AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿಯಿಂದ ಧ್ಯಾನ

ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮೇ 30ರಂದು ತಮಿಳುನಾಡಿನ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. 2 ದಿನಗಳ ಕಾಲ ಅಲ್ಲಿಯೇ ಇದ್ದು ಮೇ 31ರಂದು ವಿವೇಕಾನಂದ ರಾಕ್ ಮೆಮೋರಿಯಲ್ ಹಾಲ್​ನಲ್ಲಿ ಮೋದಿ ಧ್ಯಾನ ಮಾಡಲಿದ್ದಾರೆ. ಜೂನ್ 1ರಂದು ಕನ್ಯಾಕುಮಾರಿಯಿಂದ ತೆರಳುವ ನಿರೀಕ್ಷೆಯಿದೆ.

PM Narendra Modi: ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿಯಿಂದ ಧ್ಯಾನ
ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: May 28, 2024 | 4:06 PM

Share

ಕನ್ಯಾಕುಮಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಕನ್ಯಾಕುಮಾರಿಯಲ್ಲಿರುವ ಬಂಡೆ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಅಂದರೆ ಮೇ 31ರಂದು ವಿವೇಕಾನಂದ ರಾಕ್ ಮೆಮೋರಿಯಲ್ ಹಾಲ್​ನಲ್ಲಿ (Swami Vivekananda Rock Memorial Hall) ಮೋದಿ ಧ್ಯಾನ ಮಾಡಲಿದ್ದಾರೆ. ಮೇ 31ರ ಸಂಜೆಯಿಂದ ಜೂನ್ 1ರ ಸಂಜೆಯವರೆಗೆ ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಧ್ಯಾನ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರು ಭಾರತ ಮಾತೆಯ ದರ್ಶನ ಪಡೆದ ಸ್ಥಳ ಕನ್ಯಾಕುಮಾರಿ (Kanniyakumari). ಈ ಬಂಡೆಯು ಸ್ವಾಮಿ ವಿವೇಕಾನಂದರ ಜೀವನದ ಮೇಲೆ ದೊಡ್ಡ ಪ್ರಭಾವ ಬೀರಿತು. ಗೌತಮ ಬುದ್ಧನ ಜೀವನದಲ್ಲಿ ಸಾರನಾಥಕ್ಕೆ ವಿಶೇಷ ಸ್ಥಾನವಿದೆ ಎಂದು ಜನರು ನಂಬುತ್ತಾರೆ. ಈ ಬಂಡೆಯು ಸ್ವಾಮಿ ವಿವೇಕಾನಂದರ ಜೀವನದಲ್ಲಿಯೂ ಸಹ ಅದೇ ಸ್ಥಾನವನ್ನು ಹೊಂದಿದೆ.

ಪಾರ್ವತಿ ದೇವಿಯು ಸಹ ಅದೇ ಸ್ಥಳದಲ್ಲಿ ಭಗವಾನ್ ಶಿವನಿಗಾಗಿ ಕಾಯುತ್ತಾ ಒಂದೇ ಕಾಲಿನಲ್ಲಿ ನಿಂತು ಧ್ಯಾನ ಮಾಡಿದ್ದಳು ಎಂಬ ನಂಬಿಕೆಯಿದೆ. ಕನ್ಯಾಕುಮಾರಿ ಭಾರತದ ದಕ್ಷಿಣದ ತುದಿಯಾಗಿದೆ. ಇದಲ್ಲದೆ, ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿಗಳು ಸಂಧಿಸುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ. ಪ್ರಧಾನಿ ಮೋದಿಯವರು ಕನ್ಯಾಕುಮಾರಿಗೆ ಹೋಗುವ ಮೂಲಕ ರಾಷ್ಟ್ರೀಯ ಏಕತೆಯ ಸಂಕೇತವನ್ನು ನೀಡುತ್ತಿದ್ದಾರೆ.

ಇದನ್ನೂ ಓದಿ: ‘ನರೇಂದ್ರ ಮೋದಿ ಒಬಿಸಿ ಆದದ್ದು ಹೇಗೆ?’; ಜಾತಿ ಗಣತಿ ಪರ ಮತ್ತೆ ರಾಹುಲ್ ಗಾಂಧಿ ಬ್ಯಾಟಿಂಗ್

ಚುನಾವಣೆ ಮುಗಿದ ನಂತರವೂ ಅವರು ಕನ್ಯಾಕುಮಾರಿಗೆ ಭೇಟಿ ನೀಡುತ್ತಿರುವುದು ಪ್ರಧಾನಿಯವರ ಆಳವಾದ ಬದ್ಧತೆ ಮತ್ತು ತಮಿಳುನಾಡಿನ ಮೇಲಿನ ಪ್ರೀತಿಯನ್ನು ತೋರಿಸುತ್ತದೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಮಂತ್ರಿ ಆಧ್ಯಾತ್ಮಿಕ ಯಾತ್ರೆಗಳನ್ನು ಕೈಗೊಳ್ಳುತ್ತಾರೆ.

ನರೇಂದ್ರ ಮೋದಿಯವರು ಕಳೆದ 2 ಬಾರಿಯೂ ಚುನಾವಣೆ ಮುಗಿದ ಬಳಿಕ ಫಲಿತಾಂಶ ಬರುವುದಕ್ಕೂ ಮೊದಲು ಆಧ್ಯಾತ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ್ದರು. ಈ ಬಾರಿ ನರೇಂದ್ರ ಮೋದಿ ಅವರು ಮೇ 30ರಂದು ಕನ್ಯಾಕುಮಾರಿ ತಲುಪುತ್ತಾರೆ ಮತ್ತು ಜೂನ್ 1ರವರೆಗೆ ಅಲ್ಲಿಯೇ ಇರುತ್ತಾರೆ. 2019ರಲ್ಲಿ ಚುನಾವಣೆಯ ಬಳಿಕ ಮೋದಿ ಅವರು ಕೇದಾರನಾಥಕ್ಕೆ ಭೇಟಿ ನೀಡಿದ್ದರು. 2014ರಲ್ಲಿ ಅವರು ಶಿವಾಜಿಯ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಚೀನಾದೊಂದಿಗೆ ಮೋದಿ ಡಿಸ್ಕೋ ಮಾಡುತ್ತಿದ್ದಾರೆ; ಪ್ರಧಾನಿ ‘ಮುಜ್ರಾ’ ಹೇಳಿಕೆಗೆ ಅಸಾದುದ್ದೀನ್ ಓವೈಸಿ ತಿರುಗೇಟು

2019ರ ಲೋಕಸಭಾ ಚುನಾವಣೆಯ ಮತ ಎಣಿಕೆಗೂ ಕೆಲವು ದಿನಗಳ ಮೊದಲು ಪ್ರಧಾನಿ ಮೋದಿ ಉತ್ತರಾಖಂಡದ ಕೇದಾರನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಪ್ರಧಾನಿ ಮೋದಿ ಹಿಮಾಲಯದ 11,700 ಅಡಿ ಎತ್ತರದ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಕೇದಾರನಾಥದಿಂದ 1 ಕಿಲೋ ಮೀಟರ್ ದೂರದಲ್ಲಿರುವ ಈಗ ಪ್ರಸಿದ್ಧವಾದ ರುದ್ರ ಧ್ಯಾನದ ಗುಹೆಯಲ್ಲಿ ಅವರು ರಾತ್ರಿಯನ್ನು ಕಳೆದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್