AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್; ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!

PM Narendra Modi Twitter Account hacked: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್ ಮಾಡಿರುವ ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ. ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು ಸರಿಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್; ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!
ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್
TV9 Web
| Edited By: |

Updated on:Dec 12, 2021 | 6:34 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್ (Hacking) ಮಾಡಿರುವ ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ. ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು (Restored) ಸರಿಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ (PM Narendra Modi Twitter Account) ಸರಿಪಡಿಸಲಾಗಿದೆ. ಈ ಹಿಂದೆ ಮಾಡಿರುವ ಟ್ವೀಟ್ ಪರಿಗಣಿಸದಂತೆ ಸ್ಪಷ್ಟನೆ ನೀಡಲಾಗಿದೆ. ಪ್ರಧಾನಿ ಖಾತೆಯಿಂದ ಲಿಂಕ್ ಶೇರ್ ಆದ್ರೆ ಪರಿಗಣಿಸಬೇಡಿ. ಬಿಟ್ ಕಾಯಿನ್ ಸಂಬಂಧ ಲಿಂಕ್ ಬಂದರೆ ಪರಿಗಣಿಸಬೇಡಿ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವಿಟರ್ ಖಾತೆಯಿಂದ ಸ್ಪಷ್ಟನೆ ನೀಡಲಾಗಿದೆ.

ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್! ರಾತ್ರಿ ಪ್ರಧಾನಿ ಮೋದಿ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಪ್ರಧಾನಿ ಟ್ವಿಟರ್ ಖಾತೆಯಿಂದ ಬಿಟ್ ಕಾಯಿನ್ (Bitcoin) ಬಗ್ಗೆ ಟ್ವೀಟ್ ಮಾಡಲಾಗಿತ್ತು. ‘ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ, ಸರ್ಕಾರ ಅಧಿಕೃತವಾಗಿ 500 ಬಿಟ್ ಕಾಯಿನ್ ಖರೀದಿಸಿದೆ, ಅವುಗಳನ್ನು ದೇಶದ ಪ್ರಜೆಗಳಿಗೆ ಹಂಚುವುದಾಗಿ ಪ್ರಧಾನಿ ಮೋದಿ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು. ಹ್ಯಾಕ್ ಆಗಿದ್ದ ಖಾತೆ ಸರಿಪಡಿಸಿದ ಹಿನ್ನೆಲೆ ಟ್ವೀಟ್ ಡಿಲೀಟ್ ಮಾಡಲಾಗಿದೆ.

ಪ್ರಧಾನ ಮಂತ್ರಿ ಕಚೇರಿ (PMO India) ಟ್ವಿಟರ್ ಖಾತೆಯಿಂದ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್ ಬಗ್ಗೆ ಮಾಹಿತಿ:

ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!

Published On - 6:22 am, Sun, 12 December 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ