AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಮೆಟ್ರೋ ಹತ್ತಿ ಪ್ರಯಾಣಿಕರ ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ ಮೆಟ್ರೋ ಲೈನ್ 3ರ BKC ಮತ್ತು ಆರೆ ವಿಭಾಗದ ನಡುವೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ, ವಿದ್ಯಾರ್ಥಿಗಳು ಮತ್ತು ಇತರರೊಂದಿಗೆ ಸಂವಹನ ನಡೆಸಿದರು. ಅವರು ಸಾಂತಾಕ್ರೂಜ್ ನಿಲ್ದಾಣದವರೆಗೆ ಮೆಟ್ರೋದಲ್ಲಿ ತೆರಳಿ ಮತ್ತೆ ಹಿಂತಿರುಗಿದರು.

ಮುಂಬೈ ಮೆಟ್ರೋ ಹತ್ತಿ ಪ್ರಯಾಣಿಕರ ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಮೆಟ್ರೋ ಹತ್ತಿ ಪ್ರಯಾಣಿಕರ ಜೊತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: Oct 05, 2024 | 10:15 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಮುಂಬೈ ಮೆಟ್ರೋ ಲೈನ್ 3ರ BKCಯಿಂದ ಆರೆ ಮಾರ್ಗವನ್ನು ಉದ್ಘಾಟಿಸಿದರು. ಸಾಂತಾಕ್ರೂಜ್ ನಿಲ್ದಾಣದವರೆಗೆ ಮೆಟ್ರೋದಲ್ಲಿ ಸಂಚರಿಸಿದ ಮೋದಿ ಮತ್ತೆ ಹಿಂತಿರುಗಿದರು. ಈ ವೇಳೆ ಮೆಟ್ರೋದಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಜೊತೆ ಮಾತುಕತೆ ನಡೆಸಿದರು.

ಮೆಟ್ರೋದಲ್ಲಿ ಪ್ರಧಾನಿ ಮೋದಿ ಅವರು ವಿದ್ಯಾರ್ಥಿಗಳು, ಮಹಾರಾಷ್ಟ್ರ ಸರ್ಕಾರದ ಲಡ್ಕಿ ಬಹಿನ್ ಯೋಜನೆಯ ಫಲಾನುಭವಿಗಳು ಮತ್ತು ಅಂಡರ್​ಗ್ರೌಂಡ್ ಮಾರ್ಗವನ್ನು ನಿರ್ಮಿಸುವ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಮಹಾರಾಷ್ಟ್ರ ಸಿಎಂಒ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳು, ಮೆಟ್ರೋ ಕಾರ್ಮಿಕರು ಮತ್ತು ಇತರರೊಂದಿಗೆ ಸಂವಾದ ನಡೆಸುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ: ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಮೋದಿ ಇಂದು ಪ್ರಯಾಣಿಕರಿಗೆ ಪ್ರಯಾಣದ ಅನುಭವವನ್ನು ಹೆಚ್ಚಿಸಲು ವಿನ್ಯಾಸಗೊಳಿಸಿದ MetroConnect3 ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ಅಂಡರ್​ಗ್ರೌಂಡ್ ಮೆಟ್ರೋ ಪ್ರಯಾಣದ ಅದ್ಭುತ ಫೋಟೋಗಳನ್ನು ಒಳಗೊಂಡಿರುವ ಕಾಫಿ ಟೇಬಲ್ ಪುಸ್ತಕವನ್ನು ಸಹ ಅನಾವರಣಗೊಳಿಸಿದರು.

ಅವರೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್, ಕೇಂದ್ರ ಸಚಿವ ಮನೋಹರ್ ಲಾಲ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಸಹ ಇದ್ದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮೆಟ್ರೋ ಲೈನ್‌ಗೆ ಚಾಲನೆ ನೀಡಿದ ಪ್ರಧಾನಿ ಮೋದಿ, ಹಲವು ಯೋಜನೆಗಳಿಗೆ ಶಂಕು ಸ್ಥಾಪನೆ

ಮುಂಬೈ ಮೆಟ್ರೋ ಲೈನ್ 3ರ ಮೊದಲ ಹಂತದಿಂದಾಗಿ 6.5 ಲಕ್ಷ ವಾಹನ ಟ್ರಿಪ್‌ಗಳನ್ನು ಕಡಿತಗೊಳಿಸಲಾಗುವುದು. ಇದರಿಂದ ರಸ್ತೆಗಳಲ್ಲಿನ ದಟ್ಟಣೆಯು ಶೇ.35ರಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಈ ಮಾರ್ಗದಿಂದಾಗಿ ಸುಮಾರು 3.54 ಲಕ್ಷ ಲೀಟರ್ ಇಂಧನ ಉಳಿತಾಯವಾಗುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್