AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಮೆಗಾ ಸೌರ ವಿದ್ಯುತ್ ಸ್ಥಾವರ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೊದಿ

Gujarat: ಜಾಮ್​ನಗರದಲ್ಲಿ ನಿರ್ಮಿಸಿರುವ ಮೆಗಾ ಸೌರ ವಿದ್ಯುತ್ ಸ್ಥಾವರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ. ನಂತರ ಅನೇಕ ಸೌನಿ ಯೋಜನಾ ಲಿಂಕ್-1 ಪ್ಯಾಕೇಜ್-5 ಮತ್ತು ಲಿಂಕ್-3 ಪ್ಯಾಕೇಜ್-7 ಕೂಡ ಪ್ರಾರಂಭಿಸಲಿದ್ದಾರೆ.

PM Modi: ಮೆಗಾ ಸೌರ ವಿದ್ಯುತ್ ಸ್ಥಾವರ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೊದಿ
ಮೆಗಾ ಸೌರ ವಿದ್ಯುತ್ ಸ್ಥಾವರ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೊದಿ (ಸಾಂಕೇತಿಕ ಚಿತ್ರ)
Follow us
TV9 Web
| Updated By: Rakesh Nayak Manchi

Updated on: Oct 10, 2022 | 8:11 AM

ಜಾಮ್​ನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಅ.10) 40 MW ಫೋಟೋ ವೋಲ್ಟಾಯಿಕ್ ಗ್ರಿಡ್ ಸಂಪರ್ಕಿತ ಸೌರ ಸ್ಥಾವರವನ್ನು ಉದ್ಘಾಟಿಸಲಿದ್ದಾರೆ. ಗುಜರಾತ್ ರಾಜ್ಯ ವಿದ್ಯುಚ್ಛಕ್ತಿ ನಿಗಮ ನಿಯಮಿತ (GSECL) 40 MW ಸಾಮರ್ಥ್ಯದ ದ್ಯುತಿವಿದ್ಯುಜ್ಜನಕ ಗ್ರಿಡ್ ಸಂಪರ್ಕಿತ ಸೌರ ವಿದ್ಯುತ್ ಯೋಜನೆಯನ್ನು 176.89 ಕೋಟಿ ರೂ. ವೆಚ್ಚದಲ್ಲಿ ಜಾಮ್‌ನಗರ ಜಿಲ್ಲೆಯ ಹರಿಪಾರ್ ಗ್ರಾಮದ ಸರ್ಕಾರಿ ಸ್ವಾಮ್ಯದ ಭೂಮಿಯಲ್ಲಿ ನಿರ್ಮಿಸಲಾಗಿದೆ. ಅಸಮ ಭೂಮಿ ಮತ್ತು ವಿವಿಧ ನೈಸರ್ಗಿಕ ಚರಂಡಿಗಳಲ್ಲಿ ಕೇವಲ ಮೂರು ತಿಂಗಳಲ್ಲಿ ಎಂಜಿನಿಯರಿಂಗ್ ಸಹಾಯದಿಂದ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲಾಗಿದೆ.

ಹೆಚ್ಚುತ್ತಿರುವ ಮಾಲಿನ್ಯ ಮತ್ತು ಹೆಚ್ಚುತ್ತಿರುವ ಶಕ್ತಿಯ ಬೇಡಿಕೆಯು ಪ್ರಪಂಚದಾದ್ಯಂತ ಹಾನಿ ಉಂಟುಮಾಡುತ್ತಿರುವ ಸಂದರ್ಭದಲ್ಲಿ ಗುಜರಾತ್‌ನಲ್ಲಿ ಸೂರ್ಯನ ಕಿರಣಗಳಿಂದ ಅಭಿವೃದ್ಧಿಯನ್ನು ಹೆಚ್ಚಿಸಲು ಹಸಿರು ಶಕ್ತಿಯನ್ನು ಬಳಸಿಕೊಳ್ಳಲಾಗಿದೆ. GSECL ಜಾಮ್‌ನಗರದ ಹರಿಪರ್ ಗ್ರಾಮದಲ್ಲಿ ಸರ್ಕಾರಿ ಸ್ವಾಮ್ಯದ ಕಲ್ಲಿನ ಭೂಮಿಯಲ್ಲಿ 40 MW ದ್ಯುತಿವಿದ್ಯುಜ್ಜನಕ ಗ್ರಿಡ್ ಸಂಪರ್ಕಿತ ಸೌರ ಸ್ಥಾವರವನ್ನು ನಿರ್ಮಿಸಿದೆ. ಇದು ವಾರ್ಷಿಕ 105.765 ಮಿಲಿಯನ್ ಯೂನಿಟ್‌ಗಳನ್ನು ಉತ್ಪಾದಿಸುತ್ತದೆ. ಅಲ್ಲದೆ 84.61 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆ ಕೂಡ ಕಡಿಮೆಯಾಗುತ್ತದೆ.

ಪ್ರಧಾನಿ ಮೋದಿ ಅವರು ಜಾಮ್‌ನಗರದಲ್ಲಿ ಸೌನಿ ಯೋಜನೆ ಲಿಂಕ್-1 ಪ್ಯಾಕೇಜ್-5 ಮತ್ತು ಲಿಂಕ್-3 ಪ್ಯಾಕೇಜ್-7 ಅನ್ನು ಪ್ರಾರಂಭಿಸಲಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮರ್ಪಿತ ಸರ್ಕಾರವು ಅಭಿವೃದ್ಧಿ ಮತ್ತು ಜನಪರ ಕಾರ್ಯಗಳ ಮೂಲಕ ಜನರ ಜೀವನದಲ್ಲಿ ಸೌಕರ್ಯಗಳನ್ನು ಹೆಚ್ಚಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಸೌನಿ ಯೋಜನೆಯ ಎರಡನೇ ಮತ್ತು ಮೂರನೇ ಹಂತದ ಪ್ರಾರಂಭ ಇದಕ್ಕೆ ಮತ್ತಷ್ಟು ಪುರಾವೆಯಾಗಿದೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ