AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.12ರಂದು ಉತ್ತರಾಖಂಡಕ್ಕೆ ಪ್ರಧಾನಿ ಮೋದಿ ಭೇಟಿ, 4200 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ

ಅಕ್ಟೋಬರ್ 12ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಥೋರಗಢದಲ್ಲಿ ಸುಮಾರು 4200 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ, ಸೇನೆ, ಐಟಿಬಿಪಿ ಮತ್ತು ಬಿಆರ್​ಒ ಸಿಬ್ಬಂದಿಯೊಂದಿಗೆ ಹಾಗೂ ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲು ಗುಂಜಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

ಅ.12ರಂದು ಉತ್ತರಾಖಂಡಕ್ಕೆ ಪ್ರಧಾನಿ ಮೋದಿ ಭೇಟಿ, 4200 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ
ಅಕ್ಟೋಬರ್ 12ರಂದು ಉತ್ತರಾಖಂಡಕ್ಕೆ ಪ್ರಧಾನಿ ಮೋದಿ ಭೇಟಿImage Credit source: FILE PHOTO
Follow us
Rakesh Nayak Manchi
|

Updated on: Oct 10, 2023 | 10:50 PM

ಡೆಹ್ರಡೂನ್, ಅ.10: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಅಕ್ಟೋಬರ್ 12 ರಂದು ಉತ್ತರಾಖಂಡಕ್ಕೆ (Uttarakhand) ಭೇಟಿ ನೀಡಲಿದ್ದಾರೆ. ಪಿಥೋರಗಢದಲ್ಲಿ ಸುಮಾರು 4200 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಅವರು, ಗುಂಜಿ ಗ್ರಾಮಕ್ಕೆ ಭೇಟಿ ನೀಡಿ ಸೇನೆ, ಐಟಿಬಿಪಿ ಮತ್ತು ಬಿಆರ್​ಒ ಸಿಬ್ಬಂದಿಯೊಂದಿಗೆ ಹಾಗೂ ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲಿದ್ದಾರೆ.

ಬೆಳಿಗ್ಗೆ 8:30 ರ ಸುಮಾರಿಗೆ ಪಿಥೋರಗಡ್ ಜಿಲ್ಲೆಯ ಜೊಲ್ಲಿಂಗ್ಕಾಂಗ್​ಗೆ ತಲುಪಲಿರುವ ಪ್ರಧಾನಿ ಮೋದಿ, ಅಲ್ಲಿ ಪಾರ್ವತಿ ಕುಂಡದಲ್ಲಿ ಪೂಜೆ ಮತ್ತು ದೇವರ ದರ್ಶನ ಮಾಡಲಿದ್ದಾರೆ. ನಂತರ ಪವಿತ್ರ ಆದಿಕೈಲಾಸಕ್ಕೂ ತೆರಳಲಿದ್ದಾರೆ. ಈ ಪ್ರದೇಶವು ಆಧ್ಯಾತ್ಮಿಕ ಪ್ರಾಮುಖ್ಯತೆ ಮತ್ತು ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ.

ಬೆಳಿಗ್ಗೆ 9:30 ರ ಸುಮಾರಿಗೆ ಪಿಥೋರಗಡ್ ಜಿಲ್ಲೆಯ ಗುಂಜಿ ಗ್ರಾಮಕ್ಕೆ ತಲುಪಲಿರುವ ಪ್ರಧಾನಿ, ಅಲ್ಲಿ ಅವರು ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಸ್ಥಳೀಯ ಕಲೆ ಮತ್ತು ಉತ್ಪನ್ನಗಳ ಪ್ರದರ್ಶನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಸೇನೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮತ್ತು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್​ಒ) ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಸ್ತಾಪಿಸಲಾದ ಯೋಜನೆಗಳ ಪ್ರಗತಿ ಪರಿಶೀಲಿಸಿದ ಮೋದಿ

ಮಧ್ಯಾಹ್ನ 12 ಗಂಟೆಗೆ ಅಲ್ಮೋರಾ ಜಿಲ್ಲೆಯ ಜಾಗೇಶ್ವರಕ್ಕೆ ತಲುಪಲಿರುವ ಮೋದಿ, ಅಲ್ಲಿ ಜಾಗೇಶ್ವರ ಧಾಮದಲ್ಲಿ ಪೂಜೆ ಮತ್ತು ದೇವರ ದರ್ಶನ ಪಡೆಯಲಿದ್ದಾರೆ. ಸುಮಾರು 6200 ಅಡಿ ಎತ್ತರದಲ್ಲಿರುವ ಜಾಗೇಶ್ವರ ಧಾಮ, ಸುಮಾರು 224 ಕಲ್ಲಿನ ದೇವಾಲಯಗಳನ್ನು ಒಳಗೊಂಡಿದೆ.

ನಂತರ ಮಧ್ಯಾಹ್ನ 2:30 ರ ಸುಮಾರಿಗೆ ಪಿಥೋರಗಢಕ್ಕೆ ತಲುಪಲಿರುವ ಪ್ರಧಾನಿ, ಅಲ್ಲಿ ಗ್ರಾಮೀಣಾಭಿವೃದ್ಧಿ, ರಸ್ತೆ, ವಿದ್ಯುತ್, ನೀರಾವರಿ, ಕುಡಿಯುವ ನೀರು, ತೋಟಗಾರಿಕೆ, ಶಿಕ್ಷಣ, ಆರೋಗ್ಯ ಮತ್ತು ವಿಪತ್ತು ನಿರ್ವಹಣೆ ಮುಂತಾದ ಕ್ಷೇತ್ರಗಳಲ್ಲಿ ಸುಮಾರು 4200 ಕೋಟಿ ರೂ.ಗಳ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಮಂತ್ರಿಯವರು ಉದ್ಘಾಟಿಸಲಿರುವ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿರುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (PMGSY) ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಲಾದ 76 ಗ್ರಾಮೀಣ ರಸ್ತೆಗಳು ಮತ್ತು 25 ಸೇತುವೆಗಳು ಸೇರಿವೆ.

ಒಂಬತ್ತು ಜಿಲ್ಲೆಗಳಲ್ಲಿ ಬಿಡಿಒ ಕಚೇರಿಗಳ 15 ಕಟ್ಟಡಗಳು, ಕೇಂದ್ರ ರಸ್ತೆ ನಿಧಿಯಡಿ ನಿರ್ಮಿಸಲಾದ ಮೂರು ರಸ್ತೆಗಳಾದ ಕೌಸಾನಿ ಬಾಗೇಶ್ವರ ರಸ್ತೆ, ಧಾರಿ-ದೌಬಾ-ಗಿರಿಚೇನಾ ರಸ್ತೆ ಮತ್ತು ನಾಗಲ-ಕಿಚ್ಚ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎರಡು ರಸ್ತೆಗಳಾದ ಅಲ್ಮೋರಾ ಪೆಟ್ಶಾಲ್ – ಪನುವಾನೌಲಾ – ದಾನ್ಯಾ (ಎನ್ಎಚ್ 309 ಬಿ) ಮತ್ತು ತನಕ್ಪುರ್-ಚಲ್ತಿ (ಎನ್ಎಚ್ 125) ಅನ್ನು ಮೇಲ್ದರ್ಜೆಗೇರಿಸುವುದು ಸೇರಿವೆ.

ಕುಡಿಯುವ ನೀರಿಗೆ ಸಂಬಂಧಿಸಿದ ಮೂರು ಯೋಜನೆಗಳಾದ 38 ಪಂಪಿಂಗ್ ಕುಡಿಯುವ ನೀರಿನ ಯೋಜನೆಗಳು, 419 ಗುರುತ್ವಾಕರ್ಷಣೆ ಆಧಾರಿತ ನೀರು ಸರಬರಾಜು ಯೋಜನೆಗಳು ಮತ್ತು ಮೂರು ಕೊಳವೆ ಬಾವಿ ಆಧಾರಿತ ನೀರು ಸರಬರಾಜು ಯೋಜನೆಗಳು ಸೇರಿವೆ.

ಪಿಥೋರಗಢದಲ್ಲಿ ಥಾರ್ಕೋಟ್ ಕೃತಕ ಸರೋವರ, 132 ಕೆವಿ ಪಿಥೋರಗಡ್-ಲೋಹಘಾಟ್ (ಚಂಪಾವತ್) ವಿದ್ಯುತ್ ಪ್ರಸರಣ ಮಾರ್ಗ, ಉತ್ತರಾಖಂಡ ಮತ್ತು ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (USDMA) ಕಟ್ಟಡಕ್ಕೆ ಅಡ್ಡಲಾಗಿ 39 ಸೇತುವೆಗಳನ್ನು ವಿಶ್ವ ಬ್ಯಾಂಕ್ ನೆರವಿನ ಉತ್ತರಾಖಂಡ ವಿಪತ್ತು ಪುನಶ್ಚೇತನ ಯೋಜನೆಯಡಿ ನಿರ್ಮಿಸಲಾಗಿದೆ.

ಇದನ್ನೂ ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರೊಂದಿಗೆ ಪ್ರಧಾನಿ ಮೋದಿ ದೂರವಾಣಿಯಲ್ಲಿ ಮಾತುಕತೆ

ಶಂಕುಸ್ಥಾಪನೆ ನೆರವೇರಿಸಲಿರುವ ಯೋಜನೆಗಳಲ್ಲಿ 21,398 ಪಾಲಿಹೌಸ್ ನಿರ್ಮಾಣದ ಯೋಜನೆಯೂ ಸೇರಿದೆ. ಇದು ಹೂವುಗಳು ಮತ್ತು ತರಕಾರಿಗಳ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಅವುಗಳ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಹೆಚ್ಚಿನ ಸಾಂದ್ರತೆಯ ಸೇಬು ತೋಟಗಳ ಕೃಷಿಗಾಗಿ ಒಂದು ಯೋಜನೆ, ಎನ್ಎಚ್ ರಸ್ತೆ ಮೇಲ್ದರ್ಜೆಗೇರಿಸುವ ಐದು ಯೋಜನೆಗಳು, ರಾಜ್ಯದಲ್ಲಿ ವಿಪತ್ತು ಸನ್ನದ್ಧತೆ ಮತ್ತು ಸ್ಥಿತಿಸ್ಥಾಪಕತ್ವಕ್ಕಾಗಿ ಅನೇಕ ಕ್ರಮಗಳು, ಸೇತುವೆಗಳ ನಿರ್ಮಾಣ, ಡೆಹ್ರಾಡೂನ್​ನಲ್ಲಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು ಮೇಲ್ದರ್ಜೆಗೇರಿಸುವುದು, ನೈನಿತಾಲ್​ನ ಬಲಿಯಾನಾಲಾದಲ್ಲಿ ಭೂಕುಸಿತವನ್ನು ತಡೆಗಟ್ಟುವ ಕ್ರಮಗಳು, ಆರೋಗ್ಯ ಮತ್ತು ಅರಣ್ಯಕ್ಕೆ ಸಂಬಂಧಿಸಿದ ಇತರ ಮೂಲಸೌಕರ್ಯಗಳ ಸುಧಾರಣೆ, ರಾಜ್ಯದ 20 ಮಾದರಿ ಪದವಿ ಕಾಲೇಜುಗಳಲ್ಲಿ ಹಾಸ್ಟೆಲ್ ಮತ್ತು ಕಂಪ್ಯೂಟರ್ ಲ್ಯಾಬ್​ಗಳ ಅಭಿವೃದ್ಧಿ ಕಾರ್ಯಗಳಿಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಲ್ಮೋರಾದ ಸೋಮೇಶ್ವರದಲ್ಲಿ 100 ಹಾಸಿಗೆಗಳ ಉಪ ಜಿಲ್ಲಾ ಆಸ್ಪತ್ರೆ, ಚಂಪಾವತ್ನಲ್ಲಿ 50 ಹಾಸಿಗೆಗಳ ಆಸ್ಪತ್ರೆ ಘಟಕ, ನೈನಿತಾಲ್​ನ ಹಲ್ದ್ವಾನಿ ಕ್ರೀಡಾಂಗಣದಲ್ಲಿರುವ ಆಸ್ಟ್ರೋಟರ್ಫ್ ಹಾಕಿ ಮೈದಾನ, ರುದ್ರಪುರದ ವೆಲೊಡ್ರೋಮ್ ಕ್ರೀಡಾಂಗಣ, ಜಾಗೇಶ್ವರ ಧಾಮ್ (ಅಲ್ಮೋರಾ), ಹಾತ್ ಕಾಳಿಕಾ (ಪಿಥೋರಗಡ್) ಮತ್ತು ನೈನಾ ದೇವಿ (ನೈನಿತಾಲ್) ದೇವಾಲಯಗಳು ಸೇರಿದಂತೆ ದೇವಾಲಯಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಮನಸ್ಖಂಡ್ ಮಂದಿರ ಮಾಲಾ ಮಿಷನ್ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ