AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಡೆನ್ಮಾರ್ಕ್​​ನಲ್ಲಿ ಡೋಲು ಬಾರಿಸಿದ ಪ್ರಧಾನಿ ನರೇಂದ್ರ ಮೋದಿ; ಭಾರತೀಯರಿಂದ ಭರ್ಜರಿ ಸ್ವಾಗತ

ನಾವೆಲ್ಲರೂ ಒಟ್ಟಾಗಿ ಈ ಭೂಮಿಯ ಮೇಲಿನ ಸಮಸ್ಯೆಗಳಿಗೆ  ಪರಿಹಾರ ಕಂಡುಕೊಳ್ಳಬೇಕು. ಪರಿಸರಕ್ಕೆ ಪೂರಕವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಬಳಕೆ ಮಾಡಿ-ಹಾಗೇ ಬಿಸಾಡುವ ನಮ್ಮ ಕ್ರಮ ಈ ಭೂಮಿಗೆ ಮಾರಕವಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

Video: ಡೆನ್ಮಾರ್ಕ್​​ನಲ್ಲಿ ಡೋಲು ಬಾರಿಸಿದ ಪ್ರಧಾನಿ ನರೇಂದ್ರ ಮೋದಿ; ಭಾರತೀಯರಿಂದ ಭರ್ಜರಿ ಸ್ವಾಗತ
ಡೋಲು ಬಾರಿಸಿದ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:May 04, 2022 | 10:59 AM

ಡೆನ್ಮಾರ್ಕ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಡೋಲು ಬಾರಿಸುವ ಮೂಲಕ ಗಮನಸೆಳೆದಿದ್ದಾರೆ.  ಮೂರು ದಿನಗಳ ಯುರೋಪ್​ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನಿನ್ನೆ ಜರ್ಮನಿಯಿಂದ ಡೆನ್ಮಾರ್ಕ್​ಗೆ ತೆರಳಿದ್ದಾರೆ. ಅಲ್ಲಿ ಅವರನ್ನು ಭಾರತೀಯ ಮೂಲದವರು ಅದ್ದೂರಿಯಾಗಿ ಸ್ವಾಗತಿಸಿದರು. ಡೋಲು, ಡ್ರಮ್​, ತಾಳಗಳ ವಾದನ ಇತ್ತು.  ಈ ವೇಳೆ ಬೂದು ಬಣ್ಣದ ಉಡುಪು ತೊಟ್ಟಿದ್ದ ಪ್ರಧಾನಿ ಮೋದಿ ತಾವೂ ಕೂಡ ಒಂದು ಕೈಯಲ್ಲಿ ಡೋಲು ಬಾರಿಸಲು ಪ್ರಯತ್ನಿಸಿದ್ದಾರೆ.  ಅದರ ವಿಡಿಯೋಗಳು ವೈರಲ್ ಆಗಿವೆ.

ಪ್ರಧಾನಿ ನರೇಂದ್ರ ಮೋದಿ ಡೆನ್ಮಾರ್ಕ್ ಪ್ರಧಾನಿ  ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ರಾಣಿ ಮಾರ್ಗರೆಥೆ II ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ  ಡೆನ್ಮಾರ್ಕ್​​ನಲ್ಲಿರುವ ಭಾರತೀಯರೊಟ್ಟಿಗೆ ಕೋಪನ್​ಹ್ಯಾಗನ್​​ನಲ್ಲಿ ಸಂವಾದ ನಡೆಸಿದ್ದಾರೆ. ಹಾಗೇ, ಇಲ್ಲಿರುವ ನೀವೆಲ್ಲ ರಾಷ್ಟ್ರದೂತರಂತೆ (ಭಾರತವನ್ನು ಪ್ರತಿನಿಧಿಸುವಂತೆ) ಕೆಲಸ ಮಾಡಬೇಕ ಎಂದು ಭಾರತೀಯ ಮೂಲದವರಿಗೆ ಹೇಳಿದರು. ಡೆನ್ಮಾರ್ಕ್​​ನಲ್ಲಿರುವ ನಿಮ್ಮ ಸ್ನೇಹಿತರಿಗೆ ಭಾರತಕ್ಕೆ ಭೇಟಿ ಕೊಡುವಂತೆ ಹೇಳಿ ಎಂದರು.

ನಾವೆಲ್ಲರೂ ಒಟ್ಟಾಗಿ ಈ ಭೂಮಿಯ ಮೇಲಿನ ಸಮಸ್ಯೆಗಳಿಗೆ  ಪರಿಹಾರ ಕಂಡುಕೊಳ್ಳಬೇಕು. ಪರಿಸರಕ್ಕೆ ಪೂರಕವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಬಳಕೆ ಮಾಡಿ-ಹಾಗೇ ಬಿಸಾಡುವ ನಮ್ಮ ಕ್ರಮ ಈ ಭೂಮಿಗೆ ಮಾರಕವಾಗುತ್ತದೆ. ಎಷ್ಟು ಅಗತ್ಯವಿದೆಯೋ ಅಷ್ಟನ್ನೇ ಬಳಸುವ ಕ್ರಮವನ್ನು ರೂಢಿಸಿಕೊಳ್ಳಬೇಕು. ಜೇಬು ದೊಡ್ಡದಿದೆ ಎಂದು ಅನಗತ್ಯವಾಗಿ ತುಂಬಿಸಿಕೊಳ್ಳಬಾರದು ಎಂದು ಹೇಳಿದರು. ಈ ಮೂಲಕ ಏನನ್ನೂ ವ್ಯರ್ಥ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.  (Source)

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:58 am, Wed, 4 May 22

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ