AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಕೃಷಿ ಸಚಿವರ ಸಮಾವೇಶದಲ್ಲಿ ಜಾಗತಿಕ ಆಹಾರ ಭದ್ರತೆ ಕುರಿತು ಚರ್ಚೆಗೆ ಪ್ರಧಾನಿ ಮೋದಿ ಕರೆ

ದೇಶವು ನೈಸರ್ಗಿಕ ಕೃಷಿ ಮತ್ತು ತಂತ್ರಜ್ಞಾನ ಬೆಂಬಲಿತ ಕೃಷಿಯನ್ನು ಉತ್ತೇಜಿಸುತ್ತಿರುವಾಗಲೂ ಮೂಲಕ್ಕೆ ಹಿಂದಿರುಗಿ ಭವಿಷ್ಯದತ್ತ ಮುನ್ನಡೆಯುವ ಸಮ್ಮಿಳನವು ಭಾರತದ ನೀತಿಯಾಗಿದೆ ಎಂದು ಅವರು ಹೇಳಿದರು.

ಜಿ20 ಕೃಷಿ ಸಚಿವರ ಸಮಾವೇಶದಲ್ಲಿ ಜಾಗತಿಕ ಆಹಾರ ಭದ್ರತೆ ಕುರಿತು ಚರ್ಚೆಗೆ ಪ್ರಧಾನಿ ಮೋದಿ ಕರೆ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Jun 16, 2023 | 1:34 PM

Share

ಹೈದರಾಬಾದ್: ಕೃಷಿ ಕ್ಷೇತ್ರವು (Agriculture Sector) ಜಾಗತಿಕವಾಗಿ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಜಿ20 ಕೃಷಿ ಸಚಿವರ ಸಭೆಯಲ್ಲಿ (G20 Agri Ministers conference) ಜಾಗತಿಕ ಆಹಾರ ಭದ್ರತೆಯನ್ನು ಸಾಧಿಸಲು ಸಾಮೂಹಿಕ ಕ್ರಮವನ್ನು ಹೇಗೆ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಲು ಒತ್ತಾಯಿಸಿದರು. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಭೆಗೆ ವಿಡಿಯೊ ಸಂದೇಶದಲ್ಲಿ ಮೋದಿ, ಹವಾಮಾನ ಬದಲಾವಣೆಯು ಹೆಚ್ಚು ಹೆಚ್ಚು ಹವಾಮಾನ ವೈಪರೀತ್ಯಗಳನ್ನು ಉಂಟುಮಾಡುತ್ತಿದೆ ಮತ್ತು ಈ ಸವಾಲುಗಳನ್ನು ಜಾಗತಿಕ ದಕ್ಷಿಣವು ಹೆಚ್ಚಾಗಿ ಅನುಭವಿಸುತ್ತದೆ ಎಂದು ಹೇಳಿದರು.

ಜಾಗತಿಕವಾಗಿ, ಕೃಷಿ 2.5 ಶತಕೋಟಿ ಜನರಿಗೆ ಜೀವನೋಪಾಯವನ್ನು ಒದಗಿಸುತ್ತದೆ. ಜಾಗತಿಕ ದಕ್ಷಿಣ ರಾಷ್ಟ್ರಗಳಲ್ಲಿ, ಕೃಷಿಯು ಜಿಡಿಪಿಯ ಸುಮಾರು 30 ಪ್ರತಿಶತ ಮತ್ತು 60 ಪ್ರತಿಶತದಷ್ಟು ಉದ್ಯೋಗಗಳನ್ನು ಹೊಂದಿದೆ. ಇಂದು ಈ ವಲಯವು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಸಾಂಕ್ರಾಮಿಕ ರೋಗದಿಂದ ಉಂಟಾದ ಪೂರೈಕೆ ಸರಪಳಿ ಅಡ್ಡಿಯು ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ ಹದಗೆಟ್ಟಿದೆ ಎಂದು ಮೋದಿ ಹೇಳಿದ್ದಾರೆ.

ಹವಾಮಾನ ಬದಲಾವಣೆಯು ವಿಪರೀತ ಹವಾಮಾನ ಘಟನೆಗಳಿಗೆ ಕಾರಣವಾಗುತ್ತಿದೆ. ಇಂಥಾ ಸವಾಲುಗಳನ್ನು ಜಾಗತಿಕ ದಕ್ಷಿಣ ರಾಷ್ಟ್ರ ಹೆಚ್ಚು ಅನುಭವಿಸುತ್ತಿದೆ ಎಂದು ಮೋದಿ ಹೇಳಿದರು.

ದೇಶವು ನೈಸರ್ಗಿಕ ಕೃಷಿ ಮತ್ತು ತಂತ್ರಜ್ಞಾನ ಬೆಂಬಲಿತ ಕೃಷಿಯನ್ನು ಉತ್ತೇಜಿಸುತ್ತಿರುವಾಗಲೂ ಮೂಲಕ್ಕೆ ಹಿಂದಿರುಗಿ ಭವಿಷ್ಯದತ್ತ ಮುನ್ನಡೆಯುವ ಸಮ್ಮಿಳನವು ಭಾರತದ ನೀತಿಯಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ಗಲಭೆಗಳ ಪ್ರಮಾಣದಲ್ಲಿ ತೀವ್ರ ಕುಸಿತ: ಎನ್‌ಸಿಆರ್‌ಬಿ ಡೇಟಾ

ಭೂಮಿ ತಾಯಿಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಸಿಂಥೆಟಿಕ್ ಗೊಬ್ಬರ ಅಥವಾ ಕೀಟನಾಶಕಗಳನ್ನು ಬಳಸದೆ ದೇಶದಾದ್ಯಂತ ರೈತರು ನೈಸರ್ಗಿಕ ಕೃಷಿಯನ್ನು ಕೈಗೊಳ್ಳುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ