AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗುಜರಾತ್​​ನಲ್ಲಿ 108 ಅಡಿ ಎತ್ತರದ ಆಂಜನೇಯ ವಿಗ್ರಹ ಅನಾವರಣಗೊಳಿಸಿದ ಪ್ರಧಾನಿ ಮೋದಿ; ದೇಶದ 4 ದಿಕ್ಕುಗಳಲ್ಲಿ ಇರಲಿದ್ದಾನೆ ಹನುಮ

ಆಂಜನೇಯನೆಂದರೆ ಶಕ್ತಿ, ಧೈರ್ಯ,  ಸಂಯಮದ ಪ್ರತೀಕ. ಆ ಪವನಪುತ್ರನ ಕೃಪೆಯಿಂದ ಪ್ರತಿಯೊಬ್ಬರೂ ಶಕ್ತಿ, ಧೈರ್ಯ, ಅರಿವು, ಸದ್ಬುದ್ದಿ ಪಡೆಯುವಂತಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Video: ಗುಜರಾತ್​​ನಲ್ಲಿ 108 ಅಡಿ ಎತ್ತರದ ಆಂಜನೇಯ ವಿಗ್ರಹ ಅನಾವರಣಗೊಳಿಸಿದ ಪ್ರಧಾನಿ ಮೋದಿ; ದೇಶದ 4 ದಿಕ್ಕುಗಳಲ್ಲಿ ಇರಲಿದ್ದಾನೆ ಹನುಮ
108 ಅಡಿ ಎತ್ತರದ ಹನುಮಂತನ ವಿಗ್ರಹ ಅನಾವರಣಗೊಳಿಸಿದ ಪ್ರಧಾನಿ ಮೋದಿ
TV9 Web
| Edited By: |

Updated on:Apr 16, 2022 | 12:31 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್​ನ ಮೋರ್ಬಿ ಜಿಲ್ಲೆಯಲ್ಲಿ 108 ಅಡಿ ಎತ್ತರದ ಆಂಜನೇಯನ ಮೂರ್ತಿಯನ್ನು ವರ್ಚ್ಯುವಲ್​ ಆಗಿ ಉದ್ಘಾಟನೆ ಮಾಡಿದ್ದಾರೆ. ಹನುಮ ಜಯಂತಿ ಹಿನ್ನೆಲೆಯಲ್ಲಿ ಈ ಪ್ರತಿಮೆ ಅನಾವರಣಗೊಂಡಿದ್ದು, ಅದಕ್ಕೂ ಪೂರ್ವ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಇಂದು ಹನುಮಾನ್ ಜಯಂತಿ. ಬೆಳಗ್ಗೆ 11ಗಂಟೆಗೆ ಹನುಮಾನ್​ ವಿಗ್ರಹವನ್ನು ಲೋಕಾರ್ಪಣೆಗೊಳಿಸುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಆಂಜನೇಯನ ವಿಗ್ರಹವನ್ನು ಅನಾವರಣಗೊಳಿಸುತ್ತಿರುವುದು ನನಗೆ ಸಂದ ಗೌರವ ಎಂದು ಭಾವಿಸುತ್ತೇನೆ ಎಂದು ಹೇಳಿದ್ದರು. ನಂತರ ಉದ್ಘಾಟನಾ ಸಮಾರಂಭದ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ.

ಹನುಮಂತನ ಈ ವಿಗ್ರಹವನ್ನು ಗುಜರಾತ್​​ನ ಪಶ್ಚಿಮದ ಮೋರ್ಬಿ ಜಿಲ್ಲೆಯಲ್ಲಿನ ಪರಮಪೂಜ್ಯ ಬಾಪು ಕೇಶವಾನಂದ ಆಶ್ರಮದಲ್ಲಿ ನಿರ್ಮಿಸಲಾಗಿದೆ. ದೇಶದ ನಾಲ್ಕು ದಿಕ್ಕುಗಳಿಗೆ ನಾಲ್ಕು ಹನುಮಂತನ ಪ್ರತಿಮೆಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಅದಕ್ಕೆ ಹನುಮಾನ್​ ಜಿ ಚಾರ್​ ಧಾಮ್ ಎಂದು ಹೆಸರಿಸಲಾಗಿದೆ. ಈ ನಾಲ್ಕು ಹನುಮಾನ್​ ಪ್ರತಿಮೆಗಳಲ್ಲಿ ಗುಜರಾತ್​​ನ ಮೋರ್ಬಿಯಲ್ಲಿ ಅನಾವರಣಗೊಂಡಿದ್ದು ಎರಡನೇಯದು.  ಅಂದಹಾಗೇ, ಮೊದಲನೇಯದ್ದು ಶಿಮ್ಲಾದಲ್ಲಿ (ಉತ್ತರ) 2010ರಲ್ಲಿ ನಿರ್ಮಾಣಗೊಂಡಿದೆ.  ಇನ್ನು ದಕ್ಷಿಣ ದಿಕ್ಕಿನಲ್ಲಿ ರಾಮೇಶ್ವರಂನಲ್ಲಿ ಒಂದು ಹನುಮಾನ್​ ವಿಗ್ರಹ ನಿರ್ಮಾಣಗೊಳ್ಳಲಿದ್ದು, ಅದರ ಕಾರ್ಯವೂ ಶುರುವಾಗಿದೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

ಹಾಗೇ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನರಿಗೆ ಹನುಮಾನ್​ ಜಯಂತಿ ಶುಭಾಶಯ ಕೋರಿದ್ದಾರೆ. ಆಂಜನೇಯನ ಜಯಂತಿಯಾದ ಇಂದು ದೇಶದ ಎಲ್ಲರಿಗೂ ಶುಭಾಶಯಗಳು. ಆಂಜನೇಯನೆಂದರೆ ಶಕ್ತಿ, ಧೈರ್ಯ,  ಸಂಯಮದ ಪ್ರತೀಕ. ಆ ಪವನಪುತ್ರನ ಕೃಪೆಯಿಂದ ಪ್ರತಿಯೊಬ್ಬರೂ ಶಕ್ತಿ, ಧೈರ್ಯ, ಅರಿವು, ಸದ್ಬುದ್ದಿ ಪಡೆಯುವಂತಾಗಲಿ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸೇರಿ ಹಲವು ಗಣ್ಯರು ಇಂದು ಹನುಮಾನ್​ ಜಯಂತಿ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: RCB Playing XI: ಡೆಲ್ಲಿ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ: ಆ ಪ್ಲೇಯರ್ ಆಡುವುದು ಅನುಮಾನ

Published On - 12:30 pm, Sat, 16 April 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?