Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕೈಬಿಟ್ಟ ಆರೋಗ್ಯ ಇಲಾಖೆ, ಕಾರಣವೇನು?

ಆರೋಗ್ಯ ಇಲಾಖೆಯು ಕೋವಿಡ್​ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೊವನ್ನು ಕೈಬಿಟ್ಟಿದೆ. ಈ ಹಿಂದೆ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿಯವರ ಫೋಟೊವನ್ನು ಹಾಕಲಾಗಿತ್ತು. ಭಾರತವು ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸುತ್ತದೆ ಎಂದು ಬರೆಯಲಾಗಿತ್ತು. ಆದರೆ ಈಗ ಪ್ರಧಾನಿ ಮೋದಿ ಹೆಸರನ್ನು ಕೈಬಿಡಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕೈಬಿಟ್ಟ ಆರೋಗ್ಯ ಇಲಾಖೆ, ಕಾರಣವೇನು?
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:May 02, 2024 | 9:58 AM

ಕೋವಿಡ್ ಲಸಿಕೆ ಪ್ರಮಾಣ ಪತ್ರ(Covid Vaccine Certificate)ದಿಂದ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಫೋಟೊವನ್ನು ತೆಗೆದುಹಾಕಲಾಗಿದ್ದು, ಹಲವು ಅನುಮಾನಗಳು ಮೂಡಿವೆ. ಈ ಹಿಂದೆ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿಯವರ ಫೋಟೊವನ್ನು ಹಾಕಲಾಗಿತ್ತು. ಭಾರತವು ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸುತ್ತದೆ ಎಂದು ಬರೆಯಲಾಗಿತ್ತು. ಆದರೆ ಈಗ ಪ್ರಧಾನಿ ಮೋದಿ ಹೆಸರನ್ನು ಕೈಬಿಡಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದೀಗ ಕೊರೊನಾ ಲಸಿಕೆ ತಯಾರಕ ಬ್ರಿಟಿಷ್ ಕಂಪನಿ ಅಸ್ಟ್ರಾಜೆನೆಕಾ ವಿರುದ್ಧ ಕೆಲವು ಅನುಮಾಣಗಳು ಹುಟ್ಟಿಕೊಂಡಿವೆ, ಈ ಲಸಿಕೆಯು ರಕ್ತಹೆಪ್ಪುಗಟ್ಟುವಿಕೆಯಂತಹ ಕೆಲವು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಹೇಳಲಾಗಿದ್ದು, ಕೆಲವೊಂದು ವಿಚಾರಗಳನ್ನು ಸಂಸ್ಥೆ ಕೂಡ ಒಪ್ಪಿಕೊಂಡಿದೆ. ಆದರೆ ಲಕ್ಷದಲ್ಲಿ ಒಂದು ಅಥವಾ ಎರಡು ಮಂದಿಗೆ ಮಾತ್ರ ಈ ಬಗೆಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ಸಂಸ್ಥೆ ಹೇಳಿದೆ.

ಅಸ್ಟ್ರಾಜೆನೆಕಾ ಸಂಸ್ಥೆ ವಿರುದ್ಧ ಹಲವು ಮಂದಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿನ ಕೆಲವು ಬಳಕೆದಾರರು ಗಮನಾರ್ಹ ಬದಲಾವಣೆಯನ್ನು ಗಮನಿಸಿದ್ದಾರೆ: ಭಾರತದಲ್ಲಿ ನೀಡಲಾದ ಕೋವಿಡ್ -19 ಲಸಿಕೆ ಪ್ರಮಾಣಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಇಲ್ಲದಿರುವುದು ತಿಳಿದುಬಂದಿದೆ. ಜತೆಗೆ ಫೋಟೊ ಬದಲಿಗೆ ಕ್ಯೂ ಆರ್​ ಕೋಡ್​ ಮಾತ್ರವೇ ಇದೆ.

ಮತ್ತಷ್ಟು ಓದಿ: ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದಿಲ್ಲವೆಂದು ಲಿಖಿತದಲ್ಲಿ ನೀಡಲಿ: ಕಾಂಗ್ರೆಸ್​ಗೆ ಮೋದಿ ಸವಾಲು

ಆರೋಗ್ಯ ಇಲಾಖೆ ಹೇಳುವುದೇನು? ಆದಾಗ್ಯೂ , ಲೋಕಸಭೆ ಚುನಾವಣೆಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ ಕಾರಣ ಲಸಿಕೆ ಪ್ರಮಾಣಪತ್ರದಿಂದ ಚಿತ್ರವನ್ನು ತೆಗೆದುಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳು ದಿ ಪ್ರಿಂಟ್​ಗೆ ತಿಳಿಸಿದ್ದಾರೆ.

ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರದಿಂದ ಮೋದಿ ಅವರ ಫೋಟೋವನ್ನು ತೆಗೆದುಹಾಕಿರುವುದು ಇದೇ ಮೊದಲಲ್ಲ ಎಂಬುದು ಗಮನಿಸಬೇಕಾದ ಸಂಗತಿ.

2022 ರಲ್ಲಿ, ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ಎಂಬ ಐದು ರಾಜ್ಯಗಳಲ್ಲಿ ನೀಡಲಾದ ಲಸಿಕೆ ಪ್ರಮಾಣಪತ್ರದಿಂದ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕಲಾಯಿತು. ಆ ರಾಜ್ಯಗಳ ವಿಧಾನಸಭಾ ಚುನಾವಣೆಯ ತಯಾರಿಗಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಈ ಕ್ರಮವನ್ನು ಕಡ್ಡಾಯಗೊಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:38 am, Thu, 2 May 24

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು