AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಡೆನ್ಮಾರ್ಕ್​​ನಲ್ಲಿ ಡೋಲು ಬಾರಿಸಿದ ಪ್ರಧಾನಿ ನರೇಂದ್ರ ಮೋದಿ; ಭಾರತೀಯರಿಂದ ಭರ್ಜರಿ ಸ್ವಾಗತ

ನಾವೆಲ್ಲರೂ ಒಟ್ಟಾಗಿ ಈ ಭೂಮಿಯ ಮೇಲಿನ ಸಮಸ್ಯೆಗಳಿಗೆ  ಪರಿಹಾರ ಕಂಡುಕೊಳ್ಳಬೇಕು. ಪರಿಸರಕ್ಕೆ ಪೂರಕವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಬಳಕೆ ಮಾಡಿ-ಹಾಗೇ ಬಿಸಾಡುವ ನಮ್ಮ ಕ್ರಮ ಈ ಭೂಮಿಗೆ ಮಾರಕವಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

Video: ಡೆನ್ಮಾರ್ಕ್​​ನಲ್ಲಿ ಡೋಲು ಬಾರಿಸಿದ ಪ್ರಧಾನಿ ನರೇಂದ್ರ ಮೋದಿ; ಭಾರತೀಯರಿಂದ ಭರ್ಜರಿ ಸ್ವಾಗತ
ಡೋಲು ಬಾರಿಸಿದ ಪ್ರಧಾನಿ ಮೋದಿ
TV9 Web
| Edited By: |

Updated on:May 04, 2022 | 10:59 AM

Share

ಡೆನ್ಮಾರ್ಕ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಡೋಲು ಬಾರಿಸುವ ಮೂಲಕ ಗಮನಸೆಳೆದಿದ್ದಾರೆ.  ಮೂರು ದಿನಗಳ ಯುರೋಪ್​ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನಿನ್ನೆ ಜರ್ಮನಿಯಿಂದ ಡೆನ್ಮಾರ್ಕ್​ಗೆ ತೆರಳಿದ್ದಾರೆ. ಅಲ್ಲಿ ಅವರನ್ನು ಭಾರತೀಯ ಮೂಲದವರು ಅದ್ದೂರಿಯಾಗಿ ಸ್ವಾಗತಿಸಿದರು. ಡೋಲು, ಡ್ರಮ್​, ತಾಳಗಳ ವಾದನ ಇತ್ತು.  ಈ ವೇಳೆ ಬೂದು ಬಣ್ಣದ ಉಡುಪು ತೊಟ್ಟಿದ್ದ ಪ್ರಧಾನಿ ಮೋದಿ ತಾವೂ ಕೂಡ ಒಂದು ಕೈಯಲ್ಲಿ ಡೋಲು ಬಾರಿಸಲು ಪ್ರಯತ್ನಿಸಿದ್ದಾರೆ.  ಅದರ ವಿಡಿಯೋಗಳು ವೈರಲ್ ಆಗಿವೆ.

ಪ್ರಧಾನಿ ನರೇಂದ್ರ ಮೋದಿ ಡೆನ್ಮಾರ್ಕ್ ಪ್ರಧಾನಿ  ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ರಾಣಿ ಮಾರ್ಗರೆಥೆ II ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ  ಡೆನ್ಮಾರ್ಕ್​​ನಲ್ಲಿರುವ ಭಾರತೀಯರೊಟ್ಟಿಗೆ ಕೋಪನ್​ಹ್ಯಾಗನ್​​ನಲ್ಲಿ ಸಂವಾದ ನಡೆಸಿದ್ದಾರೆ. ಹಾಗೇ, ಇಲ್ಲಿರುವ ನೀವೆಲ್ಲ ರಾಷ್ಟ್ರದೂತರಂತೆ (ಭಾರತವನ್ನು ಪ್ರತಿನಿಧಿಸುವಂತೆ) ಕೆಲಸ ಮಾಡಬೇಕ ಎಂದು ಭಾರತೀಯ ಮೂಲದವರಿಗೆ ಹೇಳಿದರು. ಡೆನ್ಮಾರ್ಕ್​​ನಲ್ಲಿರುವ ನಿಮ್ಮ ಸ್ನೇಹಿತರಿಗೆ ಭಾರತಕ್ಕೆ ಭೇಟಿ ಕೊಡುವಂತೆ ಹೇಳಿ ಎಂದರು.

ನಾವೆಲ್ಲರೂ ಒಟ್ಟಾಗಿ ಈ ಭೂಮಿಯ ಮೇಲಿನ ಸಮಸ್ಯೆಗಳಿಗೆ  ಪರಿಹಾರ ಕಂಡುಕೊಳ್ಳಬೇಕು. ಪರಿಸರಕ್ಕೆ ಪೂರಕವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಬಳಕೆ ಮಾಡಿ-ಹಾಗೇ ಬಿಸಾಡುವ ನಮ್ಮ ಕ್ರಮ ಈ ಭೂಮಿಗೆ ಮಾರಕವಾಗುತ್ತದೆ. ಎಷ್ಟು ಅಗತ್ಯವಿದೆಯೋ ಅಷ್ಟನ್ನೇ ಬಳಸುವ ಕ್ರಮವನ್ನು ರೂಢಿಸಿಕೊಳ್ಳಬೇಕು. ಜೇಬು ದೊಡ್ಡದಿದೆ ಎಂದು ಅನಗತ್ಯವಾಗಿ ತುಂಬಿಸಿಕೊಳ್ಳಬಾರದು ಎಂದು ಹೇಳಿದರು. ಈ ಮೂಲಕ ಏನನ್ನೂ ವ್ಯರ್ಥ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.  (Source)

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:58 am, Wed, 4 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್