AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ದೆಹಲಿಯ ಕಾಲ್ಕಾಜಿಯಲ್ಲಿ ಇಂದು ಪ್ರಧಾನಿ ಮೋದಿಯಿಂದ 3,024 ಫ್ಲಾಟ್​​ಗಳ ಉದ್ಘಾಟನೆ

ಸುಮಾರು 345 ಕೋಟಿ ರೂ. ವೆಚ್ಚದಲ್ಲಿ ಫ್ಲಾಟ್‌ಗಳನ್ನು ನಿರ್ಮಿಸಲಾಗಿದೆ. ಇಂದು ಸಂಜೆ 4.30ಕ್ಕೆ ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕೀಗಳನ್ನು ಹಸ್ತಾಂತರಿಸಲಿದ್ದಾರೆ.

PM Narendra Modi: ದೆಹಲಿಯ ಕಾಲ್ಕಾಜಿಯಲ್ಲಿ ಇಂದು ಪ್ರಧಾನಿ ಮೋದಿಯಿಂದ 3,024 ಫ್ಲಾಟ್​​ಗಳ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Nov 02, 2022 | 8:06 AM

Share

ನವದೆಹಲಿ: ದೆಹಲಿಯ ಕಾಲ್ಕಾಜಿಯಲ್ಲಿ (Kalkaji) ಹೊಸದಾಗಿ ನಿರ್ಮಿಸಲಾದ 3,024 ಇಡಬ್ಲುಸಿ ಫ್ಲಾಟ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಬುಧವಾರ) ಉದ್ಘಾಟಿಸಲಿದ್ದಾರೆ. ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಈ ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗಿದೆ. ಇಂದು ಸಂಜೆ 4.30ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭೂಮಿಹೀನ್ ಶಿಬಿರದಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕೀಗಳನ್ನು ಹಸ್ತಾಂತರಿಸಲಿದ್ದಾರೆ.

ವಿಶೇಷವಾಗಿ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ವಸತಿ ಒದಗಿಸುವ ಪ್ರಧಾನ ಮಂತ್ರಿಯ ದೃಷ್ಟಿಗೆ ಅನುಗುಣವಾಗಿ 376 ಸ್ಲಂ ಕ್ಲಸ್ಟರ್‌ಗಳನ್ನು ಪುನರ್ವಸತಿಗೊಳಿಸುವ ಯೋಜನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಕೈಗೆತ್ತಿಕೊಂಡಿದೆ. ಸುಮಾರು 345 ಕೋಟಿ ರೂ. ವೆಚ್ಚದಲ್ಲಿ ಫ್ಲಾಟ್‌ಗಳನ್ನು ನಿರ್ಮಿಸಲಾಗಿದೆ. ಆ ಸ್ಲಂ ಕ್ಲಸ್ಟರ್‌ಗಳ ನಿವಾಸಿಗಳಿಗೆ ಉತ್ತಮ ಮತ್ತು ಆರೋಗ್ಯಕರ ಜೀವನ ಪರಿಸರವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: Morbi Tragedy: ಗುಜರಾತ್​​​ ಕೇಬಲ್ ಸೇತುವೆ ದುರಂತ; ಮೊರ್ಬಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ಕಾಲ್ಕಾಜಿ ವಿಸ್ತರಣಾ ಯೋಜನೆಯಡಿ ಮೊದಲನೆಯದಾಗಿ ಕಾಲ್ಕಾಜಿಯಲ್ಲಿರುವ 3 ಸ್ಲಂ ಕ್ಲಸ್ಟರ್‌ಗಳಾದ ಭೂಮಿಹೀನ್ ಕ್ಯಾಂಪ್, ನವಜೀವನ್ ಕ್ಯಾಂಪ್ ಮತ್ತು ಜವಾಹರ್ ಕ್ಯಾಂಪ್‌ಗಳ ಸ್ಲಂ ಪುನರ್ವಸತಿಯನ್ನು ಹಂತಹಂತವಾಗಿ ಕೈಗೊಳ್ಳಲಾಗುತ್ತಿದೆ. ಸಮೀಪದ ಖಾಲಿ ಜಾಗದಲ್ಲಿ ಒಟ್ಟು 3,024 EWS ಫ್ಲಾಟ್‌ಗಳನ್ನು ನಿರ್ಮಿಸಲಾಗಿದೆ. ಕೊಳೆಗೇರಿಗಳನ್ನು ಖಾಲಿ ಮಾಡಿ, ಈ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸದಾಗಿ ನಿರ್ಮಿಸಲಾದ EWS ಫ್ಲಾಟ್‌ಗಳಲ್ಲಿ ಪುನರ್ವಸತಿ ಕಲ್ಪಿಸಲಾಗುವುದು. ಎರಡನೇ ಹಂತದಲ್ಲಿ ಭೂಮಿಹೀನ್ ಶಿಬಿರದ ಖಾಲಿ ನಿವೇಶನವನ್ನು ನವಜೀವನ್ ಕ್ಯಾಂಪ್ ಮತ್ತು ಜವಾಹರ್ ಕ್ಯಾಂಪ್ ನಿವಾಸಿಗಳ ಪುನರ್ವಸತಿಗಾಗಿ ಬಳಸಲಾಗುತ್ತದೆ.

ಈ ಯೋಜನೆಯ ಮೊದಲ ಹಂತ ಪೂರ್ಣಗೊಂಡಿದೆ. 3024 ಫ್ಲಾಟ್‌ಗಳು ಸ್ಥಳಾಂತರಗೊಳ್ಳಲು ಸಿದ್ಧವಾಗಿವೆ. ಈ ಫ್ಲ್ಯಾಟ್‌ಗಳನ್ನು ಸುಮಾರು 345 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ವಿಟ್ರಿಫೈಡ್ ಫ್ಲೋರ್ ಟೈಲ್ಸ್, ಸೆರಾಮಿಕ್ಸ್ ಟೈಲ್ಸ್, ಫಿನಿಶಿಂಗ್ ಸೇರಿದಂತೆ ಎಲ್ಲಾ ನಾಗರಿಕ ಸೌಲಭ್ಯಗಳನ್ನು ಹೊಂದಿದೆ. ಪಾರ್ಕ್​ಗಳು, ವಿದ್ಯುತ್ ಕೇಂದ್ರಗಳು, ಒಳಚರಂಡಿ ಸಂಸ್ಕರಣಾ ಘಟಕ, ಎರಡು ನೀರಿನ ಪೈಪ್‌ಲೈನ್‌ಗಳು, ಲಿಫ್ಟ್‌ಗಳು, ನೈರ್ಮಲ್ಯ ನೀರು ಪೂರೈಕೆಗಾಗಿ ಜಲಾಶಯ ಇತ್ಯಾದಿ ಸಾರ್ವಜನಿಕ ಸೌಲಭ್ಯಗಳನ್ನು ಸಹ ಒದಗಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!