AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Covid Review Meeting: ಕೊರೊನಾ ಪ್ರಸರಣ ಹೆಚ್ಚಳ; ಇಂದು ಮಧ್ಯಾಹ್ನ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ದೇಶದಲ್ಲಿ ಸದ್ಯ ಯಾವುದೇ ಕೊರೊನಾ ನಿಯಂತ್ರಣ ನಿರ್ಬಂಧಗಳಿಲ್ಲ. ಹಾಗೇ, ಲಸಿಕೆ ಮೂರನೇ ಡೋಸ್ ನೀಡಿಕೆ ಅಭಿಯಾನವೂ ನಡೆಯುತ್ತಿದೆ. ಈ ಮಧ್ಯೆ ಕೊರೊನಾ ಸೋಂಕಿನ ಪ್ರಸರಣವೂ ಹೆಚ್ಚುತ್ತಿದೆ.

PM Modi Covid Review Meeting:  ಕೊರೊನಾ ಪ್ರಸರಣ ಹೆಚ್ಚಳ; ಇಂದು ಮಧ್ಯಾಹ್ನ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ
ಪ್ರಧಾನಿ ಮೋದಿ
TV9 Web
| Edited By: |

Updated on:Apr 27, 2022 | 10:15 AM

Share

ದೇಶದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಮಾಣ ನಿಧಾನವಾಗಿ ಏರಿಕೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಕೊವಿಡ್​ 19 ಪರಿಸ್ಥಿತಿ ಹೇಗಿದೆ ಎಂಬುದನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ  ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿಗಳ ಸಭೆ ನಡೆಯಲಿದ್ದು, ಇದರಲ್ಲಿ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್​ ಕೂಡ ಉಪಸ್ಥಿತರಿದ್ದು, ಮಾತನಾಡಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕೊವಿಡ್​ 19 ಸಾಂಕ್ರಾಮಿಕ ಶುರುವಾದಾಗಿನಿಂದಲೂ ವಿವಿಧ ರಾಜ್ಯಗಳಲ್ಲಿನ ಪರಿಸ್ಥಿತಿ, ಕೊರನಾ ನಿಯಂತ್ರಣ ಕ್ರಮಗಳ ಅನುಷ್ಠಾನ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿಯವರು ಮುಖ್ಯಮಂತ್ರಿಗಳೊಂದಿಗೆ ಹಲವು ಸಭೆಗಳನ್ನು ನಡೆಸಿದ್ದು. ಇದೀಗ ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಭಯ ಎದ್ದಿದೆ. ನಿತ್ಯ ದಾಖಲಾಗುವ ಕೇಸ್​ಗಳಲ್ಲೂ ಕ್ರಮೇಣ ಏರಿಕೆ ಕಾಣುತ್ತಿದೆ. ಹೀಗಾಗಿ ಮತ್ತೊಮ್ಮೆ ಪ್ರಧಾನಿ ಸಭೆ ಕರೆದಿದ್ದಾರೆ. 

ದೇಶದಲ್ಲಿ ಸದ್ಯ ಯಾವುದೇ ಕೊರೊನಾ ನಿಯಂತ್ರಣ ನಿರ್ಬಂಧಗಳಿಲ್ಲ. ಹಾಗೇ, ಲಸಿಕೆ ಮೂರನೇ ಡೋಸ್ ನೀಡಿಕೆ ಅಭಿಯಾನವೂ ನಡೆಯುತ್ತಿದೆ. ಈ ಮಧ್ಯೆ ಕೊರೊನಾ ಸೋಂಕಿನ ಪ್ರಸರಣವೂ ಹೆಚ್ಚುತ್ತಿದೆ. ಹೀಗಾಗಿ ಜನರು ಎಚ್ಚರಿಕೆ ವಹಿಸಬೇಕು ಎಂದು ಸರ್ಕಾರಗಳು ಹೇಳುತ್ತಲೇ ಬರುತ್ತಿವೆ. ಇನ್ನು ಮೊನ್ನೆ ಭಾನುವಾರ ಮನ್​ ಕೀ ಬಾತ್​ನಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಈಗ ಹಲವು ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಹಬ್ಬಗಳನ್ನು ಖುಷಿಯಿಂದಲೇ ಆಚರಿಸಿ, ಆದರೆ ಅದರ ಮಧ್ಯೆ ಕೊವಿಡ್​ 19 ನಿಯಂತ್ರಣ ನಿಯಮಗಳ ಪಾಲನೆ ಮರೆಯಬೇಡಿ ಎಂದು ಹೇಳಿದ್ದರು. ಈದ್​, ಅಕ್ಷಯ ತೃತೀಯಾ, ಭಗವಾನ್ ಪರಶುರಾಮ ಜಯಂತಿ, ವೈಶಾಖ ಬುದ್ಧ ಪೂರ್ಣಿಮಾಗಳು ಸಮೀಪಿಸುತ್ತಿವೆ. ಇವೆಲ್ಲವರೂ ಕೂಡ ಸಾಮರಸ್ಯದ ಪ್ರತೀಕಗಳು. ನಾಮು ಮುಂಚಿತವಾಗಿಯೇ ಎಲ್ಲರಿಗೂ ಶುಭಾಶಯವನ್ನು ಕೋರುತ್ತಿದ್ದೇನೆ. ಆದರೆ ಈ ಹಬ್ಬಗಳ ಆಚರಣೆ ವೇಳೆ ಯಾರೂ ಕೊರೊನಾ ನಿಯಂತ್ರಣ  ನಿಯಮಗಳನ್ನು ಮರೆಯಬಾರದು. ಮಾಸ್ಕ್​ನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ್ದರು.

ಭಾರತದಲ್ಲಿ ಈಗೀಗ ಪ್ರತಿದಿನ 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲಾಗುತ್ತಿವೆ. ನಿನ್ನೆ 2483 ಪ್ರಕರಣಗಳು ದಾಖಲಾಗಿದ್ದವು. ಈ ಮೂಲಕ ಭಾರತದ ಒಟ್ಟಾರೆ ಕೊರೊನಾ ಸೋಂಕಿನ ಸಂಖ್ಯೆ   43,062,569ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,636. ದೆಹಲಿ, ಉತ್ತರಪ್ರದೇಶ, ಕರ್ನಾಟಕ, ಪಂಜಾಬ್​​, ಹರ್ಯಾಣಗಳಲ್ಲಿ ಕೊರೊನಾ ಹೆಚ್ಚಳವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ನಡೆಸಲಿರುವ ಸಭೆ ಅತ್ಯಂತ ಮಹತ್ವದ್ದಾಗಿದೆ.

ಇದನ್ನೂ ಓದಿ: ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’: ಯುವ ರಾಜ್​ಕುಮಾರ್​ ಜತೆ ಹೊಸ ಸಿನಿಮಾ ಘೋಷಣೆ

Published On - 9:52 am, Wed, 27 April 22

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ