AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಉತ್ತರಾಖಂಡ್​ಗೆ ಪ್ರಧಾನಿ ಮೋದಿ ಭೇಟಿ; 17,500 ಕೋಟಿ ರೂ.ವೆಚ್ಚದ 23 ಯೋಜನೆಗಳಿಗೆ ಚಾಲನೆ

PM Modi: ರಾಜ್ಯಾದ್ಯಂತ ಪ್ರಧಾನಮಂತ್ರಿ ಗ್ರಾಮ ಸಡಕ್​ ಯೋಜನೆಯಡಿ ರಸ್ತೆ ಸುಧಾರಣೆ, ವಿಸ್ತರಣೆ ಸಂಬಂಧಪಟ್ಟ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸುವರು. 133 ಗ್ರಾಮಗಳ 1157 ಕಿಮೀ ಉದ್ದರ ರಸ್ತೆ ನಿರ್ಮಾಣಕ್ಕೆ ಅಡಿಗಲ್ಲ ಸ್ಥಾಪಿಸಲಿದ್ದಾರೆ.

ಇಂದು ಉತ್ತರಾಖಂಡ್​ಗೆ ಪ್ರಧಾನಿ ಮೋದಿ ಭೇಟಿ; 17,500 ಕೋಟಿ ರೂ.ವೆಚ್ಚದ 23 ಯೋಜನೆಗಳಿಗೆ ಚಾಲನೆ
ನರೇಂದ್ರ ಮೋದಿ
TV9 Web
| Edited By: |

Updated on:Dec 30, 2021 | 10:22 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರು ಇಂದು ಉತ್ತರಾಖಂಡ್(Uttarakhand)​​ಗೆ ಭೇಟಿ ನೀಡಲಿದ್ದು, ಅಲ್ಲಿ ಸುಮಾರು 17,500 ಕೋಟಿ ರೂಪಾಯಿ ಮೌಲ್ಯದ 23 ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೇ, ಪೂರ್ಣಗೊಂಡ ಕಾಮಗಾರಿಗಳ್ನು ಉದ್ಘಾಟಿಸಲಿದ್ದಾರೆ. ಒಟ್ಟಾರೆ 23 ಯೋಜನೆಗಳಲ್ಲಿ17 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ 17 ಯೋಜನೆಗಳು 14,100 ಕೋಟಿ ರೂಪಾಯಿ ಮೌಲ್ಯದ್ದಾಗಿವೆ.  ರಾಜ್ಯಾದ್ಯಂತ ವ್ಯಾಪಕ ಕ್ಷೇತ್ರಗಳ ಅಭಿವೃದ್ಧಿ ಯೋಜನೆಗಳು ಇವ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.  ಅಂದರೆ ನೀರಾವರಿ, ರಸ್ತೆ, ವಸತಿ, ಆರೋಗ್ಯ ಮೂಲಸೌಕರ್ಯ, ಉದ್ಯಮ, ಸ್ವಚ್ಛತೆ, ಕುಡಿಯುವ ನೀರು ಪೂರೈಕೆ ಸಂಬಂಧಿ ಯೋಜನೆಗಳಿಗೆ ಇಂದು ಪ್ರಧಾನಿ ಚಾಲನೆ ನೀಡಲಿದ್ದಾರೆ. ಹಾಗೇ,  ವಿಸ್ತರಣೆಗೊಂಡ ರಸ್ತೆಗಳು, ಪಿಥೋರ್​ಗಢ್​​ನಲ್ಲಿ ಜಲವಿದ್ಯುತ್​ ಯೋಜನೆ, ನೈನಿತಾಲ್​​ನಲ್ಲಿ ಒಳಚರಂಡಿ ಸುಧಾರಣೆ ಜಾಲ ಸೇರಿ ಒಟ್ಟು 6 ಯೋಜನೆಗಳನ್ನು ಪ್ರಧಾನಿ ಮೋದಿ ಇಂದು ಉದ್ಘಾಟನೆ ಮಾಡಲಿದ್ದಾರೆ. ಇವು ಒಟ್ಟು 3400 ಕೋಟಿ ರೂ.ವೆಚ್ಚದ ಯೋಜನೆಗಳು. 

ಹಾಗೇ, ಇಂದು ಪ್ರಧಾನಿ ಮೋದಿಯವರು, 5750 ಕೋಟಿ ರೂಪಾಯಿ ವೆಚ್ಚದ ಲಖ್ವಾರ್​ ವಿವಿಧೋದ್ದೇಶ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.  ಈ ಯೋಜನೆ ಮೊದಲ ಬಾರಿಗೆ 1976ರಲ್ಲಿ ರೂಪಿತಗೊಂಡಿತ್ತು. ಆದರೆ ಮುಂದೆ ಹೋಗಿರಲಿಲ್ಲ. ಹೀಗೆ ಬಹುಕಾಲದಿಂದ ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸುವುದು ಪ್ರಧಾನಿ ಮೋದಿಯವರ ಮೊದಲ ಆದ್ಯತೆಯಾಗಿದೆ ಎಂದು ಪಿಎಂಒ ತಿಳಿಸಿದೆ. ಈ ಲಖ್ವಾರ್​ ವಿವಿಧೋದ್ದೇಶ ಯೋಜನೆ ಸುಮಾರು 34 ಸಾವಿರ ಹೆಕ್ಟೇರ್​ ಹೆಚ್ಚುವರಿ ಭೂಮಿಗೆ ನೀರಾವರಿ ಒದಗಿಸಲಿದೆ. ಸುಮಾರು 300 ಮೆಗಾವ್ಯಾಟ್​ ಜಲವಿದ್ಯುತ್ ಉತ್ಪನ್ನ ಮಾಡಲಿದೆ. ಹಾಗೇ, ಉತ್ತರಾಖಂಡ್​, ಉತ್ತರಪ್ರದೇಶ, ಹರ್ಯಾಣ, ದೆಹಲಿ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಿದೆ.

ಇದರೊಂದಿಗೆ ರಾಜ್ಯಾದ್ಯಂತ ಪ್ರಧಾನಮಂತ್ರಿ ಗ್ರಾಮ ಸಡಕ್​ ಯೋಜನೆಯಡಿ ರಸ್ತೆ ಸುಧಾರಣೆ, ವಿಸ್ತರಣೆ ಸಂಬಂಧಪಟ್ಟ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸುವರು. 133 ಗ್ರಾಮಗಳ 1157 ಕಿಮೀ ಉದ್ದರ ರಸ್ತೆ ನಿರ್ಮಾಣಕ್ಕೆ ಅಡಿಗಲ್ಲ ಸ್ಥಾಪಿಸಲಿದ್ದಾರೆ. ಇದರ ವೆಚ್ಚ 625 ಕೋಟಿ ರೂಪಾಯಿ.  ಇದರೊಂದಿಗೆ 450 ಕೋಟಿ ರೂ.ವೆಚ್ಚದ 151 ಸೇತುವೆಗಳ ನಿರ್ಮಾಣಕ್ಕೂ ಪ್ರಧಾನಿ ಮೋದಿ ಅಡಿಗಲ್ಲು ಸ್ಥಾಪನೆ ಮಾಡುವರು.  ಹಾಗೇ, ಆರೋಗ್ಯ ಕ್ಷೇತ್ರದ ಸುಧಾರಣೆಯ ಆದ್ಯತೆಯಾಗಿ ಉಧಾಂನಗರದಲ್ಲಿ ಏಮ್ಸ್​ ರಿಶಿಕೇಶ ಸೆಟಲೈಟ್​ ಕೇಂದ್ರ ಮತ್ತು ಪಿಥೋರ್​ಗಡ್​​ನಲ್ಲಿ ಜಗಜೀವನ್​ ರಾಮ್​ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.  ವಸತಿ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ 2400 ಮನೆಗಳ ನಿರ್ಮಾಣಕ್ಕೆ ಅವರು ಅಡಿಗಲ್ಲು ಸ್ಥಾಪಿಸುವರು.  ಹಾಗೇ, 13 ಜಿಲ್ಲೆಗಳಲ್ಲಿ 73 ನೀರು ಪೂರೈಕೆ ಯೋಜನೆಗಳಿಗೂ ಚಾಲನೆ ನೀಡಲಿದ್ದಾರೆ.  ಕಾಶಿಪುರ್​​ನಲ್ಲಿ 41 ಎಕರೆ ಅರೋಮಾ ಪಾರ್ಕ್​ ಮತ್ತು ಸಿತಾರ್​ಗಂಜ್​​ನಲ್ಲಿ 40 ಎಕರೆ ವಿಸ್ತೀರ್ಣದ ಪ್ಲಾಸ್ಟಿಕ್​ ಇಂಡಸ್ಟ್ರಿಯಲ್​ ಪಾರ್ಕ್​​ಗೆ ಕೂಡ ಅಡಿಗಲ್ಲು ಸ್ಥಾಪಿಸುವರು. ಬರುವ ವರ್ಷದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಈ ಭೇಟಿ ಮತ್ತು ಅತ್ಯಂತ ದೊಡ್ಡ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುತ್ತಿರುವುದು ತುಂಬ ಮಹತ್ವದ್ದಾಗಿದೆ.

ಇದನ್ನೂ ಓದಿ: Love You Rachchu: ‘ಲವ್​ ಯೂ ರಚ್ಚು’ನಲ್ಲಿ ಮಿಲನಾ, ಡಾರ್ಲಿಂಗ್ ಕೃಷ್ಣಗೆ ಇಷ್ಟ ಆಗಿದ್ದೇನು? ವಿಡಿಯೋ ನೋಡಿ

Published On - 10:10 am, Thu, 30 December 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು