AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಪ್ರತಿಮೆ ಅನಾವರಣ ಮಾಡಿದ ಮೋದಿ

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದು ಅದರೊಂದಿಗೇ ಅಲ್ಲೂರಿ ಸೀತಾರಾಮರಾಜು ಅವರ 125ನೇ ವರ್ಷವನ್ನಾಚರಿಸುತ್ತಿದೆ.

ಆಂಧ್ರಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಪ್ರತಿಮೆ ಅನಾವರಣ ಮಾಡಿದ ಮೋದಿ
ನರೇಂದ್ರ ಮೋದಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 04, 2022 | 2:49 PM

Share

ವಿಜಯವಾಡ: ಸೋಮವಾರ ವಿಜಯವಾಡಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi)  ಭೀಮಾವರಂನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು (Alluri Sitarama Raju) ಅವರ ಪ್ರತಿಮೆಯನ್ನುಅನಾವರಣಗೊಳಿಸಿದ್ದಾರೆ.ಇಂದು ಬೆಳಗ್ಗೆ ವಿಜಯವಾಡ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ರಾಜ್ಯಪಾಲ ಬಿಸ್ವಭೂಷಣ್ ಹರಿಶ್ಚಂದ್ರನ್ ಅವರು ಮೋದಿ ಅವರನ್ನು ಬರ ಮಾಡಿಕೊಂಡರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದು ಅದರೊಂದಿಗೇ ಅಲ್ಲೂರಿ ಸೀತಾರಾಮರಾಜು ಅವರ 125ನೇ ವರ್ಷವನ್ನಾಚರಿಸುತ್ತಿದೆ. ಅದೇ ವೇಳೆ ದೇಶದ ಸ್ವಾತಂತ್ರ್ಯಕ್ಕಾಗಿರುವ ರಾಂಪ ಕ್ರಾಂತಿಯ ನೂರನೇ ವರ್ಷವನ್ನು ಆಚರಿಸುತ್ತಿದೆ. ಅವರ ಮುಂದೆ ನಾನು ತಲೆಬಾಗಿ ನಮನ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಗಾರು ಅವರ 125ನೇ ಜನ್ಮ ದಿನಾಚರಣೆ ಮತ್ತು ರಾಂಪಕ್ರಾಂತಿಯ 100ನೇ ವರ್ಷಆಚರಣೆ ವರ್ಷದಾದ್ಯಂತ ಆಚರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಮೋದಿಯವರ ಭೇಟಿ ನಿಮಿತ್ತ ಬಿಗಿ ಭದ್ರತೆಯನ್ನೊದಗಿಸಲಾಗಿದೆ ಭೀಮಾವರಂ ಮತ್ತು ಗನ್ನಾವಂರನಲ್ಲಿ ಬಿಗಿ ಭದ್ರತೆಯನ್ನೊದಗಿಸಲಾಗಿದೆ. ಡಿಜಿಪಿ ಕೆವಿ ರಾಜೇಂದ್ರನಾಥ ರೆಡ್ಡಿ ಅವರು ಭದ್ರತೆಯನ್ನು ಪರಿಶೀಲಿಸಿದ್ದಾರೆ,

ಭೀಮಾವರಂ ನಲ್ಲಿ ನಾವು 2,200 ಪೊಲೀಸ್ ಪಡೆಯನ್ನು ನಿಯೋಜಿಸಿದ್ದೇವೆ. ಗನ್ನಾವರಂ ವಿಮಾನ ನಿಲ್ದಾಣದಲ್ಲಿ ನಾವು 800 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದೇವೆ ಎಂದು ರಾಜೇಂದ್ರ ನಾಥ ರೆಡ್ಡಿ ಹೇಳಿದ್ದಾರೆ.

ಭೀಮಾವರಂನಲ್ಲಿ ಭಾಷಣ ನಂತರ  ಪ್ರಧಾನಿ ಮೋದಿಯವರು ಸ್ವಾತಂತ್ರ್ಯ  ಹೋರಾಟಗಾರ ಪಾಲಸಾ  ಕೃಷ್ಣ ಮೂರ್ತಿ ಅವರ ಕುಟುಂಬವನ್ನು ಭೇಟಿ ಮಾಡಿದ್ದಾರೆ.   ಪಾಲಸಾ ಅವರ ಪುತ್ರಿ ಪಾಲಸಾ ಕೃಷ್ಣ ಭಾರತಿ ಅವರನ್ನೂ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದಾರೆ.

ಅಲ್ಲೂರಿ ಸೀತಾರಾಮ ರಾಜು ಅವರ ಅಳಿಯ ಶ್ರೀರಾಮ ರಾಜು ಮತ್ತು ಅಲ್ಲೂರಿ ಅವರ ಆಪ್ತ ಮಲ್ಲು ದೋರಾಅವರ ಪುತ್ರ ಬೋದಿ ದೋರಾ ಅವರನ್ನು ಸನ್ಮಾನಿಸಿದ್ದಾರೆ. ಮಾನ್ಯಂ ವೀರುಡು (ಕಾಡಿನ ಹೀರೋ) ಎಂದೇ ಜನಪ್ರಿಯರಾಗಿರುವ ಅಲ್ಲೂರಿ ಸೀತಾರಾಮರಾಜು 1897 ಜುಲೈ4ರಂದು ಪಂಡರಂಗಿ ಗ್ರಾಮದಲ್ಲಿ ಜನಿಸಿದರು. ಅಲ್ಲೂರಿ ಅವರ 30 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಮಾಡಿದ ಮೋದಿ ಪಂಡರಂಗಿ, ಚಿಂತಾಪಳ್ಳಿ ಪೊಲೀಸ್ ಠಾಣೆ ಮತ್ತು ಮೊಗಲ್ಲುನಲ್ಲಿ ಸ್ಮಾರಕ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಭಾಷಣದ ವೇಳೆ ಮೋದಿಯವರು 1974ರಲ್ಲಿ ಬಿಡುಗಡೆಯಾದ ಅಲ್ಲೂರಿ ಸೀತಾರಾಮ ರಾಜು ಅವರ ಕುರಿತಾದ ತೆಲುಗು ವೀರ ಲೇವರಾ ಸಿನಿಮಾದ ಹಾಡಿನ ಕೆಲವು ಸಾಲುಗಳನ್ನೂ ಹೇಳಿದ್ದಾರೆ.

Published On - 2:37 pm, Mon, 4 July 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ