AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar Chauraha: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಯಿಂದ ಇಂದು ಲತಾ ಮಂಗೇಶ್ಕರ್ ಹೆಸರಿನ ಚೌಕ ಉದ್ಘಾಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ 93ನೇ ಜನ್ಮದಿನದ ಸಂದರ್ಭದಲ್ಲಿ ಅವರ ನೆನಪಿಗಾಗಿ ಅವರ ಹೆಸರಿನ ಈ ಚೌಕವನ್ನು ಉದ್ಘಾಟಿಸಲಿದ್ದಾರೆ.

Lata Mangeshkar Chauraha: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಯಿಂದ ಇಂದು ಲತಾ ಮಂಗೇಶ್ಕರ್ ಹೆಸರಿನ ಚೌಕ ಉದ್ಘಾಟನೆ
ಲತಾ ಮಂಗೇಶ್ಕರ್ ಹೆಸರಿನ ವೃತ್ತ
TV9 Web
| Edited By: |

Updated on:Sep 28, 2022 | 9:15 AM

Share

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ಇಂದು ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಹೆಸರಿನ ವೃತ್ತವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಗಾಯಕಿ ಲತಾ ಮಂಗೇಶ್ಕರ್ (Lata Mangeshkar Birthday) ಅವರ 93ನೇ ಜನ್ಮದಿನದ ಸಂದರ್ಭದಲ್ಲಿ ಅವರ ಹೆಸರಿನ ಚೌಕವನ್ನು (Lata Mangeshkar Chowk) ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಲತಾ ಮಂಗೇಶ್ಕರ್ ಅವರ ಕುಟುಂಬಸ್ಥರೆಲ್ಲರಿಗೂ ಆಹ್ವಾನ ನೀಡಲಾಗಿದೆ. ಈ ಬೃಹತ್ ಚೌಕ (ವೃತ್ತ)ದ ಮಧ್ಯೆ ಸಂಗೀತದ ಉಪಕರಣವನ್ನು ಇಡಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ 93ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅವರ ನೆನಪಿಗಾಗಿ ಅವರ ಹೆಸರಿನ ಈ ಚೌಕವನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರಯೂ ನದಿಯ ದಡದಲ್ಲಿರುವ ಹೊಸ ಘಾಟ್ ಪ್ರದೇಶವನ್ನು ಲತಾ ಮಂಗೇಶ್ಕರ್ ಚೌರಾಹಾ ಎಂದು ಕರೆಯಲಾಗಿದ್ದು, ಇದನ್ನು 7.9 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಇದನ್ನೂ ಓದಿ: ಮುಂದಿನ ಜನ್ಮ ಇದ್ದರೆ ಲತಾ ಮಂಗೇಶ್ಕರ್​ ಆಗಿ ಹುಟ್ಟಲು ನನಗೆ ಇಷ್ಟವಿಲ್ಲ ಎಂದಿದ್ದ ನೈಟಿಂಗೇಲ್​ ಆಫ್ ಇಂಡಿಯಾ

ಈ ವೃತ್ತದ ಮಧ್ಯೆ 14 ಟನ್ ತೂಕ, 40 ಅಡಿ ಉದ್ದ ಮತ್ತು 12 ಮೀಟರ್ ಎತ್ತರವಿರುವ ಭಾರತೀಯ ಸಂಗೀತ ವಾದ್ಯವಾದ ವೀಣೆಯನ್ನು ಸ್ಥಾಪಿಸಿರುವುದು ಈ ಸ್ಥಳದ ಪ್ರಮುಖ ಆಕರ್ಷಣೆಯಾಗಿದೆ. ಈ ಸಮಾರಂಭದಲ್ಲಿ ಲತಾ ಮಂಗೇಶ್ಕರ್ ಅವರ ಕುಟುಂಬ ಸದಸ್ಯರು ಮತ್ತು ಚಿತ್ರರಂಗದ ಅನೇಕ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಇಂದು ಲತಾ ಮಂಗೇಶ್ಕರ್ ಅವರ ಜನ್ಮದಿನವಾದ್ದರಿಂದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಲತಾ ದೀದಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ನೆನಪಿಸಿಕೊಳ್ಳುತ್ತೇನೆ. ನಾನು ನೆನಪಿಸಿಕೊಳ್ಳುವುದು ತುಂಬಾ ಇದೆ. ಲತಾ ದೀದಿ ಎಲ್ಲರಿಗೂ ಬಹಳ ಪ್ರೀತಿಯನ್ನು ಸುರಿಸುತ್ತಿದ್ದರು. ಇಂದು ಅಯೋಧ್ಯೆಯ ಚೌಕ್‌ಗೆ ಅವರ ಹೆಸರಿಡಲು ನನಗೆ ಸಂತೋಷವಾಗುತ್ತಿದೆ. ಇದು ಶ್ರೇಷ್ಠ ಭಾರತೀಯ ಸಂಗೀತ ದಿಗ್ಗಜರಿಗೆ ನಾವು ನೀಡುತ್ತಿರುವ ಸೂಕ್ತವಾದ ಗೌರವವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ದಶಕಗಳ ಕಾಲ ತಮ್ಮ ಮಾಂತ್ರಿಕ ಕಂಠದಿಂದ ಕೇಳುಗರನ್ನು ಪುಳಕಿತಗೊಳಿಸಿದ್ದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ 2022ರ ಫೆಬ್ರವರಿ 6ರಂದು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 am, Wed, 28 September 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್