲಿದ್ದಾರೆ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 21, 2021 | 11:25 AM

ಲಖನೌ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ಗೆ (Prayagraj) ಭೇಟಿ ನೀಡಲಿದ್ದು, ಎರಡು ಲಕ್ಷಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಳ್ಳುವ “ವಿನೂತನ ಕಾರ್ಯಕ್ರಮ” ಇದು ಎಂದು ಸರ್ಕಾರ ಹೇಳಿದೆ. ಎರಡು ತಿಂಗಳೊಳಗೆ ಚುನಾವಣೆ ನಡೆಯಲಿರುವ ರಾಜಕೀಯವಾಗಿ ನಿರ್ಣಾಯಕ ರಾಜ್ಯದಲ್ಲಿ ಬಿಜೆಪಿಯ ಪ್ರಚಾರವನ್ನು ಮುನ್ನಡೆಸುತ್ತಿರುವ ಪ್ರಧಾನಿ ಉತ್ತರ ಪ್ರದೇಶದಲ್ಲಿ ಒಂದು ತಿಂಗಳಲ್ಲಿ 10 ದಿನ ಇಲ್ಲಿಯೇ ಕಳೆದಿದ್ದಾರೆ. ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತುಗಳಲ್ಲಿ ಸರ್ಕಾರವು ಈ ಕಾರ್ಯಕ್ರಮವು ‘ಮಹಿಳೆಯರನ್ನು ಸಬಲೀಕರಣಗೊಳಿಸುವ ಪ್ರಧಾನಮಂತ್ರಿಯವರ ದೂರದೃಷ್ಟಿ’ ಎಂದಿದೆ. ಪ್ರಧಾನಿ ಮೋದಿಯವರು ಸ್ವಸಹಾಯ ಗುಂಪುಗಳ (SHGs) ಬ್ಯಾಂಕ್ ಖಾತೆಗೆ  ₹ 1,000 ಕೋಟಿ ವರ್ಗಾಯಿಸಲಿದ್ದು ಈ ಗುಂಪುಗಳಲ್ಲಿ 16 ಲಕ್ಷ ಮಹಿಳಾ ಸದಸ್ಯರು ಫಲಾನುಭವಿಗಳಾಗಿದ್ದಾರೆ.

ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ವರ್ಗಾವಣೆ ಮಾಡಲಾಗುತ್ತಿದೆ. ಇದರರ್ಥ 80,000 ಸ್ವಸಹಾಯ ಸಂಘಗಳು ಪ್ರತಿ ಸ್ವಸಹಾಯ ಸಂಘಕ್ಕೆಗೆ 1.10 ಲಕ್ಷ ರೂಪಾಯಿಗಳ ಸಮುದಾಯ ಹೂಡಿಕೆ ನಿಧಿಯನ್ನು ಸ್ವೀಕರಿಸುತ್ತವೆ ಮತ್ತು 60,000 ಸ್ವಸಹಾಯ ಸಂಘಗಳು ಪ್ರತಿ ಸ್ವಸಹಾಯ ಸಂಘಕ್ಕೆಗೆ 15,000 ರೂಪಾಯಿಗಳ ಆವರ್ತ ನಿಧಿಯನ್ನು ಸ್ವೀಕರಿಸುತ್ತವೆ.

ಇದರ ನಂತರ ಮೋದಿ, 20,000 ಬ್ಯುಸಿನೆಸ್ ಕರೆಸ್ಪಾಂಡೆಂಟ್-ಸಖಿಗಳ ಖಾತೆಗಳಿಗೆ ರೂ 4,000 ರ ಮೊದಲ ತಿಂಗಳ ಸ್ಟೈಫಂಡ್ ಅನ್ನು ವರ್ಗಾಯಿಸುತ್ತಾರೆ. ಇದರ ನಂತರ ಮುಖ್ಯಮಂತ್ರಿ ಕನ್ಯಾ ಸುಮಂಗಲಾ ಯೋಜನೆಯಡಿ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ 20 ಕೋಟಿ ರೂ ವರ್ಗಾವಣೆ ಮಾಡಲಿದ್ದಾರೆ. ಈ ಯೋಜನೆಯು ಹೆಣ್ಣು ಮಗುವಿಗೆ ತನ್ನ ಜೀವನದ ವಿವಿಧ ಹಂತಗಳಲ್ಲಿ ಷರತ್ತುಬದ್ಧ ನಿಧಿ ವರ್ಗಾವಣೆಯನ್ನು ಒದಗಿಸುತ್ತದೆ.

ಹೆಣ್ಣು ಮಗುವಿಗೆ ತನ್ನ ಜೀವನದ ವಿವಿಧ ಹಂತಗಳಲ್ಲಿ ಷರತ್ತುಬದ್ಧ ನಗದು ವರ್ಗಾವಣೆಯನ್ನು ಒದಗಿಸುವ ಮುಖ್ಯ ಮಂತ್ರಿ ಕನ್ಯಾ ಸುಮಂಗಲಾ ಯೋಜನೆಯಡಿ 1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ₹ 20 ಕೋಟಿಗೂ ಹೆಚ್ಚು ಹಣವನ್ನು ವರ್ಗಾಯಿಸಲು ಪ್ರಧಾನಿ ಮೋದಿ ಸಜ್ಜಾಗಿದ್ದಾರೆ. “ಒಟ್ಟು ವರ್ಗಾವಣೆಯು ಪ್ರತಿ ಫಲಾನುಭವಿಗೆ ₹ 15,000 ಆಗಿದೆ. ಜನನದ ಸಮಯದಲ್ಲಿ (ರೂ. 2000), ಒಂದು ವರ್ಷದ ಸಂಪೂರ್ಣ ವ್ಯಾಕ್ಸಿನೇಷನ್ (ರೂ. 1000), ತರಗತಿ-1 ರಲ್ಲಿ (ರೂ. 2000), ತರಗತಿಗೆ ಪ್ರವೇಶದ ಮೇಲೆ- VI (ರೂ. 2000), ತರಗತಿ-IX (ರೂ. 3000), X ಅಥವಾ XII ತರಗತಿಯಲ್ಲಿ ಉತ್ತೀರ್ಣರಾದ ನಂತರ ಯಾವುದೇ ಪದವಿ/ಡಿಪ್ಲೊಮಾ ಕೋರ್ಸ್‌ನಲ್ಲಿ (ರೂ. 5000) ಪ್ರವೇಶ ಪಡೆದಾಗ ಹೀಗೆ ವಿವಿಧ ಹಂತಗಳಲ್ಲಿ ಹಣ ವರ್ಗಾವಣೆ ಮಾಡಲಾಗುತ್ತದೆ.

ನಗದು ವರ್ಗಾವಣೆಯ ನಂತರ 202 ಪೂರಕ ಪೌಷ್ಟಿಕಾಂಶ ಉತ್ಪಾದನಾ ಘಟಕಗಳ ಶಂಕುಸ್ಥಾಪನೆ ಸಮಾರಂಭ ನಡೆಯಲಿದೆ. ಈ ಘಟಕಗಳಿಗೆ ಸ್ವಸಹಾಯ ಸಂಘಗಳು ಅನುದಾನ ನೀಡುತ್ತಿದ್ದು, ಪ್ರತಿ ಘಟಕಕ್ಕೆ 1 ಕೋಟಿ ರೂ ನಿರ್ಮಾಣ ಖರ್ಚು ಆಗಲಿದೆ. ಇದು ರಾಜ್ಯದ 600 ಬ್ಲಾಕ್‌ಗಳಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಪೂರಕ ಪೌಷ್ಟಿಕಾಂಶವನ್ನು ಪೂರೈಸಲಿದೆ.

ಉತ್ತರ ಪ್ರದೇಶದಲ್ಲಿ, ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಈ ವರ್ಷ ಪ್ರಚಾರವು ಮಹಿಳಾ ಕೇಂದ್ರಿತ ಪ್ರಯತ್ನಗಳಿಗೆ ಪ್ರಾಮುಖ್ಯತೆಯನ್ನು ನೀಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ‘ಲಡ್ಕಿ ಹೂಂ ಲಡ್ ಸಕ್ತಿ ಹೂಂ (ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ)’ ಎಂಬ ಘೋಷಣೆಯನ್ನು ನೀಡಿದ್ದಾರೆ.

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳೆಯರಿಗೆ ಸಮಾಜದಲ್ಲಿ “ಬದಲಾವಣೆ ತರಲು ಮತ್ತು ಹೆಜ್ಜೆ ಇಡಲು” ಸಹಾಯ ಮಾಡಲು ತನ್ನ ಶೇಕಡಾ 40 ರಷ್ಟು ಟಿಕೆಟ್‌ಗಳನ್ನು ಮೀಸಲಿಡುವುದಾಗಿ ಪಕ್ಷ ಹೇಳಿದೆ. ಮಹಿಳೆಯರಿಗಾಗಿ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿದ್ದು, ಪಕ್ಷವು ಮಹಿಳೆಯರಿಗೆ ಭರವಸೆ ನೀಡಿರುವ 20 ಲಕ್ಷ ಹೊಸ ಉದ್ಯೋಗಗಳಲ್ಲಿ ಶೇ.40 ರಷ್ಟು ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ.

ಸಮಾಜವಾದಿ ಪಕ್ಷವು ಅಖಿಲೇಶ್ ಯಾದವ್ ಮತ್ತು ಅವರ ತಂದೆ ಮತ್ತು ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆಳ್ವಿಕೆಯಲ್ಲಿ ಮಹಿಳೆಯರಿಗಾಗಿ ತನ್ನ ಉಪಕ್ರಮಗಳನ್ನು ಹೈಲೈಟ್ ಮಾಡಲು ಪ್ರಯತ್ನಿಸಿದೆ. “ನೇತಾಜಿ (ಮುಲಾಯಂ ಸಿಂಗ್ ಯಾದವ್) ಮಹಿಳೆಯರಿಗಾಗಿ ಶೌಚಾಲಯಗಳನ್ನು ನಿರ್ಮಿಸಿದರು ಮತ್ತು ಅವರಿಗೆ ಗ್ಯಾಸ್ ಸಿಲಿಂಡರ್ಗಳನ್ನು ನೀಡಿದವರಲ್ಲಿ ಅವರು ಮೊದಲಿಗರು, ಆದರೆ ಅವರ ಫೋಟೋಗಳನ್ನು ಕ್ಲಿಕ್ ಮಾಡಲಿಲ್ಲ. ಆದರೆ, ಪ್ರಸ್ತುತ ಸರ್ಕಾರವು ಅದರ ಚಿತ್ರಗಳನ್ನು ಕ್ಲಿಕ್ ಮಾಡುತ್ತದೆ. ಸಮಾಜವಾದಿ ಪಕ್ಷ ಜನರಿಗಾಗಿ ಕೆಲಸ ಮಾಡಿದೆ. ಆದ್ದರಿಂದ ನೀವು ಸಮಾಜವಾದಿ ಪಕ್ಷದ ಸರ್ಕಾರ ರಚನೆಗೆ ಸಹಾಯ ಮಾಡಬೇಕು ಎಂದು ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: Union Budget 2022: ವಿವಿಧ ಉದ್ಯಮಿಗಳ ಜತೆ ಪೂರ್ವ ಬಜೆಟ್​ ಸಂವಾದ ನಡೆಸಿದ ಪ್ರಧಾನಿ ಮೋದಿ; ಹೂಡಿಕೆ ಉತ್ತೇಜನಕ್ಕೆ ಸಿಇಒಗಳಿಂದ ಸಲಹೆ

Published On - 11:03 am, Tue, 21 December 21

ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ