AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Class 12 Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಬಗ್ಗೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ..

ಪ್ರಧಾನಿ ಮೋದಿಯವರು ಎಲ್ಲ ರಾಜ್ಯ ಸರ್ಕಾರಗಳನ್ನೊಳಗೊಂಡು ಸಭೆ ನಡೆಸಲಿದ್ದು, ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಭೆ ಬಳಿಕ ಸಿಬಿಎಸ್​​ಇ ಬಗ್ಗೆ ಪ್ರಕಟಣೆ ಹೊರಬೀಳಲಿದೆ. ಈ ನಿರ್ಧಾರ ಕುತೂಹಲ ಮೂಡಿಸಿದೆ.

CBSE Class 12 Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಬಗ್ಗೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ..
ನರೇಂದ್ರ ಮೋದಿ
Lakshmi Hegde
|

Updated on: Jun 01, 2021 | 4:54 PM

Share

ಕೊವಿಡ್​ 19 ಕಾರಣದಿಂದ ಬಹುತೇಕ ಎಲ್ಲ ಪರೀಕ್ಷೆಗಳೂ ಮುಂದೂಡಲ್ಪಟ್ಟಿವೆ. ಕೆಲವು ರದ್ದಾಗಿವೆ. ಆದರೆ ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ಬಗ್ಗೆ ಇನ್ನೂ ನಿಖರತೆ ಸಿಕ್ಕಿಲ್ಲ. ಸಿಬಿಎಸ್​ಇ ಪರೀಕ್ಷೆ ನಡೆಸಬೇಕೋ-ಬಿಡಬೇಕೋ ಎಂಬ ಬಗ್ಗೆ ಇಂದು ಸಂಜೆ ಪ್ರಕಟಿಸುವುದಾಗಿ ಸುಪ್ರಿಂಕೋರ್ಟ್​ಗೆ ಕೇಂದ್ರ ಸರ್ಕಾರ ತಿಳಿಸಿತ್ತು. ಇದಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್​ ನಿಶಾಂಕ್​ ನೇತೃತ್ವದಲ್ಲಿ ಸಭೆಯೂ ನಡೆಯಬೇಕಿತ್ತು. ಆದರೆ ಅವರು ಅನಾರೋಗ್ಯದಿಂದ ಏಮ್ಸ್​ಗೆ ದಾಖಲಾಗಿರುವ ಕಾರಣ ಸಂಜೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯಲ್ಲಿ ಸಿಬಿಎಸ್​ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡುವುದೋ, ನಡೆಸುವುದೋ, ಮಾಡುವುದಾದರೂ ಹೇಗೆಲ್ಲ ಮಾಡಬಹುದು ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಪ್ರಧಾನಿ ಮೋದಿಯವರು ಎಲ್ಲ ರಾಜ್ಯ ಸರ್ಕಾರಗಳನ್ನೊಳಗೊಂಡು ಸಭೆ ನಡೆಸಲಿದ್ದು, ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಭೆ ಬಳಿಕ ಸಿಬಿಎಸ್​​ಇ ಬಗ್ಗೆ ಪ್ರಕಟಣೆ ಹೊರಬೀಳಲಿದೆ. ಸಿಬಿಎಸ್​ಇ ಬಗ್ಗೆ ಕಳೆದ ಒಂದು ತಿಂಗಳಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮೂರು ಆಯ್ಕೆಗಳನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಅದರಲ್ಲಿ ಮೊದಲನೇದು, ಕೇವಲ ಪ್ರಮುಖ ವಿಷಯಗಳ ಪರೀಕ್ಷೆಗಳನ್ನು ಮಾತ್ರ ನಡೆಸುವುದು, ಎರಡನೇಯದಾಗಿ ಶಾರ್ಟ್​ ಉತ್ತರ ಸ್ವರೂಪದ ಪ್ರಶ್ನೆಗಳನ್ನು ನೀಡಿ ಪರೀಕ್ಷೆ ಮಾಡುವುದು ಮತ್ತು ಮೂರನೇದಾಗಿ ವಿದ್ಯಾರ್ಥಿಗಳ ಕಳೆದ ಮೂರು ವರ್ಷಗಳ ಶೈಕ್ಷಣಿಕ ಸಾಧನೆ ನೋಡಿ 12ನೇ ತರಗತಿಯಲ್ಲಿ ಪಾಸು ಮಾಡುವುದು..ಆದರೆ ಸದ್ಯಕ್ಕಂತೂ ಈ ವಿಚಾರ ಸುಪ್ರೀಂಕೋರ್ಟ್​​ನಲ್ಲಿದೆ. ಕೊವಿಡ್​ ಸಾಂಕ್ರಾಮಿಕದ ಹೊತ್ತಲ್ಲಿ ಪರೀಕ್ಷೆಗಳನ್ನು ನಡೆಸಬಾರದು ಎಂದು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಸಿಬಿಎಸ್​ಇ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರ ಏನೇ ಕ್ರಮ ಕೈಗೊಂಡರೂ ಜೂನ್​ 3ರೊಳಗೆ ನಮಗೆ ತಿಳಿಸಬೇಕು ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಇದನ್ನೂ ಓದಿ: CBSE Exams 2021: ಸಿಬಿಎಸ್​ಇ ಪರೀಕ್ಷೆ ರದ್ದತಿ ಕೋರಿ ವಿದ್ಯಾರ್ಥಿಗಳಿಂದ ಅರ್ಜಿ; ವಿಚಾರಣೆ ಮೇ 31ಕ್ಕೆ ಮುಂದೂಡಿದ ಸುಪ್ರೀಂ

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!