AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರಾ ಮಾಂಝಿಗೆ ಪತ್ರ ಬರೆದ ಪ್ರಧಾನಿ ಮೋದಿ: ಕುಟುಂಬಸ್ಥರಿಗೆ ಉಡುಗೊರೆ

ಜನವರಿ 22 ರಂದು ರಾಮಮಂದಿರದ ಮಹಾ ಉದ್ಘಾಟನೆಗೆ ಮುನ್ನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಅಯೋಧ್ಯೆಗೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿ ಅವರು ಡಿಸೆಂಬರ್ 30 ರಂದು ಮೀರಾ ಮಾಂಝಿ ಅವರ ಮನೆಗೆ ಭೇಟಿ ನೀಡಿ ಚಹಾ ಸೇವಿಸಿದ್ದರು. ಇದೀಗ ಮೀರಾ ಮಾಂಝಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆಯುವುದರೊಂದಿಗೆ ಉಡುಗೊರೆಗಳನ್ನು ಸಹ ಕಳುಹಿಸಿಕೊಟ್ಟಿದ್ದಾರೆ.

ಮೀರಾ ಮಾಂಝಿಗೆ ಪತ್ರ ಬರೆದ ಪ್ರಧಾನಿ ಮೋದಿ: ಕುಟುಂಬಸ್ಥರಿಗೆ ಉಡುಗೊರೆ
ಮೀರಾ ಮಾಂಝಿಗೆ ಪ್ರಧಾನಿ ಮೋದಿ ನೀಡಿದ ಉಡುಗೊರೆ
ಗಂಗಾಧರ​ ಬ. ಸಾಬೋಜಿ
|

Updated on: Jan 03, 2024 | 9:42 PM

Share

ದೆಹಲಿ, ಜನವರಿ 03: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿದಾಗ ಉಜ್ವಲ ಯೋಜನೆಯ 10 ಕೋಟಿ ಫಲಾನುಭವಿಯಾಗಿದ್ದ ಸೂರಜ್ ಮತ್ತು ಮೀರಾ ಮಾಂಝಿ (Mira Manjhi) ಅವರ ಕುಟುಂಬವನ್ನು ಭೇಟಿ ಮಾಡಿದ್ದರು. ಇದೀಗ ಮೀರಾ ಮಾಂಝಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ. ಜೊತೆಗೆ ಚಹಾ-ಸೆಟ್, ವಿವಿಧ ಬಣ್ಣದ ಡ್ರಾಯಿಂಗ್ ಬುಕ್​ ಮತ್ತು ಇತರೆ ಉಡುಗೊರೆಗಳನ್ನು ಸಹ ಕಳುಹಿಸಿಕೊಟ್ಟಿದ್ದಾರೆ.

ಜನವರಿ 22 ರಂದು ರಾಮಮಂದಿರದ ಮಹಾ ಉದ್ಘಾಟನೆಗೆ ಮುನ್ನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಅಯೋಧ್ಯೆಗೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿ ಅವರು ಡಿಸೆಂಬರ್ 30 ರಂದು ಮೀರಾ ಮಾಂಝಿ ಅವರ ಮನೆಗೆ ಭೇಟಿ ನೀಡಿ ಚಹಾ ಸೇವಿಸಿದ್ದರು.

ಪ್ರಧಾನಿ ಮೋದಿ ಬರೆದ ಪತ್ರದಲ್ಲೇನಿದೆ? 

2024ರ ಹೊಸ ವರ್ಷಕ್ಕೆ ನಿಮಗೆ ಮತ್ತು ನಿಮ್ಮ ಎಲ್ಲಾ ಕುಟುಂಬದ ಸದಸ್ಯರಿಗೆ ಶುಭಾಶಯಗಳು. ಭಗವಾನ್ ಶ್ರೀರಾಮನ ಪವಿತ್ರ ನಗರವಾದ ಅಯೋಧ್ಯೆಯಲ್ಲಿ ನಿಮ್ಮನ್ನು ಮತ್ತು ನಿಮ್ಮ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಮತ್ತು ನೀವು ತಯಾರಿಸಿದ ಚಹಾವನ್ನು ಸೇವಿಸಿದ್ದು ತುಂಬಾ ಸಂತೋಷವಾಗಿದೆ.

ಇದ್ನೂ ಓದಿ: Narendra Modi: ಪ್ರಧಾನಿಯ ಅನಿರೀಕ್ಷಿತ ಭೇಟಿಯಿಂದ ಆವಾಕ್ಕಾದ ಉಜ್ವಲ ಸ್ಕೀಮ್ ಫಲಾನುಭವಿ; ಅಷ್ಟಕ್ಕೂ ಆ ಮಹಿಳೆ ಯಾರು?

ಅಯೋಧ್ಯೆಯಿಂದ ಬಂದ ನಂತರ ಹಲವು ಟಿವಿ ಚಾನೆಲ್‌ಗಳಲ್ಲಿ ನಿಮ್ಮ ಸಂದರ್ಶನ ನೋಡಿದೆ. ನಿಮ್ಮ ಮತ್ತು ಇತರೆ ಕುಟುಂಬದ ಸದಸ್ಯರ ವಿಶ್ವಾಸ ಮತ್ತು ನಿಮ್ಮ ಅನುಭವಗಳನ್ನು ನೀವು ಹಂಚಿಕೊಂಡ ಸರಳ ಮತ್ತು ಸುಲಭವಾದ ವಿಧಾನವನ್ನು ನೋಡಲು ಸಂತೋಷವಾಯಿತು. ನಿಮ್ಮಂತಹ ಕೋಟ್ಯಂತರ ಕುಟುಂಬದ ಸದಸ್ಯರ ಮುಖದಲ್ಲಿನ ಈ ನಿಮ್ಮ ನಗು ನನಗೆ ಸ್ಪೂರ್ತಿ. ಇದು ದೇಶಕ್ಕಾಗಿ ಪೂರ್ಣ ಹೃದಯದಿಂದ ಕೆಲಸ ಮಾಡಲು ನನಗೆ ಹೊಸ ಶಕ್ತಿಯನ್ನು ನೀಡುತ್ತದೆ.

ನೀವು ಉಜ್ವಲ ಯೋಜನೆಯ 10 ಕೋಟಿ ಫಲಾನುಭವಿಗಳಾಗುವುದು ಕೇವಲ ಒಂದು ಅಂಕಿ ಅಂಶವಲ್ಲ, ಬದಲಿಗೆ ಕೋಟ್ಯಂತರ ದೇಶವಾಸಿಗಳ ದೊಡ್ಡ ಕನಸು ಮತ್ತು ಸಂಕಲ್ಪಗಳ ನೆರವೇರಿಕೆಯ ಕೊಂಡಿಯಾಗಿ ನಾನು ನೋಡುತ್ತೇನೆ.

ಇದನ್ನೂ ಓದಿ: ಅಯೋಧ್ಯೆ: ಉಜ್ವಲಾ ಯೋಜನೆಯ ಫಲಾನುಭವಿ ಮನೆಗೆ ಮೋದಿ ಭೇಟಿ; ಚಹಾ ಜತೆ ಚಿಟ್ ಚಾಟ್

ಅಮೃತ ಕಾಲದಲ್ಲಿ, ನಿಮ್ಮಂತಹ ಆಕಾಂಕ್ಷೆಗಳಿಂದ ತುಂಬಿರುವ ಕೋಟ್ಯಂತರ ದೇಶವಾಸಿಗಳ ಚೈತನ್ಯ ಮತ್ತು ಉತ್ಸಾಹವು ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಮ್ಮ ಗುರಿಯನ್ನು ಸಾಧಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ನನಗೆ ಸಂಪೂರ್ಣ ನಂಬಿಕೆ ಇದೆ. ಮಕ್ಕಳು, ಉತ್ತಮ ಆರೋಗ್ಯ ಮತ್ತು ಕುಟುಂಬದ ಉಜ್ವಲ ಭವಿಷ್ಯಕ್ಕಾಗಿ ಹಾರೈಕೆಗಳು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ