AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಇಂದು ಪಿಎಂ-ಕಿಸಾನ್​ ಯೋಜನೆಯ 10ನೇ ಕಂತು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ; ಪರಿಶೀಲನೆ ವಿಧಾನ ಹೇಗೆ?- ಇಲ್ಲಿದೆ ಮಾಹಿತಿ

ಇಂದು ಬಿಡುಗಡೆ ಮಾಡುತ್ತಿರುವ 10ನೇ ಕಂತು, ದೇಶದ ಸುಮಾರು 10 ಕೋಟಿ ರೈತ ಕುಟುಂಬಗಳಿಗೆ 20 ಸಾವಿರ ಕೋಟಿ ರೂಪಾಯಿ ವರ್ಗಾವಣೆ ಮಾಡುವ ಯೋಜನೆಯನ್ನು ಒಳಗೊಂಡಿದೆ.

PM Modi: ಇಂದು ಪಿಎಂ-ಕಿಸಾನ್​ ಯೋಜನೆಯ 10ನೇ ಕಂತು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ; ಪರಿಶೀಲನೆ ವಿಧಾನ ಹೇಗೆ?- ಇಲ್ಲಿದೆ ಮಾಹಿತಿ
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on: Jan 01, 2022 | 11:16 AM

Share

ಪ್ರಧಾನಮಂತ್ರಿ ಕಿಸಾನ್​ ಸಮ್ಮಾನ್​ ನಿಧಿ (ಪಿಎಂ-ಕಿಸಾನ್​) (Pradhan Mantri Kisan Samman Nidhi) ಯೋಜನೆಯಡಿಯಲ್ಲಿ ಬರುವ ಆರ್ಥಿಕ ಪ್ರಯೋಜನಗಳ 10ನೇ ಕಂತನ್ನು ಇಂದು ಮಧ್ಯಾಹ್ನ 12.30ರ ಹೊತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಬಿಡುಗಡೆ ಮಾಡಲಿದ್ದಾರೆ. ಹೊಸವರ್ಷದ ಮೊದಲ ದಿನ ವಿಡಿಯೋ ಕಾನ್ಫರೆನ್ಸ್​ ಮೂಲಕ ಮೋದಿಯವರು ಈ ಇನ್​ಸ್ಟಾಲ್​ಮೆಂಟ್​ ಬಿಡುಗಡೆ ಮಾಡುತ್ತಿದ್ದಾರೆ.  ದೇಶದ ತಳಮಟ್ಟದ ರೈತರ ಸಬಲೀಕರಣ ಮತ್ತು ಸರ್ಕಾರದ ನಿರಂತರ ಬದ್ಧತೆಗೆ ಪೂರಕವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. 

ಇಂದು ಬಿಡುಗಡೆ ಮಾಡುತ್ತಿರುವ 10ನೇ ಕಂತು, ದೇಶದ ಸುಮಾರು 10 ಕೋಟಿ ರೈತ ಕುಟುಂಬಗಳಿಗೆ 20 ಸಾವಿರ ಕೋಟಿ ರೂಪಾಯಿ ವರ್ಗಾವಣೆ ಮಾಡುವ ಯೋಜನೆಯನ್ನು ಒಳಗೊಂಡಿದೆ. ಪಿಎಂ-ಕಿಸಾನ್​ ಯೋಜನೆಯಡಿ ವಾರ್ಷಿಕ 6 ಸಾವಿರ ರೂಪಾಯಿಗಳನ್ನು ಅರ್ಹ ಫಲಾನುಭವಿ ರೈತರ ಖಾತೆಗೆ ನೀಡಲಾಗುತ್ತಿದೆ. ಈ ಹಣವನ್ನು ನೇರವಾಗಿ ರೈತರ ಖಾತೆಗೇ ಹಾಕಲಾಗುತ್ತಿದೆ. ಇಲ್ಲಿಯವರೆಗೆ ಪ್ರಸಕ್ತ ಯೋಜನೆಯಡಿ 1.6 ಲಕ್ಷ ಕೋಟಿ ರೂಪಾಯಿಗಳಷ್ಟು ಸಮ್ಮಾನ್ ರಾಶಿಯನ್ನು ರೈತರ ಕುಟುಂಬಗಳ ಬ್ಯಾಂಕ್​ ಖಾತೆಗೆ ವರ್ಗಾಯಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.

ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸುಮಾರು 351 ರೈತ ಉತ್ಪಾದನಾ ಸಂಸ್ಥೆಗಳಿಗೆ 14 ಕೋಟಿ ರೂ.ಗೂ ಅಧಿಕ ಈಕ್ವಿಟಿ ಅನುದಾನ ಬಿಡುಗಡೆ ಮಾಡಲಿದ್ದಾರೆ. ಇದು ಸುಮಾರು 1.24 ಲಕ್ಷ ರೈತರಿಗೆ ಅನುಕೂಲ ಒದಗಿಸಲಿದೆ. ಇದೇ ವೇಳೆ ರೈತ ಉತ್ಪಾದನಾ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಅದಾದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.

ನಿಮ್ಮ ಕಿಸಾನ್​-ಸಮ್ಮಾನ್​ ಕಂತನ್ನು ಪರಿಶೀಲನೆ ಮಾಡುವ ವಿಧಾನ ಹೀಗಿದೆ..  1. ಮೊದಲು ಕಿಸಾನ್ ಸಮ್ಮಾನ್​ ಯೋಜನೆಯ ಅಧಿಕೃತ ವೆಬ್​ಸೈಟ್​ https://pmkisan.gov.in/. ಗೆ ಭೇಟಿ ನೀಡಿ 2.ಹೋಂ ಪೇಜ್​​ನಲ್ಲಿರುವ ‘Farmer’s Corner Section’ ಮೇಲೆ ಕ್ಲಿಕ್​ ಮಾಡಿ. 3.  ಅದರಲ್ಲಿ Beneficiary Status (ಫಲಾನುಭವಿಗಳ ಸ್ಥಿತಿ) ಎಂಬ ಆಪ್ಷನ್​ನ್ನು ಆಯ್ಕೆ ಮಾಡಿ. (ಅಲ್ಲಿ ಈ ಯೋಜನೆಯ ಫಲಾನುಭವಿ ಆತನ/ಆಕೆಯ ಅರ್ಜಿಯ ಸ್ಥಿತಿ ಪರಿಶೀಲನೆ ಮಾಡಬಹುದು. ಕಿಸಾನ್​-ಸಮ್ಮಾನ್​ ಯೋಜನೆಯ ಫಲಾನುಭವಿ ರೈತರ ಹೆಸರು ಮತ್ತು ಅವರ ಬ್ಯಾಂಕ್​ಗೆ ಕಳಿಸಲಾದ ಹಣದ ಮೊತ್ತದ ಪಟ್ಟಿ ಇರುತ್ತದೆ. ( 4. ಫಲಾನುಭವಿಗಳ ಸ್ಥಿತಿ ಕ್ಲಿಕ್​ ಮಾಡಿದ ಮೇಲೆ, ಅಲ್ಲಿ ನಿಮ್ಮ ಆಧಾರ್ ನಂಬರ್​ ಅಥವಾ ಫೋನ್ ನಂಬರ್​ ಅಥವಾ ಅಕೌಂಟ್ ನಂಬರ್ ನಮೂದಿಸಬೇಕು. 5. ಇಷ್ಟಾದ ಮೇಲೆ ನಿಮ್ಮ ಡಾಟಾ ಪಡೆಯಬಹುದು.

ಇದನ್ನೂ ಓದಿ:  ಬೆಳಗಾವಿ ಅಧಿವೇಶನದ ವೇಳೆ ಎಂಇಎಸ್​ ಪುಂಡಾಟಿಕೆ: ಪೊಲೀಸ್ ಆಯುಕ್ತ ಎತ್ತಂಗಡಿ, ದುಷ್ಕರ್ಮಿಗಳಿಗೆ ಸಿಗಲಿಲ್ಲ ಜಾಮೀನು

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ