AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kashi-Tamil Samagam: ವಾರಣಾಸಿಯಲ್ಲಿ ಕಾಶಿ-ತಮಿಳು ಸಮಾಗಮವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ವಾರಣಾಸಿ ಮತ್ತು ತಮಿಳುನಾಡು ನಡುವಿನ ಸಾಂಸ್ಕೃತಿಕ ಸಂಬಂಧವನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಕಾಶಿ-ತಮಿಳು ಸಮಾಗಮವನ್ನು ಕೇಂದ್ರ ಸರ್ಕಾರವು ಆಯೋಜಿಸುತ್ತಿದೆ. ಪ್ರಧಾನಿಯವರು ಕಾರ್ಯಕ್ರಮವನ್ನು ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ.

Kashi-Tamil Samagam: ವಾರಣಾಸಿಯಲ್ಲಿ ಕಾಶಿ-ತಮಿಳು ಸಮಾಗಮವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ವಾರಣಾಸಿಯಲ್ಲಿ ಕಾಶಿ-ತಮಿಳು ಸಮಾಗಮವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
TV9 Web
| Updated By: Rakesh Nayak Manchi|

Updated on:Nov 19, 2022 | 6:58 AM

Share

ವಾರಣಾಸಿ: ಒಂದು ತಿಂಗಳ ಕಾಲ ನಡೆಯುವ ಕಾಶಿ-ತಮಿಳು ಸಮಾಗಮವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶನಿವಾರ ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯದ (BHU) ಆಂಫಿಥಿಯೇಟರ್ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. “ಆಜಾದಿ ಕಾ ಅಮೃತ್ ಮಹೋತ್ಸವ”ದ (Azadi Ka Amrit Mahotsav) ಭಾಗವಾಗಿ ಮತ್ತು “ಏಕ್ ಭಾರತ್ ಶ್ರೇಷ್ಠ ಭಾರತ”ದ (Ek Bharat Shreshtha Bharat) ಸ್ಪೂರ್ತಿಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಾಗೂ ವಾರಣಾಸಿ ಮತ್ತು ತಮಿಳುನಾಡು ನಡುವಿನ ಸಾಂಸ್ಕೃತಿಕ ಸಂಬಂಧವನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಕಾಶಿ-ತಮಿಳು ಸಮಾಗಮ (Kashi-Tamil Samagam)ವನ್ನು ಕೇಂದ್ರ ಸರ್ಕಾರವು ಆಯೋಜಿಸುತ್ತಿದೆ. ಪ್ರಧಾನಿ ಅವರು ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಹಾನಗರ ಅಧ್ಯಕ್ಷ ವಿದ್ಯಾಸಾಗರ್ ರೈ ತಿಳಿಸಿದ್ದಾರೆ.

ಇದನ್ನೂ ಓದಿ: Fact Check ಬಾಲಿಯಲ್ಲಿ ಜಿ 20 ಶೃಂಗಸಭೆ ವೇಳೆ ಗೋ ಬ್ಯಾಕ್ ಮೋದಿ ಎಂದು ಫಲಕ ಹಿಡಿದ ಯುವತಿ; ಫೋಟೊಶಾಪ್ ಮಾಡಿದ ಚಿತ್ರ ವೈರಲ್

ನವೆಂಬರ್ 17 ರಿಂದ ಡಿಸೆಂಬರ್ 16 ರವರೆಗಿನ ಕಾರ್ಯಕ್ರಮವು ಕಾಶಿ (ವಾರಣಾಸಿ) ಮತ್ತು ತಮಿಳುನಾಡು ನಡುವಿನ ಶತಮಾನಗಳ ಹಳೆಯ ಜ್ಞಾನ ಮತ್ತು ಪ್ರಾಚೀನ ನಾಗರಿಕತೆಯ ಸಂಬಂಧವನ್ನು ಮರುಶೋಧಿಸಲು ಶ್ರಮಿಸುತ್ತದೆ. ಒಂದು ತಿಂಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ತಮಿಳುನಾಡಿನ 2500ಕ್ಕೂ ಹೆಚ್ಚು ಪ್ರತಿನಿಧಿಗಳು 8 ವಿವಿಧ ಬ್ಯಾಚ್‌ಗಳಲ್ಲಿ ಕಾಶಿಗೆ ಭೇಟಿ ನೀಡಲಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಎರಡು ದಿನಗಳ ಹಿಂದೆಯಷ್ಟೇ ವಾರಣಾಸಿಗೆ ಆಗಮಿಸಿ ಸಂಗಮಕ್ಕೆ ಸಿದ್ಧತೆಗಳನ್ನು ಪರಿಶೀಲಿಸಿದ್ದರು.

ಇದನ್ನೂ ಓದಿ: Fact Check ನೋಟು ರದ್ದತಿಯಿಂದ ಸಂಕಷ್ಟಕ್ಕೊಳಗಾದ ಜನರನ್ನು ಗೇಲಿ ಮಾಡಿದ್ದಾರಾ ನರೇಂದ್ರ ಮೋದಿ; ಎಡಿಟ್ ಮಾಡಿದ ವಿಡಿಯೊ ವೈರಲ್

ಕಾಶಿಯ ಮೇಯರ್ ಡಾ ಮೃದುಲಾ ಜಯಸ್ವಾಲ್ ಅವರು ಸುದ್ದಿ ಸಂಸ್ಥೆ AIR ನ್ಯೂಸ್‌ ಜೊತೆ ಮಾತನಾಡಿ, ತಮಿಳುನಾಡಿನ ಪ್ರತಿನಿಧಿಗಳನ್ನು ಸ್ವಾಗತಿಸಲು ಕಾಶಿಯ ಜನರು ಸಿದ್ಧರಾಗಿದ್ದಾರೆ ಮತ್ತು ಈ ಕಾರ್ಯಕ್ರಮವು ಎರಡು ಸಂಸ್ಕೃತಿಗಳನ್ನು ಒಟ್ಟಿಗೆ ತರುತ್ತದೆ ಮತ್ತು ಹಳೆಯ ಸಂಬಂಧಗಳನ್ನು ಪುನರುಜ್ಜೀವನಗೊಳಿಸುತ್ತದೆ ಎಂದು ತಿಳಿಸಿದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 am, Sat, 19 November 22

ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ