AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಪ್ರಾಣ ಪ್ರತಿಷ್ಠೆಯಂದು ಪ್ರಧಾನಿ ಮೋದಿ ಇಡೀ ದಿನ ಉಪವಾಸ, ಸರಯೂ ನದಿಯಲ್ಲಿ ಸ್ನಾನ

ಅಯೋಧ್ಯೆ(Ayodhya)ಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ಜನವರಿ 22 ರಂದು ನಡೆಯಲಿದ್ದು ಅಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಉಪವಾಸ ವ್ರತ ಕೈಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ರಾಮಮಂದಿರದ ವಿಗ್ರಹವನ್ನೂ ಆಯ್ಕೆ ಮಾಡಲಾಗಿದೆ. ಜನವರಿ 22 ರಂದು ನಡೆಯಲಿರುವ ಈ ಮಹಾಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕೂಡ ಅಯೋಧ್ಯೆಗೆ ಆಗಮಿಸುತ್ತಿದ್ದು, ಈ ದಿನ ಉಪವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ರಾಮಮಂದಿರ ಪ್ರಾಣ ಪ್ರತಿಷ್ಠೆಯಂದು ಪ್ರಧಾನಿ ಮೋದಿ ಇಡೀ ದಿನ ಉಪವಾಸ, ಸರಯೂ ನದಿಯಲ್ಲಿ ಸ್ನಾನ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jan 03, 2024 | 12:46 PM

Share

ಅಯೋಧ್ಯೆ(Ayodhya)ಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರ(Ram Mandir)ದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ಜನವರಿ 22 ರಂದು ನಡೆಯಲಿದ್ದು ಅಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಉಪವಾಸ ವ್ರತ ಕೈಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ರಾಮಮಂದಿರದ ವಿಗ್ರಹವನ್ನೂ ಆಯ್ಕೆ ಮಾಡಲಾಗಿದೆ. ಜನವರಿ 22 ರಂದು ನಡೆಯಲಿರುವ ಈ ಮಹಾಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕೂಡ ಅಯೋಧ್ಯೆಗೆ ಆಗಮಿಸುತ್ತಿದ್ದು, ಈ ದಿನ ಉಪವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮೊದಲು ಜನವರಿ 16 ರಂದು ಪ್ರಧಾನಿ ಮೋದಿಯವರ ಸಂಕಲ್ಪ ಅಕ್ಷತೆಯನ್ನು ಅಯೋಧ್ಯೆಗೆ ಕೊಂಡೊಯ್ಯಲಾಗುತ್ತದೆ. ಅಕ್ಷತೆ ಬಂದ ನಂತರ 7 ದಿನಗಳ ಆಚರಣೆ ಪ್ರಾರಂಭವಾಗುತ್ತದೆ. ಇದೇ ವೇಳೆ ನಾಲ್ಕು ವೇದಗಳಲ್ಲಿ ಭಕ್ತಿ, ಯಾಗ ನಡೆಯುತ್ತಿದೆ. ಜನವರಿ 15ರವರೆಗೆ ವೈದಿಕರು ಈ ಯಾಗವನ್ನು ನಡೆಸಲಿದ್ದಾರೆ.

ಪ್ರಧಾನಿ ಮೋದಿ ಉಪವಾಸವಿದ್ದುಕೊಂಡೇ ಎಲ್ಲಾ ಧಾರ್ಮಿಕ ಆಚರಣೆಯನ್ನು ಪೂರ್ಣಗೊಳಿಸಬೇಕು, ಮಹಾಮಸ್ತಕಾಭಿಷೇಕ ಕಾರ್ಯಕ್ರಮ ನಡೆಯುವುದರಿಂದ ಇಡೀ ದಿನ ಉಪವಾಸವಿರಬೇಕಾಗುತ್ತದೆ. ಅಷ್ಟೇ ಅಲ್ಲದೆ ಮೋದಿ ಪವಿತ್ರ ನದಿಯಲ್ಲಿ ಸ್ನಾನವನ್ನೂ ಕೂಡ ಮಾಡಬೇಕಾಗುತ್ತದೆ ಎಂದು ಮಹಂತ್ ಮಿಥಿಲೇಶ್​ ಹೇಳಿದ್ದಾರೆ.

ಹಾಗಾಗಿ ಮೋದಿ ಸರಯೂ ನದಿಯಲ್ಲಿ ಸ್ನಾನ ಮಾಡಬಹುದು ಎಂದು ಅಂದಾಜಿಸಲಾಗಿದೆ. 2021ರ ಹಿಂದೆ ಕಾಶಿ ವಿಶ್ವನಾಥ್ ಕಾರಿಡಾರ್ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಗಂಗಾ ಸ್ನಾನ ಮಾಡಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಮತ್ತಷ್ಟು ಓದಿ: ಅಯೋಧ್ಯೆ ರಾಮಮಂದಿರದ 24‌ ಅರ್ಚಕರಲ್ಲಿ ಇಬ್ಬರು ಎಸ್ಸಿ, ಓರ್ವ ಒಬಿಸಿ ಅರ್ಚಕರು, ಮೂರು ತಿಂಗಳ ಗುರುಕುಲ ತರಬೇತಿ

ಪ್ರತಿಷ್ಠಾಪನೆ ನಂತರದ 48 ದಿನ, ದೇಶದಾದ್ಯಂತದ ಪ್ರಮುಖ ಯಾತ್ರಾಸ್ಥಳಗಳಿಂದ ತಂದ 1,000 ಕಲಶಗಳ ನೀರಿನಿಂದ ರಾಮಲಾಲಾ ವಿಗ್ರಹಕ್ಕೆ ಅಭಿಷೇಕ ಮಾಡಲಾಗುವುದು. ಇದಲ್ಲದೆ, ಪೂಜೆಯ ಭಾಗವಾಗಿ ದೇವರಿಗೆ ಕುಂಕುಮ, ಕರ್ಪೂರ ಮತ್ತು ಇತರ ಸಾಮಾಗ್ರಿಗಳನ್ನು ಅರ್ಪಿಸಲಾಗುತ್ತದೆ. ಪ್ರತಿಷ್ಠಾಪನೆ ನಂತರದ ಎಲ್ಲಾ ಪೂಜೆಗಳನ್ನು ಕರ್ನಾಟಕದ ಉಡುಪಿ ಪೇಜಾವರ ಮಠದ ಸ್ವಾಮಿಗಳು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಟ್ರಸ್ಟ್ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?