AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪ್ರಧಾನಿ ಇಮ್ರಾನ್ ಖಾನ್​ಗೆ ಕೊರೊನಾ ಪಾಸಿಟಿವ್; ಶೀಘ್ರ ಗುಣಮುಖರಾಗಿ ಎಂದು ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ

ಇಮ್ರಾನ್ ಖಾನ್​ಗೆ ಕೊವಿಡ್ ಪಾಸಿಟಿವ್ ಬಂದಿರುವ ಬಗ್ಗೆ ಟ್ವಿಟ್ ಮಾಡಿದ್ದ ಆರೋಗ್ಯ ಸಚಿವರು, ಇಮ್ರಾನ್ ಖಾನ್ ಎರಡು ದಿನಗಳಿಂದ ಕ್ವಾರಂಟೈನ್​ನಲ್ಲಿ ಇದ್ದಾರೆ ಎಂದು ತಿಳಿಸಿದ್ದರು. ಎರಡು ದಿನಗಳ ಹಿಂದಷ್ಟೇ ಚೀನಾದ ಕೊರೊನಾ ಲಸಿಕೆ ಸಿನೋಫಾರ್ಮ್​ನ್ನು ಇಮ್ರಾನ್ ಖಾನ್ ಚುಚ್ಚಿಸಿಕೊಂಡಿದ್ದರು.

ಪಾಕ್ ಪ್ರಧಾನಿ ಇಮ್ರಾನ್ ಖಾನ್​ಗೆ ಕೊರೊನಾ ಪಾಸಿಟಿವ್; ಶೀಘ್ರ ಗುಣಮುಖರಾಗಿ ಎಂದು ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Apr 06, 2022 | 6:57 PM

Share

ದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶೀಘ್ರ ಗುಣಮುಖರಾಗಲಿ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಕೊವಿಡ್-19ನಿಂದ ಇಮ್ರಾನ್ ಖಾನ್ ಬೇಗ ಗುಣಮುಖರಾಗಲಿ ಎಂದು ಮೋದಿ ಶುಭಹಾರೈಸಿದ್ದಾರೆ. ಇಮ್ರಾನ್ ಖಾನ್​ಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ ಎಂದು ಪಾಕಿಸ್ತಾನ ಆರೋಗ್ಯ ಸಚಿವ ಫೈಸಲ್ ಸುಲ್ತಾನ ಇಂದು (ಮಾರ್ಚ್ 20) ತಿಳಿಸಿದ್ದರು.

ಇಮ್ರಾನ್ ಖಾನ್​ಗೆ ಕೊವಿಡ್ ಪಾಸಿಟಿವ್ ಬಂದಿರುವ ಬಗ್ಗೆ ಟ್ವಿಟ್ ಮಾಡಿದ್ದ ಆರೋಗ್ಯ ಸಚಿವರು, ಇಮ್ರಾನ್ ಖಾನ್ ಎರಡು ದಿನಗಳಿಂದ ಕ್ವಾರಂಟೈನ್​ನಲ್ಲಿ ಇದ್ದಾರೆ ಎಂದು ತಿಳಿಸಿದ್ದರು. ಎರಡು ದಿನಗಳ ಹಿಂದಷ್ಟೇ ಚೀನಾದ ಕೊರೊನಾ ಲಸಿಕೆ ಸಿನೋಫಾರ್ಮ್​ನ್ನು ಇಮ್ರಾನ್ ಖಾನ್ ಚುಚ್ಚಿಸಿಕೊಂಡಿದ್ದರು.

ಇದುವರೆಗೆ ಪಾಕಿಸ್ತಾನದಲ್ಲಿ 6,23,135 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುತ್ತಿದೆ. 5,79.769 ಸೋಂಕಿತರು ಈಗಾಗಲೇ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 13,799 ಸಾರ್ವಜನಿಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲದೇ ಕಳೆದ 24ಗಂಟೆಗಳಲ್ಲಿ 2021ರಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದು,  3,876 ಕೊರೊನೊ ಸೋಂಕಿತರು ಪತ್ತೆಯಾಗಿದ್ದಾರೆ. ಇದು ಸಹಜವಾಗಿ ಪಾಕಿಸ್ತಾನ ಆತಂಕ ಹೆಚ್ಚಿಸಿದೆ.

ಪಾಕಿಸ್ತಾನ ಸೂಪರ್ ಲೀಗ್​ಗೂ ಕಾಡಿತ್ತು ಕೊರೊನಾ ಕೊರೊನಾ ಸ್ವಲ್ಪ ಕಡಿಮೆಯಾಯಿತು ಎಂದು ಅಂದುಕೊಳ್ಳುವಷ್ಟರಲ್ಲಿ ವಿಶ್ವದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಸೋಂಕು ನಿಯಂತ್ರಿಸಬೇಕು ಎಂದು ಎಷ್ಟೋ ಪಂದ್ಯಾವಳಿಗಳನ್ನು, ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು, ಮುಂದೂಡಲಾಗಿತ್ತು. ಕೊರೊನಾದಿಂದ ಆದಷ್ಟು ದೂರವಿದ್ದೇ ನಿಧಾನವಾಗಿ ಕ್ರೀಡಾರಂಗ ಚಿಗುರುತ್ತಿದ್ದರೂ, ಪಾಕಿಸ್ತಾನ ಸೂಪರ್ ಲೀಗ್​ಗೆ ಸಹ ಅಡ್ಡಗಾಲಾಗಿ ಪರಿಣಮಿಸಿತ್ತು.

ಫೆಬ್ರವರಿ 20ರಿಂದಲೇ ಆರಂಭವಾಗಿದ್ದ ಪಾಕಿಸ್ತಾನ ಸೂಪರ್ ಲೀಗ್​ನ್ನು ಸದ್ಯ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಾತ್ಕಾಲಿಕವಾಗಿ ನಿಲ್ಲಿಸಿತ್ತು. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಏಳು ಕ್ರಿಕೆಟಿಗರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಂದ್ಯಾವಳಿ ಸ್ಥಗಿತಗೊಂಡಿತ್ತು. ‘ಆಟಗಾರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪಂದ್ಯಾವಳಿಯನ್ನು ನಿಲ್ಲಿಸಿದ್ದೇವೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೊಳ್ಳಲಿದೆ’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿತ್ತು.

ಮಾರ್ಚ್ 1ರಂದು ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಭಾಗವಹಿಸಿದ್ದ ಇಸ್ಲಾಮಾಬಾದ್ ಯನೈಟೆಡ್ ತಂಡದ ಆಟಗಾರ ಫವಾದ್ ಅಹ್ಮದ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ನಂತರ ಅವರ ಜತೆ ಬೆರೆತ ಆಟಗಾರರಿಗೆ ಕೊರೊನೊ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಇದೀಗ ಒಟ್ಟು 7 ಆಟಗಾರರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಕಾರಣ ಪಂದ್ಯಾವಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧಾರ ಕೈಗೊಂಡಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಭಾರತ-ಪಾಕ್ ಸಂಬಂಧಕ್ಕೆ ಕಾಶ್ಮೀರವೊಂದೇ ತಡೆ, ಶಾಂತಿ ಸ್ಥಾಪನೆಗೆ ಭಾರತವೇ ಮೊದಲ ಹೆಜ್ಜೆ ಇಡಬೇಕು: ಇಮ್ರಾನ್ ಖಾನ್

ದೇಶ ಮುನ್ನಡೆಸಲು ಇಮ್ರಾನ್ ಖಾನ್ ಸರ್ಕಾರ ಅಸಮರ್ಥ: ಪಾಕಿಸ್ತಾನ ಸುಪ್ರೀಂಕೋರ್ಟ್

Published On - 9:31 pm, Sat, 20 March 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ