AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan: ನರೇಂದ್ರ ಮೋದಿ ರಾಖಿ ಕಳಿಸಿ, 2024ರ ಚುನಾವಣೆಗೆ ಶುಭ ಕೋರಿದ ಪಾಕಿಸ್ತಾನಿ ಸೋದರಿ

Rakhi: 2024ರ ಮಹಾ ಚುನಾವಣೆಯಲ್ಲಿ ಮೋದಿ ಅವರಿಗೆ ಗೆಲುವು ಸಿಗಲಿ ಎಂದು ಶೇಖ್ ಮೊಹ್ಸಿನ್ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Raksha Bandhan: ನರೇಂದ್ರ ಮೋದಿ ರಾಖಿ ಕಳಿಸಿ, 2024ರ ಚುನಾವಣೆಗೆ ಶುಭ ಕೋರಿದ ಪಾಕಿಸ್ತಾನಿ ಸೋದರಿ
ಪ್ರಧಾನಿ ಮೋದಿ ಅವರಿಗೆ ರಾಖಿ ಕಟ್ಟುತ್ತಿರುವ ಶೇಖ್ ಮೊಹ್ಸಿನ್ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 08, 2022 | 7:04 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ತನ್ನ ಸೋದರ ಎಂದು ಹೇಳುವ ಪಾಕಿಸ್ತಾನ ಮೂಲದ ಖಮರ್ ಮೊಹ್ಸಿನ್ ಶೇಖ್ (Qamar Shaikh Mohsin) ರಕ್ಷಾಬಂಧನಕ್ಕೆ (Raksha Bandhan) ಕೆಲ ದಿನಗಳು ಬಾಕಿಯಿರುವಂತೆಯೇ ರಾಖಿ ಕಳಿಸಿಕೊಟ್ಟಿದ್ದು, ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ಕೋರಿ ಪತ್ರ ಬರೆದಿದ್ದಾರೆ. 2024ರ ಮಹಾ ಚುನಾವಣೆಯಲ್ಲಿ ಗೆಲುವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮೋದಿ ಅವರ ಭೇಟಿಗೆ ಈ ವರ್ಷ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿರುವ ಅವರು, ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.

‘ಅವರು (ಪ್ರಧಾನಿ ಮೋದಿ) ಈ ವರ್ಷ ನನ್ನನ್ನು ದೆಹಲಿಗೆ ಕರೆಸಿಕೊಳ್ಳಬಹುದು ಎಂಬ ನಿರೀಕ್ಷೆಯಿದೆ. ನಾನು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇನೆ. ಅವರಿಗೆ ಕಟ್ಟಲೆಂದು ನಾನೇ ಸ್ವತಃ ಕಸೂತಿ ವಿನ್ಯಾಸದಲ್ಲಿ ರಾಖಿ ತಯಾರಿಸಿದ್ದೇನೆ’ ಮೊಹ್ಸಿನ್ ಶೇಖ್ ಹೇಳಿದರು. ‘ಮೋದಿ ಅವರು ಇನ್ನೊಮ್ಮೆ ಭಾರತದ ಪ್ರಧಾನಿಯಾಗುತ್ತಾರೆ ಎನ್ನುವ ಬಗ್ಗೆ ನನಗೆ ಯಾವುದೇ ಸಂಶಯವಿಲ್ಲ. ಅವರಿಗೆ ಆ ಸಾಮರ್ಥ್ಯವಿದೆ, ಅವರು ಆ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಪ್ರತಿಬಾರಿಯೂ ಅವರೇ ಪ್ರಧಾನಿಯಾಗಲಿ ಎಂದು ನಾನು ಹಾರೈಸುತ್ತೇನೆ’ ಎಂದು ನುಡಿದರು.

ಮೋದಿ ಅವರಿಗೆ ಶೇಖ್ ಮೊಹ್ಸಿನ್ ಅವರು ಪ್ರತಿವರ್ಷವೂ ರಾಖಿ ಮತ್ತು ರಕ್ಷಾ ಬಂಧನದ ಶುಭಾಶಯ ಪತ್ರವನ್ನು ಕಳಿಸಿಕೊಡುತ್ತಿದ್ದಾರೆ. ಪಾಕಿಸ್ತಾನ ಮೂಲದ ಶೇಖ್ ಮೊಹ್ಸಿನ್ ಭಾರತೀಯನನ್ನು ಮದುವೆಯಾದ ನಂತರ ಭಾರತದಲ್ಲಿಯೇ ನೆಲೆಸಿದ್ದಾರೆ. ಕಳೆದ 25 ವರ್ಷಗಳಿಂದಲೂ ಮೋದಿ ಅವರಿಗೆ ರಾಖಿ ಕಟ್ಟುತ್ತಿದ್ದೇನೆ ಎಂದು ಹೇಳಿದ್ದಾರೆ.

ಮೋದಿ ಅವರು ಆರ್​ಎಸ್​ಎಸ್​ ಕಾರ್ಯಕರ್ತರಾಗಿದ್ದಾಗ ಮೊದಲ ಬಾರಿಗೆ ರಾಖಿ ಕಟ್ಟಿದ್ದೆ ಎಂದು ಶೇಖ್ ಮೊಹ್ಸಿನ್ ನೆನಪಿಸಿಕೊಳ್ಳುತ್ತಾರೆ. ಮುಂದಿನ ಶುಕ್ರವಾರ (ಆಗಸ್ಟ್ 12) ರಕ್ಷಾ ಬಂಧನದ ಆಚರಣೆಯಿದೆ.

Published On - 7:04 am, Mon, 8 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್