AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Class 12 Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಬಗ್ಗೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ..

ಪ್ರಧಾನಿ ಮೋದಿಯವರು ಎಲ್ಲ ರಾಜ್ಯ ಸರ್ಕಾರಗಳನ್ನೊಳಗೊಂಡು ಸಭೆ ನಡೆಸಲಿದ್ದು, ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಭೆ ಬಳಿಕ ಸಿಬಿಎಸ್​​ಇ ಬಗ್ಗೆ ಪ್ರಕಟಣೆ ಹೊರಬೀಳಲಿದೆ. ಈ ನಿರ್ಧಾರ ಕುತೂಹಲ ಮೂಡಿಸಿದೆ.

CBSE Class 12 Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಬಗ್ಗೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ..
ನರೇಂದ್ರ ಮೋದಿ
Lakshmi Hegde
|

Updated on: Jun 01, 2021 | 4:54 PM

Share

ಕೊವಿಡ್​ 19 ಕಾರಣದಿಂದ ಬಹುತೇಕ ಎಲ್ಲ ಪರೀಕ್ಷೆಗಳೂ ಮುಂದೂಡಲ್ಪಟ್ಟಿವೆ. ಕೆಲವು ರದ್ದಾಗಿವೆ. ಆದರೆ ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಬಗ್ಗೆ ಇನ್ನೂ ನಿಖರತೆ ಸಿಕ್ಕಿಲ್ಲ. ಸಿಬಿಎಸ್​ಇ ಪರೀಕ್ಷೆ ನಡೆಸಬೇಕೋ-ಬಿಡಬೇಕೋ ಎಂಬ ಬಗ್ಗೆ ಇಂದು ಸಂಜೆ ಪ್ರಕಟಿಸುವುದಾಗಿ ಸುಪ್ರಿಂಕೋರ್ಟ್​ಗೆ ಕೇಂದ್ರ ಸರ್ಕಾರ ತಿಳಿಸಿತ್ತು. ಇದಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್​ ನಿಶಾಂಕ್​ ನೇತೃತ್ವದಲ್ಲಿ ಸಭೆಯೂ ನಡೆಯಬೇಕಿತ್ತು. ಆದರೆ ಅವರು ಅನಾರೋಗ್ಯದಿಂದ ಏಮ್ಸ್​ಗೆ ದಾಖಲಾಗಿರುವ ಕಾರಣ ಸಂಜೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯಲ್ಲಿ ಸಿಬಿಎಸ್​ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡುವುದೋ, ನಡೆಸುವುದೋ, ಮಾಡುವುದಾದರೂ ಹೇಗೆಲ್ಲ ಮಾಡಬಹುದು ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಪ್ರಧಾನಿ ಮೋದಿಯವರು ಎಲ್ಲ ರಾಜ್ಯ ಸರ್ಕಾರಗಳನ್ನೊಳಗೊಂಡು ಸಭೆ ನಡೆಸಲಿದ್ದು, ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಭೆ ಬಳಿಕ ಸಿಬಿಎಸ್​​ಇ ಬಗ್ಗೆ ಪ್ರಕಟಣೆ ಹೊರಬೀಳಲಿದೆ. ಸಿಬಿಎಸ್​ಇ ಬಗ್ಗೆ ಕಳೆದ ಒಂದು ತಿಂಗಳಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮೂರು ಆಯ್ಕೆಗಳನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಅದರಲ್ಲಿ ಮೊದಲನೇದು, ಕೇವಲ ಪ್ರಮುಖ ವಿಷಯಗಳ ಪರೀಕ್ಷೆಗಳನ್ನು ಮಾತ್ರ ನಡೆಸುವುದು, ಎರಡನೇಯದಾಗಿ ಶಾರ್ಟ್​ ಉತ್ತರ ಸ್ವರೂಪದ ಪ್ರಶ್ನೆಗಳನ್ನು ನೀಡಿ ಪರೀಕ್ಷೆ ಮಾಡುವುದು ಮತ್ತು ಮೂರನೇದಾಗಿ ವಿದ್ಯಾರ್ಥಿಗಳ ಕಳೆದ ಮೂರು ವರ್ಷಗಳ ಶೈಕ್ಷಣಿಕ ಸಾಧನೆ ನೋಡಿ 12ನೇ ತರಗತಿಯಲ್ಲಿ ಪಾಸು ಮಾಡುವುದು..ಆದರೆ ಸದ್ಯಕ್ಕಂತೂ ಈ ವಿಚಾರ ಸುಪ್ರೀಂಕೋರ್ಟ್​​ನಲ್ಲಿದೆ. ಕೊವಿಡ್​ ಸಾಂಕ್ರಾಮಿಕದ ಹೊತ್ತಲ್ಲಿ ಪರೀಕ್ಷೆಗಳನ್ನು ನಡೆಸಬಾರದು ಎಂದು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಸಿಬಿಎಸ್​ಇ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರ ಏನೇ ಕ್ರಮ ಕೈಗೊಂಡರೂ ಜೂನ್​ 3ರೊಳಗೆ ನಮಗೆ ತಿಳಿಸಬೇಕು ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಇದನ್ನೂ ಓದಿ: CBSE Exams 2021: ಸಿಬಿಎಸ್​ಇ ಪರೀಕ್ಷೆ ರದ್ದತಿ ಕೋರಿ ವಿದ್ಯಾರ್ಥಿಗಳಿಂದ ಅರ್ಜಿ; ವಿಚಾರಣೆ ಮೇ 31ಕ್ಕೆ ಮುಂದೂಡಿದ ಸುಪ್ರೀಂ

Follow Us
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?