AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾ ಮೆಟ್ರೊ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ವಿಡಿಯೊ ಕಾನ್ಫೆರೆನ್ಸ್  ಮೂಲಕ ಉತ್ತರ ಪ್ರದೇಶದಲ್ಲಿಆಗ್ರಾ ಮೆಟ್ರೊ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ್ದಾರೆ.

ಆಗ್ರಾ ಮೆಟ್ರೊ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 07, 2020 | 2:01 PM

Share

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಮೆಟ್ರೊ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ್ದಾರೆ. ವಿಡಿಯೊ ಕಾನ್ಫೆರೆನ್ಸ್  ಮೂಲಕ ಕಾಮಗಾರಿಗೆ ಚಾಲನೆ ನೀಡಿದ ಅವರು ಆಗ್ರಾದಲ್ಲಿ ಸ್ಮಾರ್ಟ್ ಸೌಕರ್ಯಗಳನ್ನು ಒದಗಿಸುವುದಕ್ಕಾಗಿ ಮೊದಲ ಹಂತದಲ್ಲಿ ಸುಮಾರು ₹1,000 ಕೋಟಿ ವ್ಯಯಿಸಲಾಗುತ್ತಿದೆ ಎಂದರು.

ಕಳೆದ ವರ್ಷ ಕಮಾಂಡ್ ಆ್ಯಂಡ್ ಕಂಟ್ರೋಲ್ ಕೇಂದ್ರದ ಶಿಲಾನ್ಯಾಸ ಮಾಡುವ ಭಾಗ್ಯ ನನಗೆ ಸಿಕ್ಕಿತ್ತು. ಅದು ಈಗ ಕಾರ್ಯವೆಸಗುತ್ತಿದೆ. 2014ರ ನಂತರ 6 ವರ್ಷಗಳಲ್ಲಿ ದೇಶದಲ್ಲಿ 450 ಕಿಮಿಗಿಂತ ಹೆಚ್ಚು ಮೆಟ್ರೊ ಮಾರ್ಗ ಕಾರ್ಯ ಪ್ರವೃತ್ತವಾಗಿದ್ದು ಸುಮಾರು 1000 ಕಿಮೀ ಮೆಟ್ರೊ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು. ಉತ್ತರ ಪ್ರದೇಶ ಮೆಟ್ರೊ ರೈಲು ಕಾರ್ಪರೇಷನ್ (ಯುಪಿಎಂಆರ್​ಸಿ) ಈ ಯೋಜನೆಯ ಮೊದಲ ಹಂತವನ್ನು ಡಿಸೆಂಬರ್ 2022ರೊಳಗೆ ಪೂರ್ಣಗೊಳಿಸುವ ಗುರಿಯಿರಿಸಿಕೊಂಡಿದೆ.

ಆಗ್ರಾದಲ್ಲಿರುವ ಚಾರಿತ್ರಿಕ ಸ್ಮಾರಕ ತಾಜ್​ಮಹಲ್, ರೈಲು ನಿಲ್ದಾಣ ಮತ್ತು ಪ್ರಮುಖ ಮಾರುಕಟ್ಟೆಗಳಿಗೆ ಸಂಪರ್ಕ ಕಲ್ಪಿಸಲು ಮೆಟ್ರೊ ಯೋಜನೆ ಸಹಕಾರಿಯಾಗಲಿದೆ. ಪ್ರವಾಸೋದ್ಯಮದ ಉತ್ತೇಜನಕ್ಕೆ ಮೆಟ್ರೊ ಯೋಜನೆ ಸಹಕಾರಿಯಾಗಲಿದೆ ಎಂದು ಉತ್ತರ ಪ್ರದೇಶ ಮೆಟ್ರೊ ರೈಲು ಕಾರ್ಪರೇಷನ್​ನ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಕೇಶವ್ ಹೇಳಿದ್ದಾರೆ. ಆಗ್ರಾ ಮೆಟ್ರೊ ರೈಲು ಯೋಜನೆಗೆ ತಗಲುವ ವೆಚ್ಚ ₹8379.62 ಕೋಟಿ ಎಂದು ಅಂದಾಜಿಸಲಾಗಿದೆ.

ಆಗ್ರಾ ಮೆಟ್ರೊ ಯೋಜನೆ ಹೇಗಿದೆ? 29.4 ಕಿಮೀ ಉದ್ದದ ಮೆಟ್ರೊ ರೈಲು ಮಾರ್ಗ ಇದಾಗಿದ್ದು 2 ಕಾರಿಡಾರ್​​ಗಳಿರಲಿವೆ. ಮೊದಲ ಕಾರಿಡಾರ್ 14 ಕಿಮೀ ಆಗಿದ್ದು  ತಾಜ್​​ನ ಪೂರ್ವ ಗೇಟ್​​ನಿಂದ ಸಿಕಂದ್ರಾವರೆಗೆ ಇರಲಿದೆ. ಇದು ಭಾಗಶಃ ಎಲಿವೇಟೆಡ್ ಮತ್ತು ಸುರಂಗ ಮಾರ್ಗವನ್ನು ಹೊಂದಿದೆ. 6.3 ಕಿಮೀ ಎಲಿವೇಟೆಡ್ ಆಗಿದ್ದರೆ 7.7 ಕಿಮೀ ಸುರಂಗ ಮಾರ್ಗ ಇರಲಿದೆ. 6 ನಿಲ್ದಾಣಗಳಿರಲಿವೆ. ಇದರಲ್ಲಿ ತಾಜ್ ಈಸ್ಟ್ ಗೇಟ್ , ಬಸಾಯಿ, ಫತೇಹಾಬಾದ್ ರೋಡ್ ರಸ್ತೆ ಎಲಿವೇಟೆಡ್ ಕಾರಿಡಾರ್​​ನಲ್ಲಿರಲಿದ್ದು ತಾಜ್ ಮಹಲ್, ಆಗ್ರಾ ಕೋಟೆ, ಜಮಾ ಮಸೀದಿ ಸುರಂಗ ಮಾರ್ಗದಲ್ಲಿನ ನಿಲ್ದಾಣಗಳಾಗಿವೆ ಎಂದು ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಆಗ್ರಾ ಹೆಸರು ಬದಲಾವಣೆಗೆ ಮುಂದಾಯ್ತಾ ಯೋಗಿ ಆದಿತ್ಯನಾಥ್ ಸರ್ಕಾರ?

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​