AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Class 12 Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಬಗ್ಗೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ..

ಪ್ರಧಾನಿ ಮೋದಿಯವರು ಎಲ್ಲ ರಾಜ್ಯ ಸರ್ಕಾರಗಳನ್ನೊಳಗೊಂಡು ಸಭೆ ನಡೆಸಲಿದ್ದು, ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಭೆ ಬಳಿಕ ಸಿಬಿಎಸ್​​ಇ ಬಗ್ಗೆ ಪ್ರಕಟಣೆ ಹೊರಬೀಳಲಿದೆ. ಈ ನಿರ್ಧಾರ ಕುತೂಹಲ ಮೂಡಿಸಿದೆ.

CBSE Class 12 Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಬಗ್ಗೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ..
ನರೇಂದ್ರ ಮೋದಿ
Lakshmi Hegde
|

Updated on: Jun 01, 2021 | 4:54 PM

Share

ಕೊವಿಡ್​ 19 ಕಾರಣದಿಂದ ಬಹುತೇಕ ಎಲ್ಲ ಪರೀಕ್ಷೆಗಳೂ ಮುಂದೂಡಲ್ಪಟ್ಟಿವೆ. ಕೆಲವು ರದ್ದಾಗಿವೆ. ಆದರೆ ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಬಗ್ಗೆ ಇನ್ನೂ ನಿಖರತೆ ಸಿಕ್ಕಿಲ್ಲ. ಸಿಬಿಎಸ್​ಇ ಪರೀಕ್ಷೆ ನಡೆಸಬೇಕೋ-ಬಿಡಬೇಕೋ ಎಂಬ ಬಗ್ಗೆ ಇಂದು ಸಂಜೆ ಪ್ರಕಟಿಸುವುದಾಗಿ ಸುಪ್ರಿಂಕೋರ್ಟ್​ಗೆ ಕೇಂದ್ರ ಸರ್ಕಾರ ತಿಳಿಸಿತ್ತು. ಇದಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್​ ನಿಶಾಂಕ್​ ನೇತೃತ್ವದಲ್ಲಿ ಸಭೆಯೂ ನಡೆಯಬೇಕಿತ್ತು. ಆದರೆ ಅವರು ಅನಾರೋಗ್ಯದಿಂದ ಏಮ್ಸ್​ಗೆ ದಾಖಲಾಗಿರುವ ಕಾರಣ ಸಂಜೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯಲ್ಲಿ ಸಿಬಿಎಸ್​ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡುವುದೋ, ನಡೆಸುವುದೋ, ಮಾಡುವುದಾದರೂ ಹೇಗೆಲ್ಲ ಮಾಡಬಹುದು ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಪ್ರಧಾನಿ ಮೋದಿಯವರು ಎಲ್ಲ ರಾಜ್ಯ ಸರ್ಕಾರಗಳನ್ನೊಳಗೊಂಡು ಸಭೆ ನಡೆಸಲಿದ್ದು, ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಭೆ ಬಳಿಕ ಸಿಬಿಎಸ್​​ಇ ಬಗ್ಗೆ ಪ್ರಕಟಣೆ ಹೊರಬೀಳಲಿದೆ. ಸಿಬಿಎಸ್​ಇ ಬಗ್ಗೆ ಕಳೆದ ಒಂದು ತಿಂಗಳಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮೂರು ಆಯ್ಕೆಗಳನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಅದರಲ್ಲಿ ಮೊದಲನೇದು, ಕೇವಲ ಪ್ರಮುಖ ವಿಷಯಗಳ ಪರೀಕ್ಷೆಗಳನ್ನು ಮಾತ್ರ ನಡೆಸುವುದು, ಎರಡನೇಯದಾಗಿ ಶಾರ್ಟ್​ ಉತ್ತರ ಸ್ವರೂಪದ ಪ್ರಶ್ನೆಗಳನ್ನು ನೀಡಿ ಪರೀಕ್ಷೆ ಮಾಡುವುದು ಮತ್ತು ಮೂರನೇದಾಗಿ ವಿದ್ಯಾರ್ಥಿಗಳ ಕಳೆದ ಮೂರು ವರ್ಷಗಳ ಶೈಕ್ಷಣಿಕ ಸಾಧನೆ ನೋಡಿ 12ನೇ ತರಗತಿಯಲ್ಲಿ ಪಾಸು ಮಾಡುವುದು..ಆದರೆ ಸದ್ಯಕ್ಕಂತೂ ಈ ವಿಚಾರ ಸುಪ್ರೀಂಕೋರ್ಟ್​​ನಲ್ಲಿದೆ. ಕೊವಿಡ್​ ಸಾಂಕ್ರಾಮಿಕದ ಹೊತ್ತಲ್ಲಿ ಪರೀಕ್ಷೆಗಳನ್ನು ನಡೆಸಬಾರದು ಎಂದು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಸಿಬಿಎಸ್​ಇ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರ ಏನೇ ಕ್ರಮ ಕೈಗೊಂಡರೂ ಜೂನ್​ 3ರೊಳಗೆ ನಮಗೆ ತಿಳಿಸಬೇಕು ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಇದನ್ನೂ ಓದಿ: CBSE Exams 2021: ಸಿಬಿಎಸ್​ಇ ಪರೀಕ್ಷೆ ರದ್ದತಿ ಕೋರಿ ವಿದ್ಯಾರ್ಥಿಗಳಿಂದ ಅರ್ಜಿ; ವಿಚಾರಣೆ ಮೇ 31ಕ್ಕೆ ಮುಂದೂಡಿದ ಸುಪ್ರೀಂ

Follow Us
Lakshmi Hegde
Lakshmi Hegde
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!