AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಪ್ರಕಾಶ್ ಸಿಂಗ್ ಬಾದಲ್ ಮಹಾನ್ ರಾಜಕೀಯ ನಾಯಕ ಮಾತ್ರವಲ್ಲ, ಹೃದಯವಂತರು: ನರೇಂದ್ರ ಮೋದಿ ಪದ ನಮನ

ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿರುವ ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್(Parkash Singh Badal)​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪದ ನಮನ ಸಲ್ಲಿಸಿದ್ದಾರೆ.

Narendra Modi: ಪ್ರಕಾಶ್ ಸಿಂಗ್ ಬಾದಲ್ ಮಹಾನ್ ರಾಜಕೀಯ ನಾಯಕ ಮಾತ್ರವಲ್ಲ, ಹೃದಯವಂತರು: ನರೇಂದ್ರ ಮೋದಿ ಪದ ನಮನ
ನರೇಂದ್ರ ಮೋದಿ, ಪ್ರಕಾಶ್ ಸಿಂಗ್ ಬಾದಲ್Image Credit source: Tribune India
ನಯನಾ ರಾಜೀವ್
|

Updated on: Apr 28, 2023 | 11:40 AM

Share

ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿರುವ ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್(Parkash Singh Badal)​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪದ ನಮನ ಸಲ್ಲಿಸಿದ್ದಾರೆ. ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಏಪ್ರಿಲ್ 25 ರಂದು ನಿಧನರಾಗಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಚಂಡೀಗಢ ತಲುಪಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಇದೀಗ ಪ್ರಕಾಶ್ ಸಿಂಗ್ ಬಾದಲ್ ಅವರ ನೆನಪಿಗಾಗಿ ಪ್ರಧಾನಿ ಲೇಖನವೊಂದನ್ನು ಬರೆದಿದ್ದಾರೆ. ಸರ್ದಾರ್ ಪ್ರಕಾಶ್ ಸಿಂಗ್ ಬಾದಲ್ ಅವರ ಸಾವಿನ ಸುದ್ದಿ ತಿಳಿದಾಗ ತುಂಬಾ ದುಃಖವಾಯಿತು ಎಂದು ಅವರು ಈ ಲೇಖನದಲ್ಲಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಪ್ರಕಾಶ್ ಸಿಂಗ್ ಬಾದಲ್ ಅವರನ್ನು ತಮ್ಮ ತಂದೆಗೆ ಹೋಲಿಸಿದ್ದಾರೆ ಮತ್ತು ಅವರು ತಮ್ಮ ತಂದೆಯನ್ನು ಕಳೆದುಕೊಂಡಂತೆ ಭಾಸವಾಗುತ್ತಿದೆ ಎಂದು ಬರೆದಿದ್ದಾರೆ. ಬಾದಲ್ ಅವರು ಕೇವಲ ಉತ್ತಮ ರಾಜಕೀಯ ನಾಯರಷ್ಟೇ ಅಲ್ಲದೆ, ಹೃದಯವಂತರೂ ಕೂಡ ಎಂದಿದ್ದಾರೆ.

ಪ್ರಕಾಶ್ ಸಿಂಗ್ ಬಾದಲ್ ಭೇಟಿ ಕುರಿತು ಪ್ರಸ್ತಾಪ ತಮ್ಮ ಲೇಖನದಲ್ಲಿ, ನರೇಂದ್ರ ಮೋದಿಯವರು ತಾವು ಸಾಮಾನ್ಯ ಕಾರ್ಯಕರ್ತರಾಗಿದ್ದಾಗಿನ ಸಂದರ್ಭವನ್ನು ಉಲ್ಲೇಖಿಸಿದ್ದಾರೆ. ಆ ಸಮಯದಲ್ಲಿ ಪ್ರಕಾಶ್ ಸಿಂಗ್ ಭಾದಲ್ ಪಂಜಾಬ್​ನ ಮುಖ್ಯಮಂತ್ರಿಯಾಗಿದ್ದರು. 1990ರಲ್ಲಿ ಕೆಲಸದ ನಿಮಿತ್ತ ಉತ್ತರ ಭಾರತಕ್ಕೆ ಬರಬೇಕಿತ್ತು, ಆಗ ಅವರನ್ನು ಭೇಟಿಯಾಗಿದ್ದೆ, ಆಗಲೇ ಅವರಿಗೆ ತುಂಬಾ ಹೆಸರಿತ್ತು, ಆದರೆ ಕಿಂಚಿತ್ತೂ ಸ್ವಾರ್ಥವಿರಲಿಲ್ಲ, ಬಾದಲ್​ ಅವರ ಹಾಸ್ಯಪ್ರಜ್ಞೆಯು ಉತ್ತಮವಾಗಿತ್ತು ಎಂದು ಪ್ರಧಾನಿ ಬರೆದಿದ್ದಾರೆ.

ಮತ್ತಷ್ಟು ಓದಿ: Parkash Singh Badal: ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬಾದಲ್ ಅವರು ನನ್ನ ಬಳಿ ಬಂದು ನಾವಿಬ್ಬರೂ ಅಮೃತಸರಕ್ಕೆ ಹೋಗುತ್ತಿದ್ದೇವೆ ಎಂದು ಹೇಳಿದರು. ಒಂದು ದಿನ ಅಲ್ಲಿಯೇ ಉಳಿಯೋಣ ಮರುದಿನ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳೋಣ ಎಂದಿದ್ದರು.

ನಾನು ಅತಿಥಿಗೃಹದಲ್ಲಿ ಉಳಿದುಕೊಂಡಿದ್ದೆ, ಆಗ ಅವರು ಕೋಣೆಗೆ ಬಂದರು, ನನ್ನ ವಸ್ತುಗಳನ್ನೆಲ್ಲಾ ಒಂದೆಡೆ ಸೇರಿಸಲು ಶುರು ಮಾಡಿದರು, ನಾನು ಆಗ ಯಾಕೆ ಹೀಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ, ಮುಖ್ಯಮಂತ್ರಿಗಳಿಗಾಗಿ ನೀಡಿದ್ದ ಕೋಣೆಯಲ್ಲಿ ತಮ್ಮ ಜತೆಯಲ್ಲಿ ನೀನೂ ಕೂಡ ಇರಬೇಕು ಎಂದಿದ್ದರು. ಆಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದೆ, ಹಾಗೆಯೇ ಬಾದಲ್ ಅವರ ಮಾತು ಕೇಳಿ ಆಶ್ಚರ್ಯಗೊಂಡಿದ್ದೆ ಎಂದು ಬರೆದಿದ್ದಾರೆ.

ಪ್ರಧಾನಿ ಮೋದಿ ಅವರು ಎಲ್ಲಾ ಸಿದ್ಧಾಂತಗಳ ಜನರೊಂದಿಗೆ ಕೆಲಸ ಮಾಡುವ ವಿಧಾನವನ್ನು ಶ್ಲಾಘಿಸಿದರು. ಬಾದಲ್ ಅವರ ವ್ಯಕ್ತಿತ್ವ ಅಂತಹದು. ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಮನಸ್ಥಿತಿ, ಜನರಿಗೆ ಸದಾ ಒಳ್ಳೆಯದೇ ಮಾಡಬೇಕೆನ್ನುವ ಮನೋಭಾವ ಉಳ್ಳವರಾಗಿದ್ದರು ಎಂದು ಬರೆದಿದ್ದಾರೆ.

ಬಾದಲ್ ಅವರು ತಮ್ಮ ಜೀವನದಲ್ಲಿ ಅನೇಕ ಏರಿಳಿತಗಳನ್ನು ಕಂಡರು, ಆದರೆ ಅವರು ಪ್ರತಿ ಬಾರಿ ಸವಾಲುಗಳನ್ನು ಎದುರಿಸುತ್ತಾ ಮುನ್ನಡೆದರು. ಅವರು ನಮ್ಮ ಹೃದಯದಲ್ಲಿ ಸದಾ ಇರುತ್ತಾರೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?