AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು, ಕೇರಳ ರಾಜ್ಯಗಳಿಗೆ ಇಂದು ಪ್ರಧಾನಿ ಭೇಟಿ.. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

PM Narendra Modi | ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡೂ ರಾಜ್ಯಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ತಮಿಳುನಾಡು, ಕೇರಳ ರಾಜ್ಯಗಳಿಗೆ ಇಂದು ಪ್ರಧಾನಿ ಭೇಟಿ.. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಪ್ರಧಾನಮಂತ್ರಿ ನರೇಂದ್ರ ಮೋದಿ
ಆಯೇಷಾ ಬಾನು
|

Updated on:Feb 14, 2021 | 9:02 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಎರಡೂ ರಾಜ್ಯಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದೇ ವೇಳೆ ಹಲವು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಅರ್ಜುನ್ ಮಾರ್ಕ್ 1a ಯುದ್ಧ ಟ್ಯಾಂಕ್ arjun mark 1a tank ಅನ್ನು ಸೈನ್ಯಕ್ಕೆ ಹಸ್ತಾಂತರಿಸಲಿದ್ದಾರೆ. ಇಂದು ಬೆಳಗ್ಗೆ 10.35ಕ್ಕೆ ಚೆನ್ನೈಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ ಇಂದು ಸುಮಾರು ₹8,126 ಕೋಟಿಯ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ವನ್ನಾರ್‌ಪೇಟೆ-ವಿಮ್ಕೋ ನಗರ್ ಮೆಟ್ರೋ ರೈಲಿಗೆ ಚಾಲನೆ ಸಿಗಲಿದೆ. ಬಳಿಕ ತಮಿಳುನಾಡು ಸಿಎಂ ಸೇರಿ ಕೆಲ ಮುಖಂಡರ ಜತೆ ಚರ್ಚೆ ನಡೆಸಲಿದ್ದಾರೆ. ಈ ವೇಳೆ ಚುನಾವಣಾ ಮೈತ್ರಿ, ವಿ.ಕೆ.ಶಶಿಕಲಾ ಚೆನ್ನೈಗೆ ಬಂದಿರುವ ವಿಚಾರ, ಸದ್ಯದ ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ಸಂಬಂಧ ಮಾತುಕಥೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಮಧ್ಯಾಹ್ನ 1.35ಕ್ಕೆ ಕೊಚ್ಚಿಗೆ ತೆರಳಲಿದ್ದಾರೆ.

ಇಂದು ತಮಿಳುನಾಡು ಮತ್ತು ಕೇರಳದಲ್ಲಿ ಅನೇಕ ಬೆಳವಣೆಗೆಗಳು ನಡೆಯಲಿವೆ. ಆತ್ಮ ನಿರ್ಭರ ಭಾರತ ಯೋಜನೆಯ ಮಹತ್ವವನ್ನು ಈಡೇರಿಸುವ ವೇಗವನ್ನು ಹೆಚ್ಚಿಸುವ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಸಿಗಲಿದೆ. ಈ ಯೋಜನೆಗಳು ನಮ್ಮ ನಾಗರಿಕರಿಗೆ ‘Ease of Living’ ಅನ್ನು ಹೆಚ್ಚಿಸುತ್ತದೆ ಎಂದು ಮೋದಿ ತಮಿಳು, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 15ಕ್ಕೆ ಏರಿಕೆ, ಪ್ರಧಾನಿ ನರೇಂದ್ರ ಮೋದಿ ಸಂತಾಪ

Published On - 8:49 am, Sun, 14 February 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!