AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆ ಇಂದು; ವರ್ಚುವಲ್ ಆಗಿ ಸಭೆ ಆಯೋಜಿಸಲಿದ್ದಾರೆ ನರೇಂದ್ರ ಮೋದಿ

ಭಾರತ ಮತ್ತು ಮಧ್ಯ ಏಷ್ಯಾ ರಾಷ್ಟ್ರಗಳ ನಡುವೆ ನಾಯಕರ ಮಟ್ಟದಲ್ಲಿ ಈ ರೀತಿಯ ಮೊದಲ ಸಭೆ ಇದಾಗಿದೆ. ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆಯು ಭಾರತದ ವಿಸ್ತೃತ ನೆರೆಹೊರೆಯ ಭಾಗವಾಗಿರುವ ಮಧ್ಯ ಏಷ್ಯಾದ ದೇಶಗಳೊಂದಿಗೆ...

ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆ ಇಂದು; ವರ್ಚುವಲ್ ಆಗಿ ಸಭೆ ಆಯೋಜಿಸಲಿದ್ದಾರೆ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 27, 2022 | 11:24 AM

Share

ದೆಹಲಿ: ಕಝಾಕಿಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರು ಭಾಗವಹಿಸುವ ಭಾರತ-ಮಧ್ಯ ಏಷ್ಯಾ ಶೃಂಗಸಭೆಯ(India-Central Asia Summit) ಮೊದಲ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಗುರುವಾರ ವರ್ಚುವಲ್ ಸ್ವರೂಪದಲ್ಲಿ ಆಯೋಜಿಸಲಿದ್ದಾರೆ. ಭಾರತ ಮತ್ತು ಮಧ್ಯ ಏಷ್ಯಾ ರಾಷ್ಟ್ರಗಳ ನಡುವೆ ನಾಯಕರ ಮಟ್ಟದಲ್ಲಿ ಈ ರೀತಿಯ ಮೊದಲ ಸಭೆ ಇದಾಗಿದೆ. ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆಯು ಭಾರತದ ವಿಸ್ತೃತ ನೆರೆಹೊರೆಯ ಭಾಗವಾಗಿರುವ ಮಧ್ಯ ಏಷ್ಯಾದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಸಂಬಂಧದ ಪ್ರತಿಬಿಂಬವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು 2015 ರಲ್ಲಿ ಎಲ್ಲಾ ಮಧ್ಯ ಏಷ್ಯಾದ ದೇಶಗಳಿಗೆ ಐತಿಹಾಸಿಕ ಭೇಟಿ ನೀಡಿದರು. ತರುವಾಯ, ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಉನ್ನತ ಮಟ್ಟದ ವಿನಿಮಯಗಳು ನಡೆದಿವೆ.  ವಿದೇಶಾಂಗ ಸಚಿವರ ಮಟ್ಟದಲ್ಲಿ ಭಾರತ-ಮಧ್ಯ ಏಷ್ಯಾ ಸಂವಾದದ ಆರಂಭ, ಕಳೆದ ವರ್ಷ ಡಿಸೆಂಬರ್ 18-20 ರವರೆಗೆ ನವದೆಹಲಿಯಲ್ಲಿ ನಡೆದ ಮೂರನೇ ಸಭೆಯು ಭಾರತ-ಮಧ್ಯ ಏಷ್ಯಾ ಸಂಬಂಧಗಳಿಗೆ ಪ್ರಚೋದನೆಯನ್ನು ಒದಗಿಸಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.  ಕಳೆದ ವರ್ಷ ನವೆಂಬರ್ 10 ರಂದು ನವದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನದ ಪ್ರಾದೇಶಿಕ ಭದ್ರತಾ ಸಂವಾದದಲ್ಲಿ ಮಧ್ಯ ಏಷ್ಯಾದ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಮಂಡಳಿಗಳ ಕಾರ್ಯದರ್ಶಿಗಳ ಭಾಗವಹಿಸುವಿಕೆ ಅಫ್ಘಾನಿಸ್ತಾನದ ಬಗ್ಗೆ ಸಾಮಾನ್ಯ ಪ್ರಾದೇಶಿಕ ವಿಧಾನವನ್ನು ವಿವರಿಸಿದೆ ಎಂದು ಅದು ಹೇಳಿದೆ.

ಸಭೆಯ ಅಜೆಂಡಾ ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆಯ ಸಂದರ್ಭದಲ್ಲಿ ಭಾರತ-ಮಧ್ಯ ಏಷ್ಯಾ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಕ್ರಮಗಳನ್ನು ನಾಯಕರು ಚರ್ಚಿಸುವ ನಿರೀಕ್ಷೆಯಿದೆ. ಅವರು ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಆಸಕ್ತಿಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ನಿರೀಕ್ಷೆಯಿದೆ, ವಿಶೇಷವಾಗಿ ವಿಕಸನಗೊಳ್ಳುತ್ತಿರುವ ಪ್ರಾದೇಶಿಕ ಭದ್ರತಾ ಪರಿಸ್ಥಿತಿಯ ಬಗ್ಗೆಯೂ ಇಲ್ಲಿ ಚರ್ಚೆಯಾಗಲಿದೆ.  ಈ ಶೃಂಗಸಭೆಯು ಭಾರತ ಮತ್ತು ಮಧ್ಯ ಏಷ್ಯಾದ ದೇಶಗಳ ನಾಯಕರು ಸಮಗ್ರ ಮತ್ತು ನಿರಂತರವಾದ ಭಾರತ-ಮಧ್ಯ ಏಷ್ಯಾ ಪಾಲುದಾರಿಕೆಗೆ ನೀಡಿದ ಪ್ರಾಮುಖ್ಯತೆಯ ಸಂಕೇತವಾಗಿದೆ.

ಇದನ್ನೂ ಓದಿ: ರೈಲ್ವೇ ನೇಮಕಾತಿ ಮಂಡಳಿ ಫಲಿತಾಂಶದ ವಿರುದ್ಧ ಪ್ರತಿಭಟನೆ: ಶುಕ್ರವಾರ ಬಿಹಾರ ಬಂದ್​​ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

Published On - 11:24 am, Thu, 27 January 22

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ