AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಜವಾದ್​ ಚಂಡಮಾರುತ ಭೀತಿ: ಸಂಬಂಧಪಟ್ಟ ಅಧಿಕಾರಿಗಳೊಟ್ಟಿಗೆ ಉನ್ನತ ಸಭೆ ನಡೆಸಿದ ಪ್ರಧಾನಿ ಮೋದಿ

Cyclone Jawad: ಜವಾದ್ ಚಂಡಮಾರುತ ಡಿಸೆಂಬರ್ 4ರಂದು ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಮೊದಲು ಒಡಿಶಾದ ಕರಾವಳಿ ತೀರ ತಲುಪಲಿದೆ.

ಭಾರತಕ್ಕೆ ಜವಾದ್​ ಚಂಡಮಾರುತ ಭೀತಿ: ಸಂಬಂಧಪಟ್ಟ ಅಧಿಕಾರಿಗಳೊಟ್ಟಿಗೆ ಉನ್ನತ ಸಭೆ ನಡೆಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Dec 02, 2021 | 3:18 PM

Share

ದೆಹಲಿ: ಭಾರತಕ್ಕೆ ಡಿಸೆಂಬರ್​ 4ರಂದು ಜವಾದ್​ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿರುವ ಬೆನ್ನಲ್ಲೇ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದಾಗ ಪಿಟಿಐ ವರದಿ ಮಾಡಿದೆ. ಚಂಡಮಾರುತದ ಪ್ರಭಾವ, ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಇಂದು ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಭೆಯಲ್ಲಿ ವಿವರಿಸಿದ್ದಾರೆ ಎನ್ನಲಾಗಿದೆ.  

ಈ ಜವಾದ್ ಚಂಡಮಾರುತ ಡಿಸೆಂಬರ್ 4ರಂದು ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಮೊದಲು ಒಡಿಶಾದ ಕರಾವಳಿ ತೀರ ತಲುಪಲಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ, ಚಂಡಮಾರುತದ ಪ್ರಭಾವ ಹೆಚ್ಚಾಗಿ ಆಗಲಿರುವ  13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಮಾಡಿದ್ದು, ಅಲ್ಲಿನ ಜನರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಹಾಗೇ, ರಕ್ಷಣಾ ಕಾರ್ಯಾಚರಣೆ ಆಗಮಿಸುವಂತೆ ಎನ್​ಡಿಆರ್​ಎಫ್​, ಒಡಿಆರ್​ಎಎಫ್​ಗಳನ್ನೂ ವಿನಂತಿಸಿದೆ. ಇದೀಗ ಮೋದಿಯವರು ಒಟ್ಟಾರೆ ವಿಷಯಗಳ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಜವಾದ್ ಪ್ರಭಾವದಿಂದ ಡಿಸೆಂಬರ್ 4 ಮತ್ತು 5ರಂದು ಆಂಧ್ರ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ. ಅದನ್ನು ಹೊರತುಪಡಿಸಿ ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಾದ ಕೋಲ್ಕತ್ತ, ದಕ್ಷಿಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳು, ಮಿಡ್ನಾಪುರದ ಪೂರ್ವ ಮತ್ತು ಪಶ್ಚಿಮ ಪ್ರದೇಶಗಳು, ಹೂಗ್ಲಿ, ನಾದಿಯಾ ಮತ್ತು ಝಾರ್​ಗ್ರಾಮ್​​ಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Junior Hockey World Cup 2021: ಬೆಲ್ಜಿಯಂ ಮಣಿಸಿ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟ ಭಾರತ! ಮುಂದಿನ ಎದುರಾಳಿ ಜರ್ಮನಿ

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ