AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಜನವರಿ 2ಕ್ಕೆ 700 ಕೋಟಿ ರೂ ವೆಚ್ಚದ ಮೇಜರ್ ಧ್ಯಾನ್​ಚಂದ್ ಕ್ರೀಡಾ ವಿವಿಗೆ ಶಂಕುಸ್ಥಾಪನೆ ಮಾಡಲಿರುವ ಪ್ರಧಾನಿ ಮೋದಿ

Major Dhyan Chand Sports University: ಪ್ರಧಾನಿ ನರೇಂದ್ರ ಮೋದಿ ಜನವರಿ 2ರಂದು ಮೇಜರ್ ಧ್ಯಾನ್​ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ವಿಶ್ವವಿದ್ಯಾಲಯದ ವಿಶೇಷವೇನು? ಇಲ್ಲಿದೆ ಮಾಹಿತಿ.

PM Modi: ಜನವರಿ 2ಕ್ಕೆ 700 ಕೋಟಿ ರೂ ವೆಚ್ಚದ ಮೇಜರ್ ಧ್ಯಾನ್​ಚಂದ್ ಕ್ರೀಡಾ ವಿವಿಗೆ ಶಂಕುಸ್ಥಾಪನೆ ಮಾಡಲಿರುವ ಪ್ರಧಾನಿ ಮೋದಿ
ಪ್ರಧಾನಿ ಮೋದಿ
TV9 Web
| Edited By: |

Updated on: Dec 31, 2021 | 1:09 PM

Share

ಮೀರತ್: ಪ್ರಧಾನಿ ನರೇಂದ್ರ ಮೋದಿ ಜನವರಿ 2 ರಂದು ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯವು ಶುಕ್ರವಾರ ಮಾಹಿತಿ ನೀಡಿದೆ. ‘ಮೀರತ್‌ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಗ್ರಾಮಗಳಲ್ಲಿ ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗುವುದು. ಪ್ರಧಾನಮಂತ್ರಿಯವರು ಕ್ರೀಡಾ ಸಂಸ್ಕೃತಿ ಬೆಳೆಸಲು ವಿಶೇಷ ಒಲವು ತೋರಿದ್ದಾರೆ. ದೇಶದ ಎಲ್ಲಾ ಭಾಗಗಳಲ್ಲಿ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ಸ್ಥಾಪಿಸುವುದು ಮತ್ತು ಮೀರತ್‌ನಲ್ಲಿ ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದು ಅವರ ಆಶಯವನ್ನು ಈಡೇರಿಸುವ ಪ್ರಮುಖ ಹೆಜ್ಜೆಯಾಗಿದೆ’ ಎಂದು ಪಿಎಂಓ ಹೇಳಿದೆ.

ಮೇಜರ್ ಧ್ಯಾನ್​ಚಂದ್ ಕ್ರೀಡಾ ವಿವಿಯ ವಿಶೇಷವೇನು? ಮೇಜರ್ ಧ್ಯಾನ್​ಚಂದ್ ಕ್ರೀಡಾ ವಿಶ್ವವಿದ್ಯಾಲಯವು ಸಿಂಥೆಟಿಕ್ ಹಾಕಿ ಮತ್ತು ಫುಟ್‌ಬಾಲ್ ಮೈದಾನಗಳು, ಬಾಸ್ಕೆಟ್‌ಬಾಲ್, ವಾಲಿಬಾಲ್, ಹ್ಯಾಂಡ್‌ಬಾಲ್ ಮತ್ತು ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜುಕೊಳ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ. ಇದರೊಂದಿಗೆ ವಿವಿಧೋದ್ದೇಶಕ್ಕೆ ಬಳಸಬಹುದಾದ ಹಾಲ್ ಮತ್ತು ಸೈಕ್ಲಿಂಗ್ ವೆಲೋಡ್ರೋಮ್ ಕೂಡ ಇರಲಿದೆ.

ಇದು ಶೂಟಿಂಗ್, ಸ್ಕ್ವಾಷ್, ಜಿಮ್ನಾಸ್ಟಿಕ್ಸ್, ವೇಟ್‌ಲಿಫ್ಟಿಂಗ್, ಬಿಲ್ಲುಗಾರಿಕೆ, ಕ್ಯಾನೋಯಿಂಗ್ ಮತ್ತು ಕಯಾಕಿಂಗ್‌ಗೆ ಇತರ ಸೌಲಭ್ಯಗಳನ್ನು ಹೊಂದಿದೆ. ವಿಶ್ವವಿದ್ಯಾನಿಲಯವು 540 ಮಹಿಳೆಯರು ಮತ್ತು 540 ಪುರುಷ ಕ್ರೀಡಾಪಟುಗಳು ಸೇರಿದಂತೆ 1,080 ಕ್ರೀಡಾಪಟುಗಳಿಗೆ ತರಬೇತಿ ನೀಡುವ ಸಾಮರ್ಥ್ಯವನ್ನು ಹೊಂದಿರುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:

Chennai Rains ಚೆನ್ನೈನಲ್ಲಿ ಮುಂದಿನ 3 ದಿನಗಳವರೆಗೆ ಮಳೆ ಮುಂದುವರಿಕೆ; 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಜಿಲ್ಲಾಧಿಕಾರಿಗಳಾಗಿ ಬಾಸಿಸಂ ಬಿಡಿ: ತುಂಬಾ ವಿನಯತೆ, ಎಚ್ಚರಿಕೆಯಿಂದ ಕೆಲಸ ಮಾಡಿ -ಸಿಎಂ ಬೊಮ್ಮಾಯಿ ತಾಕೀತು

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು