AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದ ಪುಟ್ಟ ಬಾಲಕಿಯ ಅಭಿಮಾನಕ್ಕೆ ನಮೋ: ಪತ್ರ ಬರೆದು ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ಬಾಲಕಿ ಬಿಡಿಸಿದ ಚಿತ್ರವನ್ನು ಕೊಡುವಂತೆ ಅಲ್ಲಿದ್ದ ಪೊಲೀಸರಿಗೆ ಹೇಳಿದ ಮೋದಿ, ಅದರ ಮೇಲೆ ವಿಳಾಸ ಬರೆಯುವಂತೆ ಸೂಚಿಸಿದ್ದರು. ನಾನು ಬಾಲಕಿಗೆ ಪತ್ರ ಬರೆಯುತ್ತೇನೆ ಎಂದು ಭರವಸೆ ನೀಡಿದ್ದರು. ಇದೀಗ ಮೋದಿ ಅದರಂತೆ ನಡೆದುಕೊಂಡಿದ್ದಾರೆ.

ಛತ್ತೀಸ್​ಗಢದ ಪುಟ್ಟ ಬಾಲಕಿಯ ಅಭಿಮಾನಕ್ಕೆ ನಮೋ: ಪತ್ರ ಬರೆದು ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
Ganapathi Sharma
|

Updated on: Nov 04, 2023 | 1:45 PM

ನವದೆಹಲಿ, ನವೆಂಬರ್ 4: ಛತ್ತೀಸ್‌ಗಢದ (Chhattisgarh) ಕನ್ಕೇರ್‌ನಲ್ಲಿ (Kanker) ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ತಮ್ಮ ಚಿತ್ರ ಬಿಡಿಸಿಕೊಂಡು ಬಂದು ಅಭಿಮಾನ ಪ್ರದರ್ಶಿಸಿದ್ದ ಬಾಲಕಿ ಆಕಾಂಕ್ಷಾಗೆ ಪತ್ರ ಬರೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ಮೆಚ್ಚುಗೆ ಸೂಚಿಸಿದ್ದಾರೆ. ಆ ಮೂಲಕ ನುಡಿದಂತೆ ನಡೆದಿದ್ದಾರೆ. ಕನ್ಕೇರ್‌ ರ‍್ಯಾಲಿಯಲ್ಲಿ ಪ್ರಧಾನಿ ಭಾಷಣದ ವೇಳೆ ಜನ ಸಮೂಹದ ಮಧ್ಯೆ ಬಾಲಕಿಯೊಬ್ಬಳು ತಾನು ಬಿಡಿಸಿದ್ದ ಮೋದಿಯವರ ಚಿತ್ರವನ್ನು ತೋರಿಸಲು ಯತ್ನಿಸಿದ್ದಳು. ವೇದಿಕೆಯಿಂದ ಇದನ್ನು ಮೋದಿ ಗಮನಿಸಿದ್ದರು.

ಬಾಲಕಿಯನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ, ‘ನಾನು ನಿನ್ನ ಚಿತ್ರವನ್ನು ನೋಡಿದ್ದೇನೆ. ತುಂಬಾ ಚೆನ್ನಾಗಿ ರಚಿಸಿದ್ದಿ. ನಾನು ನಿನ್ನನ್ನು ಆಶೀರ್ವದಿಸುತ್ತೇನೆ. ಇಷ್ಟು ಹೊತ್ತು ನಿಂತು ನಿನಗೆ ಸುಸ್ತಾಗಿರಬಹುದು. ಕುಳಿತುಕೊ’ ಎಂದು ಹೇಳಿದ್ದರು. ಅಷ್ಟೇ ಅಲ್ಲದೆ, ಬಾಲಕಿ ಬಿಡಿಸಿದ ಚಿತ್ರವನ್ನು ಕೊಡುವಂತೆ ಅಲ್ಲಿದ್ದ ಪೊಲೀಸರಿಗೆ ಹೇಳಿದ ಮೋದಿ, ಅದರ ಮೇಲೆ ವಿಳಾಸ ಬರೆಯುವಂತೆ ಸೂಚಿಸಿದ್ದರು. ನಾನು ಬಾಲಕಿಗೆ ಪತ್ರ ಬರೆಯುತ್ತೇನೆ ಎಂದು ಭರವಸೆ ನೀಡಿದ್ದರು. ಇದೀಗ ಮೋದಿ ಅದರಂತೆ ನಡೆದುಕೊಂಡಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢ ಚುನಾವಣಾ ಪ್ರಚಾರ ಸಭೆಯಲ್ಲಿ ತಾನು ಬಿಡಿಸಿದ ಚಿತ್ರ ತೋರಿಸಿದ ಬಾಲಕಿ; ಮೋದಿ ಮೆಚ್ಚುಗೆ

ಮೋದಿ ಬರೆದ ಪತ್ರದಲ್ಲೇನಿದೆ?

ತಾನು ರಚಿಸಿದ ಚಿತ್ರವನ್ನು ಪ್ರಧಾನಿ ಮೋದಿಗೆ ತೋರಿಸಿದ ಬಾಲಕಿ ( ಎಎನ್​ಐ ಸಂಗ್ರಹ ಚಿತ್ರ) ಹಾಗೂ ಬಾಲಕಿಗೆ ಮೋದಿ ಬರೆದ ಪತ್ರದ ಪ್ರತಿ

‘ಪ್ರಿಯ ಆಕಾಂಕ್ಷಾ, ಶುಭ ಹಾರೈಕೆಗಳು ಮತ್ತು ಆಶೀರ್ವಾದಗಳು. ಕನ್ಕೇರ್‌ನಲ್ಲಿ ಕಾರ್ಯಕ್ರಮಕ್ಕೆ ನೀವು ತಂದಿದ್ದ ಸ್ಕೆಚ್ ನನಗೆ ತಲುಪಿದೆ. ಈ ಪ್ರೀತಿಯ ಅಭಿವ್ಯಕ್ತಿಗೆ ತುಂಬಾ ಧನ್ಯವಾದಗಳು. ಭಾರತದ ಹೆಣ್ಣುಮಕ್ಕಳು ದೇಶದ ಉಜ್ವಲ ಭವಿಷ್ಯ. ನಿಮ್ಮೆಲ್ಲರಿಂದ ನಾನು ಪಡೆಯುವ ಈ ಪ್ರೀತಿ ಮತ್ತು ವಾತ್ಸಲ್ಯವು ರಾಷ್ಟ್ರದ ಸೇವೆಯಲ್ಲಿ ನನ್ನ ಶಕ್ತಿಯಾಗಿದೆ. ನಮ್ಮ ಹೆಣ್ಣುಮಕ್ಕಳಿಗಾಗಿ ಆರೋಗ್ಯಕರ, ಸುರಕ್ಷಿತ ಮತ್ತು ಸುಸಜ್ಜಿತ ರಾಷ್ಟ್ರವನ್ನು ನಿರ್ಮಿಸುವುದು ನಮ್ಮ ಗುರಿಯಾಗಿದೆ. ನಾನು ಯಾವಾಗಲೂ ಛತ್ತೀಸ್‌ಗಢದ ಜನರಿಂದ ಬಹಳಷ್ಟು ಪ್ರೀತಿಯನ್ನು ಪಡೆದಿದ್ದೇನೆ. ದೇಶದ ಪ್ರಗತಿ ಪಥದಲ್ಲಿ ರಾಜ್ಯದ ಜನತೆ ಕೂಡ ಉತ್ಸಾಹದಿಂದ ಕೊಡುಗೆ ನೀಡಿದ್ದಾರೆ. ಮುಂದಿನ 25 ವರ್ಷಗಳು ನಿಮ್ಮಂತಹ ಯುವ ಗೆಳೆಯರಿಗೆ ಮತ್ತು ದೇಶಕ್ಕೆ ಮಹತ್ವದ್ದಾಗಲಿದೆ. ಈ ವರ್ಷಗಳಲ್ಲಿ ನಮ್ಮ ಯುವ ಪೀಳಿಗೆ, ವಿಶೇಷವಾಗಿ ನಿಮ್ಮಂತಹ ಹೆಣ್ಣು ಮಕ್ಕಳು ತಮ್ಮ ಕನಸುಗಳನ್ನು ನನಸಾಗಿಸುತ್ತಾರೆ ಮತ್ತು ದೇಶದ ಭವಿಷ್ಯಕ್ಕೆ ಹೊಸ ದಿಕ್ಕನ್ನು ಒದಗಿಸುತ್ತಾರೆ. ನೀವು ಕಷ್ಟಪಟ್ಟು ಓದಿ, ನಿಮ್ಮ ಯಶಸ್ಸಿನಿಂದ ನಿಮ್ಮ ಕುಟುಂಬಕ್ಕೆ, ಸಮಾಜಕ್ಕೆ ಮತ್ತು ದೇಶಕ್ಕೆ ಕೀರ್ತಿ ತರುತ್ತೀರಿ. ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ, ನಿಮ್ಮ ನರೇಂದ್ರ ಮೋದಿ’ ಎಂದು ಬಾಲಕಿಗೆ ಬರೆದ ಪತ್ರದಲ್ಲಿ ಪ್ರಧಾನಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್