Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾ ಟೆಕ್​ 5ನೇ ಆವೃತ್ತಿಯಲ್ಲಿ ಇಂದು ಸಂಜೆ ಭಾಷಣ ಮಾಡಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ; ಫ್ರಾನ್ಸ್ ಅಧ್ಯಕ್ಷರೂ ಭಾಗಿ

Viva Tech 2021: ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ಈ ವೇದಿಕೆ ಮೂಲಕ ಟೆಕ್​ ಮತ್ತು ಸ್ಟಾರ್ಟ್​ ಅಪ್​​ ಜಗತ್ತಿನಲ್ಲಿ ಭಾರತದ ಪ್ರಗತಿಯ ಬಗ್ಗೆ ಮಾತನಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ವಿವಾ ಟೆಕ್​ 5ನೇ ಆವೃತ್ತಿಯಲ್ಲಿ ಇಂದು ಸಂಜೆ ಭಾಷಣ ಮಾಡಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ; ಫ್ರಾನ್ಸ್ ಅಧ್ಯಕ್ಷರೂ ಭಾಗಿ
ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on:Jun 16, 2021 | 9:10 AM

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 4ಗಂಟೆಗೆ ವಿವಾ ಟೆಕ್​​ 5ನೇ ಆವೃತ್ತಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಹಾಗೇ ಈ ಕಾರ್ಯಕ್ರಮದಲ್ಲಿ ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್​ ಮಾರ್ಕೋನ್​, ಸ್ಪೇನ್​ ಪ್ರಧಾನಿ ಪೆಡ್ರೋ ಸಾಂಚೆಜ್​​ ಮತ್ತು ಐರೋಪ್ಯ ದೇಶಗಳ ಸಚಿವರು, ಸಂಸದರು ಪ್ರಮುಖ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದಾರೆ. ಹಾಗೇ, ಕಾರ್ಪೋರೇಟ್​ ವಲಯದಲ್ಲಿ ದಿಗ್ಗಜರಾಗಿ ಗುರುತಿಸಿಕೊಂಡಿರುವ ಆ್ಯಪಲ್​ ಕಂಪನಿ ಸಿಇಒ ಟಿಮ್​ ಕುಕ್​, ಫೇಸ್​​ಬುಕ್ ಅಧ್ಯಕ್ಷ, ಸಿಇಒ ಮಾರ್ಕ್​ ಜುಕನ್​​ಬರ್ಗ್​, ಮೈಕ್ರೋಸಾಫ್ಟ್​ ಅಧ್ಯಕ್ಷ ಬ್ರಾಡ್​ ಸ್ಮಿತ್​ ಕೂಡ ವಿವಾ ಟೆಕ್​​ನಲ್ಲಿ ಭಾಗವಹಿಸಲಿದ್ದಾರೆ.

ವಿವಾಟೆಕ್ 2021ರ​ 5ನೇ ಆವೃತ್ತಿಯಲ್ಲಿ ಮಾತನಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಅತಿಥಿಯನ್ನಾಗಿ ಆಹ್ವಾನಿಸಲಾಗಿದೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಹಾಗೇ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ವಿಡಿಯೋ ಕಾನ್ಫರೆನ್ಸ್​ ಮೂಲಕ ವಿವಾ ಟೆಕ್​ 2021ರ 5ನೇ ಆವೃತ್ತಿಯಲ್ಲಿ ಭಾಷಣ ಮಾಡಲಿದ್ದೇನೆ ಎಂದು ಹೇಳಿದ್ದಾರೆ. ಈ ವೇದಿಕೆ ಮೂಲಕ ಟೆಕ್​ ಮತ್ತು ಸ್ಟಾರ್ಟ್​ ಅಪ್​​ ಜಗತ್ತಿನಲ್ಲಿ ಭಾರತದ ಪ್ರಗತಿಯ ಬಗ್ಗೆ ಮಾತನಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ವಿವಾ ಟೆಕ್​ ಎಂಬುದು ಯುರೋಪ್​ನ ಅತ್ಯಂತ ದೊಡ್ಡ ಡಿಜಿಟಲ್​ ಮತ್ತು ಸ್ಟಾರ್ಟ್​ ಅಪ್​ ಕಾರ್ಯಕ್ರಮವಾಗಿದೆ. 2016ರಿಂದ ಪ್ರತಿವರ್ಷ ಪ್ಯಾರಿಸ್​​ನಲ್ಲಿ ಈ ಸಮಾರಂಭ ನಡೆಯುತ್ತದೆ. ಇದನ್ನು ಪ್ರಮುಖ ಜಾಹೀರಾತು ಮತ್ತು ಮಾರುಕಟ್ಟೆ ಸಂಘಟಕರಾದ ಪಬ್ಲಿಕ್​ ಗ್ರೂಪ್​ ಮತ್ತು ಫ್ರೆಂಚ್​​ನ ಪ್ರಮುಖ ಸಮುಹ ಮಾಧ್ಯಮ ಲೆಸ್​ ಎಕೋಸ್​ ಜಂಟಿಯಾಗಿ ಆಯೋಜಿಸಿವೆ. ತಂತ್ರಜ್ಞಾನ, ಸ್ಟಾರ್ಟ್​ ಅಪ್​​ಗೆ ಸಂಬಂಧಿಸಿದ ವಸ್ತುಪ್ರದರ್ಶನ, ಪ್ರಶಸ್ತಿ ಪುರಸ್ಕಾರ, ಪ್ಯಾನಲ್​ ಚರ್ಚೆಗಳು ಇದರಲ್ಲಿ ನಡೆಯುತ್ತವೆ. ಈ ವರ್ಷದ ವಿವಾ ಟೆಕ್​ ಜೂ.16ರಿಂದ 19ರವರೆಗೆ ನಡೆಯಲಿದೆ.

ಇದನ್ನೂ ಓದಿ: Bigg Boss Kannada 8: ಬಿಗ್​ಬಾಸ್​​ ಮನೆಯೊಳಗೆ ಮತ್ತೆ ಹೋಗೋಕೆ ಬ್ಯಾಗ್​ ಪ್ಯಾಕ್ ಮಾಡಿದ ಸ್ಪರ್ಧಿಗಳು; ಒಳಹೋಗುವವರು ಬರೀ 11 ಮಂದಿ ಅಲ್ಲ!

Published On - 9:10 am, Wed, 16 June 21

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ