AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಮೆಗಾ ಸೌರ ವಿದ್ಯುತ್ ಸ್ಥಾವರ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೊದಿ

Gujarat: ಜಾಮ್​ನಗರದಲ್ಲಿ ನಿರ್ಮಿಸಿರುವ ಮೆಗಾ ಸೌರ ವಿದ್ಯುತ್ ಸ್ಥಾವರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ. ನಂತರ ಅನೇಕ ಸೌನಿ ಯೋಜನಾ ಲಿಂಕ್-1 ಪ್ಯಾಕೇಜ್-5 ಮತ್ತು ಲಿಂಕ್-3 ಪ್ಯಾಕೇಜ್-7 ಕೂಡ ಪ್ರಾರಂಭಿಸಲಿದ್ದಾರೆ.

PM Modi: ಮೆಗಾ ಸೌರ ವಿದ್ಯುತ್ ಸ್ಥಾವರ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೊದಿ
ಮೆಗಾ ಸೌರ ವಿದ್ಯುತ್ ಸ್ಥಾವರ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೊದಿ (ಸಾಂಕೇತಿಕ ಚಿತ್ರ)
TV9 Web
| Edited By: Rakesh Nayak Manchi|

Updated on: Oct 10, 2022 | 8:11 AM

Share

ಜಾಮ್​ನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಅ.10) 40 MW ಫೋಟೋ ವೋಲ್ಟಾಯಿಕ್ ಗ್ರಿಡ್ ಸಂಪರ್ಕಿತ ಸೌರ ಸ್ಥಾವರವನ್ನು ಉದ್ಘಾಟಿಸಲಿದ್ದಾರೆ. ಗುಜರಾತ್ ರಾಜ್ಯ ವಿದ್ಯುಚ್ಛಕ್ತಿ ನಿಗಮ ನಿಯಮಿತ (GSECL) 40 MW ಸಾಮರ್ಥ್ಯದ ದ್ಯುತಿವಿದ್ಯುಜ್ಜನಕ ಗ್ರಿಡ್ ಸಂಪರ್ಕಿತ ಸೌರ ವಿದ್ಯುತ್ ಯೋಜನೆಯನ್ನು 176.89 ಕೋಟಿ ರೂ. ವೆಚ್ಚದಲ್ಲಿ ಜಾಮ್‌ನಗರ ಜಿಲ್ಲೆಯ ಹರಿಪಾರ್ ಗ್ರಾಮದ ಸರ್ಕಾರಿ ಸ್ವಾಮ್ಯದ ಭೂಮಿಯಲ್ಲಿ ನಿರ್ಮಿಸಲಾಗಿದೆ. ಅಸಮ ಭೂಮಿ ಮತ್ತು ವಿವಿಧ ನೈಸರ್ಗಿಕ ಚರಂಡಿಗಳಲ್ಲಿ ಕೇವಲ ಮೂರು ತಿಂಗಳಲ್ಲಿ ಎಂಜಿನಿಯರಿಂಗ್ ಸಹಾಯದಿಂದ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲಾಗಿದೆ.

ಹೆಚ್ಚುತ್ತಿರುವ ಮಾಲಿನ್ಯ ಮತ್ತು ಹೆಚ್ಚುತ್ತಿರುವ ಶಕ್ತಿಯ ಬೇಡಿಕೆಯು ಪ್ರಪಂಚದಾದ್ಯಂತ ಹಾನಿ ಉಂಟುಮಾಡುತ್ತಿರುವ ಸಂದರ್ಭದಲ್ಲಿ ಗುಜರಾತ್‌ನಲ್ಲಿ ಸೂರ್ಯನ ಕಿರಣಗಳಿಂದ ಅಭಿವೃದ್ಧಿಯನ್ನು ಹೆಚ್ಚಿಸಲು ಹಸಿರು ಶಕ್ತಿಯನ್ನು ಬಳಸಿಕೊಳ್ಳಲಾಗಿದೆ. GSECL ಜಾಮ್‌ನಗರದ ಹರಿಪರ್ ಗ್ರಾಮದಲ್ಲಿ ಸರ್ಕಾರಿ ಸ್ವಾಮ್ಯದ ಕಲ್ಲಿನ ಭೂಮಿಯಲ್ಲಿ 40 MW ದ್ಯುತಿವಿದ್ಯುಜ್ಜನಕ ಗ್ರಿಡ್ ಸಂಪರ್ಕಿತ ಸೌರ ಸ್ಥಾವರವನ್ನು ನಿರ್ಮಿಸಿದೆ. ಇದು ವಾರ್ಷಿಕ 105.765 ಮಿಲಿಯನ್ ಯೂನಿಟ್‌ಗಳನ್ನು ಉತ್ಪಾದಿಸುತ್ತದೆ. ಅಲ್ಲದೆ 84.61 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆ ಕೂಡ ಕಡಿಮೆಯಾಗುತ್ತದೆ.

ಪ್ರಧಾನಿ ಮೋದಿ ಅವರು ಜಾಮ್‌ನಗರದಲ್ಲಿ ಸೌನಿ ಯೋಜನೆ ಲಿಂಕ್-1 ಪ್ಯಾಕೇಜ್-5 ಮತ್ತು ಲಿಂಕ್-3 ಪ್ಯಾಕೇಜ್-7 ಅನ್ನು ಪ್ರಾರಂಭಿಸಲಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮರ್ಪಿತ ಸರ್ಕಾರವು ಅಭಿವೃದ್ಧಿ ಮತ್ತು ಜನಪರ ಕಾರ್ಯಗಳ ಮೂಲಕ ಜನರ ಜೀವನದಲ್ಲಿ ಸೌಕರ್ಯಗಳನ್ನು ಹೆಚ್ಚಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಸೌನಿ ಯೋಜನೆಯ ಎರಡನೇ ಮತ್ತು ಮೂರನೇ ಹಂತದ ಪ್ರಾರಂಭ ಇದಕ್ಕೆ ಮತ್ತಷ್ಟು ಪುರಾವೆಯಾಗಿದೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್