AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saryu Canal National Project: ಡಿ.11ಕ್ಕೆ ಮತ್ತೆ ಪ್ರಧಾನಿ ಮೋದಿ ಉತ್ತರ ಪ್ರದೇಶಕ್ಕೆ ಭೇಟಿ; 9802 ಕೋಟಿ ರೂ.ವೆಚ್ಚದ ಯೋಜನೆ ಉದ್ಘಾಟನೆ

ಈ ಯೋಜನೆಯನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ 1978ರಲ್ಲಿ ಸಣ್ಣಮಟ್ಟದಲ್ಲಿ ಪ್ರಾರಂಭ ಮಾಡಿತ್ತು. ಎರಡು ಜಿಲ್ಲೆಗಳಿಗೆ ಅನುಕೂಲವಾಗುವಂತೆ 78.68 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಯನ್ನು ಆರಂಭಿಸಿತ್ತು.

Saryu Canal National Project: ಡಿ.11ಕ್ಕೆ ಮತ್ತೆ ಪ್ರಧಾನಿ ಮೋದಿ ಉತ್ತರ ಪ್ರದೇಶಕ್ಕೆ ಭೇಟಿ; 9802 ಕೋಟಿ ರೂ.ವೆಚ್ಚದ ಯೋಜನೆ ಉದ್ಘಾಟನೆ
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on: Dec 09, 2021 | 4:20 PM

Share

ಲಖನೌ: ಬರುವ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಒಂದಾದರ ಮೇಲೆ ಇನ್ನೊಂದರಂತೆ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಗೋರಖ್​ಪುರ್​ನಲ್ಲಿ ರಾಸಾಯನಿಕ ಗೊಬ್ಬರ ಕಾರ್ಖಾನೆ ಸೇರಿ ಮೂರು ಬೃಹತ್​ ಯೋಜನೆಗಳನ್ನು ಲೋಕಾಪರ್ಣೆ ಮಾಡಿದ್ದ ಪ್ರಧಾನಿ ಮೋದಿ ಡಿ.11ಕ್ಕೆ ಮತ್ತೆ ಉತ್ತರಪ್ರದೇಶಕ್ಕೆ ತೆರಳಲಿದ್ದಾರೆ. ಅಂದು ಬಲರಾಂಪುರ ಜಿಲ್ಲೆಯಲ್ಲಿ 9802 ಕೋಟಿ ರೂಪಾಯಿ ವೆಚ್ಚದ ಸರಯೂ  ನಾಲೆ ರಾಷ್ಟ್ರೀಯ ಯೋಜನೆಯನ್ನು ಉದ್ಘಾಟನೆ ಮಾಡಲಿದ್ದಾರೆ. 

ಇದು ಉತ್ತರಪ್ರದೇಶದಲ್ಲಿಯೇ ಅತ್ಯಂತ ದೊಡ್ಡ ನಾಲಾ ಯೋಜನೆ ಎನಿಸಲಿದ್ದು, ಇಲ್ಲಿನ 9 ಜಿಲ್ಲೆಗಳಾದ ಬಹ್ರೈಚ್, ಗೊಂಡಾ, ಶ್ರಾವಸ್ತಿ, ಬಲರಾಮ್‌ಪುರ, ಬಸ್ತಿ, ಸಿದ್ಧಾರ್ಥನಗರ, ಸಂತ ಕಬೀರ್ ನಗರ, ಗೋರಖ್‌ಪುರ ಮತ್ತು ಮಹಾರಾಜ್‌ಗಂಜ್​​ಗಳ ಸುಮಾರು 25-30 ಲಕ್ಷ ರೈತರಿಗೆ ನೀರಾವರಿ ಅನುಕೂಲ ಮಾಡಿಕೊಡಲಿದೆ ಎಂದು ಜಲಶಕ್ತಿ ಸಚಿವ ಮಹೇಂದ್ರ ಸಿಂಗ್​ ತಿಳಿಸಿದ್ದಾರೆ.  ಈ ಯೋಜನೆಯಡಿ ಘಾರ್ಗಾ, ಸರಯೂ, ರಾಫ್ತಿ, ಬಂಗಂಗಾ ಮತ್ತು ರೋಹಿನ್ ನದಿಗಳನ್ನು ಸಂಪರ್ಕಿಸಲಾಗಿದೆ. ಹಾಗೇ, 6600 ಕಿಮೀ ದೂರದ ಹಲವು ಉಪಕಾಲುವೆಗಳು 318 ಕಿಮೀ ಉದ್ದದ ಮುಖ್ಯ ನಾಲೆಯನ್ನು ಸಂಪರ್ಕಿಸುತ್ತವೆ. ಒಟ್ಟಾರೆ 14.04 ಲಕ್ಷ ಹೆಕ್ಟೇರ್​ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುತ್ತದೆ. ಹಾಗೇ ಮಳೆಗಾಲದಲ್ಲಿ ನೇಪಾಳದಿಂದ ಬರುವ ನೀರಿನ ಮಟ್ಟವನ್ನು ಕುಗ್ಗಿಸುವ  ಮೂಲಕ, ಪ್ರವಾಹ ಭೀತಿಯನ್ನು ಕಡಿಮೆ ಮಾಡಲಿದೆ.

ಈ ಯೋಜನೆಯನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ 1978ರಲ್ಲಿ ಸಣ್ಣಮಟ್ಟದಲ್ಲಿ ಪ್ರಾರಂಭ ಮಾಡಿತ್ತು. ಎರಡು ಜಿಲ್ಲೆಗಳಿಗೆ ಅನುಕೂಲವಾಗುವಂತೆ 78.68 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಯನ್ನು ಆರಂಭಿಸಿತ್ತು. ಅದಾದ ನಾಲ್ಕು ವರ್ಷಗಳ ನಂತರ ಅಂದರೆ 1982ರಲ್ಲಿ 9 ಜಿಲ್ಲೆಗಳಿಗೆ ವಿಸ್ತರಿಸಲಾಯಿತು ಮತ್ತು ಯೋಜನೆಯ ಹೆಸರನ್ನು ಸರಯೂ ಕಾಲುವೆ ಯೋಜನೆಯೆಂದು ಹೆಸರಿಡಲಾಯಿತು. ಹಾಗೇ. 2021ರ ಹೊತ್ತಿಗೆ ಯೋಜನೆಗೆ 9802 ಕೋಟಿ ರೂಪಾಯಿ ಮೀಸಲಿಡುವುದಾಗಿ ಘೋಷಿಸಲಾಯಿತು.

ಇದನ್ನೂ ಓದಿ: Bipin Rawat: ಬಿಪಿನ್ ರಾವತ್​ಗೆ ಚಾಲಕರಾಗಿದ್ದರು ಮೈಸೂರಿನ ಯೋಧ; ಹಳೆಯ ದಿನಗಳನ್ನು ಮೆಲುಕು ಹಾಕಿದ ವೇಣು

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ