AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್; ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!

PM Narendra Modi Twitter Account hacked: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್ ಮಾಡಿರುವ ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ. ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು ಸರಿಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್; ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!
ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್
TV9 Web
| Edited By: |

Updated on:Dec 12, 2021 | 6:34 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್ (Hacking) ಮಾಡಿರುವ ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ. ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು (Restored) ಸರಿಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ (PM Narendra Modi Twitter Account) ಸರಿಪಡಿಸಲಾಗಿದೆ. ಈ ಹಿಂದೆ ಮಾಡಿರುವ ಟ್ವೀಟ್ ಪರಿಗಣಿಸದಂತೆ ಸ್ಪಷ್ಟನೆ ನೀಡಲಾಗಿದೆ. ಪ್ರಧಾನಿ ಖಾತೆಯಿಂದ ಲಿಂಕ್ ಶೇರ್ ಆದ್ರೆ ಪರಿಗಣಿಸಬೇಡಿ. ಬಿಟ್ ಕಾಯಿನ್ ಸಂಬಂಧ ಲಿಂಕ್ ಬಂದರೆ ಪರಿಗಣಿಸಬೇಡಿ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವಿಟರ್ ಖಾತೆಯಿಂದ ಸ್ಪಷ್ಟನೆ ನೀಡಲಾಗಿದೆ.

ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್! ರಾತ್ರಿ ಪ್ರಧಾನಿ ಮೋದಿ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಪ್ರಧಾನಿ ಟ್ವಿಟರ್ ಖಾತೆಯಿಂದ ಬಿಟ್ ಕಾಯಿನ್ (Bitcoin) ಬಗ್ಗೆ ಟ್ವೀಟ್ ಮಾಡಲಾಗಿತ್ತು. ‘ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ, ಸರ್ಕಾರ ಅಧಿಕೃತವಾಗಿ 500 ಬಿಟ್ ಕಾಯಿನ್ ಖರೀದಿಸಿದೆ, ಅವುಗಳನ್ನು ದೇಶದ ಪ್ರಜೆಗಳಿಗೆ ಹಂಚುವುದಾಗಿ ಪ್ರಧಾನಿ ಮೋದಿ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು. ಹ್ಯಾಕ್ ಆಗಿದ್ದ ಖಾತೆ ಸರಿಪಡಿಸಿದ ಹಿನ್ನೆಲೆ ಟ್ವೀಟ್ ಡಿಲೀಟ್ ಮಾಡಲಾಗಿದೆ.

ಪ್ರಧಾನ ಮಂತ್ರಿ ಕಚೇರಿ (PMO India) ಟ್ವಿಟರ್ ಖಾತೆಯಿಂದ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್ ಬಗ್ಗೆ ಮಾಹಿತಿ:

ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!

Published On - 6:22 am, Sun, 12 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ