AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಪ್ರತಿಮೆ ಅನಾವರಣ ಮಾಡಿದ ಮೋದಿ

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದು ಅದರೊಂದಿಗೇ ಅಲ್ಲೂರಿ ಸೀತಾರಾಮರಾಜು ಅವರ 125ನೇ ವರ್ಷವನ್ನಾಚರಿಸುತ್ತಿದೆ.

ಆಂಧ್ರಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಪ್ರತಿಮೆ ಅನಾವರಣ ಮಾಡಿದ ಮೋದಿ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 04, 2022 | 2:49 PM

Share

ವಿಜಯವಾಡ: ಸೋಮವಾರ ವಿಜಯವಾಡಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi)  ಭೀಮಾವರಂನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು (Alluri Sitarama Raju) ಅವರ ಪ್ರತಿಮೆಯನ್ನುಅನಾವರಣಗೊಳಿಸಿದ್ದಾರೆ.ಇಂದು ಬೆಳಗ್ಗೆ ವಿಜಯವಾಡ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ರಾಜ್ಯಪಾಲ ಬಿಸ್ವಭೂಷಣ್ ಹರಿಶ್ಚಂದ್ರನ್ ಅವರು ಮೋದಿ ಅವರನ್ನು ಬರ ಮಾಡಿಕೊಂಡರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದು ಅದರೊಂದಿಗೇ ಅಲ್ಲೂರಿ ಸೀತಾರಾಮರಾಜು ಅವರ 125ನೇ ವರ್ಷವನ್ನಾಚರಿಸುತ್ತಿದೆ. ಅದೇ ವೇಳೆ ದೇಶದ ಸ್ವಾತಂತ್ರ್ಯಕ್ಕಾಗಿರುವ ರಾಂಪ ಕ್ರಾಂತಿಯ ನೂರನೇ ವರ್ಷವನ್ನು ಆಚರಿಸುತ್ತಿದೆ. ಅವರ ಮುಂದೆ ನಾನು ತಲೆಬಾಗಿ ನಮನ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಗಾರು ಅವರ 125ನೇ ಜನ್ಮ ದಿನಾಚರಣೆ ಮತ್ತು ರಾಂಪಕ್ರಾಂತಿಯ 100ನೇ ವರ್ಷಆಚರಣೆ ವರ್ಷದಾದ್ಯಂತ ಆಚರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಮೋದಿಯವರ ಭೇಟಿ ನಿಮಿತ್ತ ಬಿಗಿ ಭದ್ರತೆಯನ್ನೊದಗಿಸಲಾಗಿದೆ ಭೀಮಾವರಂ ಮತ್ತು ಗನ್ನಾವಂರನಲ್ಲಿ ಬಿಗಿ ಭದ್ರತೆಯನ್ನೊದಗಿಸಲಾಗಿದೆ. ಡಿಜಿಪಿ ಕೆವಿ ರಾಜೇಂದ್ರನಾಥ ರೆಡ್ಡಿ ಅವರು ಭದ್ರತೆಯನ್ನು ಪರಿಶೀಲಿಸಿದ್ದಾರೆ,

ಭೀಮಾವರಂ ನಲ್ಲಿ ನಾವು 2,200 ಪೊಲೀಸ್ ಪಡೆಯನ್ನು ನಿಯೋಜಿಸಿದ್ದೇವೆ. ಗನ್ನಾವರಂ ವಿಮಾನ ನಿಲ್ದಾಣದಲ್ಲಿ ನಾವು 800 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದೇವೆ ಎಂದು ರಾಜೇಂದ್ರ ನಾಥ ರೆಡ್ಡಿ ಹೇಳಿದ್ದಾರೆ.

ಭೀಮಾವರಂನಲ್ಲಿ ಭಾಷಣ ನಂತರ  ಪ್ರಧಾನಿ ಮೋದಿಯವರು ಸ್ವಾತಂತ್ರ್ಯ  ಹೋರಾಟಗಾರ ಪಾಲಸಾ  ಕೃಷ್ಣ ಮೂರ್ತಿ ಅವರ ಕುಟುಂಬವನ್ನು ಭೇಟಿ ಮಾಡಿದ್ದಾರೆ.   ಪಾಲಸಾ ಅವರ ಪುತ್ರಿ ಪಾಲಸಾ ಕೃಷ್ಣ ಭಾರತಿ ಅವರನ್ನೂ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದಾರೆ.

ಅಲ್ಲೂರಿ ಸೀತಾರಾಮ ರಾಜು ಅವರ ಅಳಿಯ ಶ್ರೀರಾಮ ರಾಜು ಮತ್ತು ಅಲ್ಲೂರಿ ಅವರ ಆಪ್ತ ಮಲ್ಲು ದೋರಾಅವರ ಪುತ್ರ ಬೋದಿ ದೋರಾ ಅವರನ್ನು ಸನ್ಮಾನಿಸಿದ್ದಾರೆ. ಮಾನ್ಯಂ ವೀರುಡು (ಕಾಡಿನ ಹೀರೋ) ಎಂದೇ ಜನಪ್ರಿಯರಾಗಿರುವ ಅಲ್ಲೂರಿ ಸೀತಾರಾಮರಾಜು 1897 ಜುಲೈ4ರಂದು ಪಂಡರಂಗಿ ಗ್ರಾಮದಲ್ಲಿ ಜನಿಸಿದರು. ಅಲ್ಲೂರಿ ಅವರ 30 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಮಾಡಿದ ಮೋದಿ ಪಂಡರಂಗಿ, ಚಿಂತಾಪಳ್ಳಿ ಪೊಲೀಸ್ ಠಾಣೆ ಮತ್ತು ಮೊಗಲ್ಲುನಲ್ಲಿ ಸ್ಮಾರಕ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಭಾಷಣದ ವೇಳೆ ಮೋದಿಯವರು 1974ರಲ್ಲಿ ಬಿಡುಗಡೆಯಾದ ಅಲ್ಲೂರಿ ಸೀತಾರಾಮ ರಾಜು ಅವರ ಕುರಿತಾದ ತೆಲುಗು ವೀರ ಲೇವರಾ ಸಿನಿಮಾದ ಹಾಡಿನ ಕೆಲವು ಸಾಲುಗಳನ್ನೂ ಹೇಳಿದ್ದಾರೆ.

Published On - 2:37 pm, Mon, 4 July 22

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ