AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿ ಬಳಕೆ ಬಗ್ಗೆ ಝೆರೋಧಾ ಸಿಇಒ ನಿತಿನ್ ಕಾಮತ್ ಟ್ವೀಟ್​ಗೆ ಮೋದಿ ಮೆಚ್ಚುಗೆ

ವಿಶ್ವಸಂಸ್ಥೆಯು 2023ನ್ನು ಅಂತಾರಾಷ್ಟ್ರೀಯ ರಾಗಿ ವರ್ಷ ಎಂದು ಘೋಷಿಸಿದೆ. ಜಗತ್ತು ರಾಗಿಯ ಆರೋಗ್ಯ ಮತ್ತು ಪರಿಸರ ಪ್ರಯೋಜನಗಳನ್ನು ಕಂಡುಹಿಡಿದಂತೆ, ಭಾರತವು ಜಾಗತಿಕ ರಾಗಿ ಹಬ್ ಆಗಬಹುದು ಮತ್ತು ಸ್ಥಳೀಯವಾಗಿ ಹಸಿರು ಉದ್ಯೋಗಗಳನ್ನು ಸೃಷ್ಟಿಸಬಹುದು ಎಂದ ನಿತಿನ್ ಕಾಮತ್

ರಾಗಿ ಬಳಕೆ ಬಗ್ಗೆ ಝೆರೋಧಾ ಸಿಇಒ ನಿತಿನ್ ಕಾಮತ್ ಟ್ವೀಟ್​ಗೆ ಮೋದಿ ಮೆಚ್ಚುಗೆ
ಮೋದಿ ಜತೆ ನಿತಿನ್ ಕಾಮತ್
ರಶ್ಮಿ ಕಲ್ಲಕಟ್ಟ
|

Updated on: Feb 15, 2023 | 9:24 PM

Share

ದಿನನಿತ್ಯದ ಆಹಾರದಲ್ಲಿ ರಾಗಿ ಬಳಕೆಯನ್ನು ಹೆಚ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಹೇಳುತ್ತಿದ್ದಾರೆ. ಇತ್ತ ಝೆರೋಧಾ (Zerodha) ಸಹ-ಸಂಸ್ಥಾಪಕ ಮತ್ತು ಸಿಇಒ ನಿತಿನ್ ಕಾಮತ್ (Nithin Kamath)ಅವರು ಆಹಾರವನ್ನು ಆರೋಗ್ಯಕರ ಮತ್ತು ರುಚಿಯಾಗಿಸಲು ಮನೆಯಲ್ಲಿ ಗೋಧಿ ಹಿಟ್ಟು ಮತ್ತು ದೋಸೆ ಹಿಟ್ಟಿಗೆ ರಾಗಿಯನ್ನು ಸೇರಿಸಲಾಗುತ್ತದೆ ಎಂದಿದ್ದಾರೆ. ಪ್ರತಿಯೊಬ್ಬರೂ ತಮ್ಮ ಆಹಾರದಲ್ಲಿ ರಾಗಿಯನ್ನು ಏಕೆ ಬಳಸಬೇಕು ಮತ್ತು ಅದರ ಬಗ್ಗೆಯೂ ಮಾತನಾಡಬೇಕು ಎಂಬ ಕಾರಣಗಳನ್ನು ಕಾಮತ್ ಟ್ವೀಟ್ ಮಾಡಿದ್ದಾರೆ. ನಮ್ಮಲ್ಲಿ ಹೆಚ್ಚಿನವರಿಗೆ ರಾಗಿ ಗ್ರಹಕ್ಕೆ ಒಳ್ಳೆಯದು ಎಂದು ತಿಳಿದಿಲ್ಲ ಏಕೆಂದರೆ ಅವು ಕಡಿಮೆ ನೀರು ಮತ್ತು ಕೀಟನಾಶಕಗಳನ್ನು ಬಳಸುತ್ತವೆ.

ವಿಶ್ವಸಂಸ್ಥೆಯು 2023ನ್ನು ಅಂತಾರಾಷ್ಟ್ರೀಯ ರಾಗಿ ವರ್ಷ ಎಂದು ಘೋಷಿಸಿದೆ. ಜಗತ್ತು ರಾಗಿಯ ಆರೋಗ್ಯ ಮತ್ತು ಪರಿಸರ ಪ್ರಯೋಜನಗಳನ್ನು ಕಂಡುಹಿಡಿದಂತೆ, ಭಾರತವು ಜಾಗತಿಕ ರಾಗಿ ಹಬ್ ಆಗಬಹುದು ಮತ್ತು ಸ್ಥಳೀಯವಾಗಿ ಹಸಿರು ಉದ್ಯೋಗಗಳನ್ನು ಸೃಷ್ಟಿಸಬಹುದು. ಬ್ರಿಟಿಷರ ತನಕ ಭಾರತದಲ್ಲಿ ರಾಗಿ ಜನಪ್ರಿಯವಾಗಿತ್ತು” ಎಂದು ನಿತಿನ್ ಕಾಮತ್ ಟ್ವೀಟ್ ಮಾಡಿದ್ದಾರೆ.

Zerodhaದ ಎನ್​​ಜಿಒ ರೈನ್‌ಮ್ಯಾಟರ್ ಫೌಂಡೇಶನ್‌ ಮಾಡಿದ ರಾಗಿಗಳ ಪರಿಸರ ಪ್ರಯೋಜನಗಳ ಕುರಿತು ಸಂಶೋಧನಾ ಪ್ರಬಂಧವನ್ನು ಅವರು ಹಂಚಿಕೊಂಡಿದ್ದಾರೆ. ಸ್ಥಳೀಯವಾಗಿ ಉತ್ಪಾದಿಸುವುದರಿಂದ ರಾಗಿಗಳು ಹೆಚ್ಚುವರಿ ಪ್ರಯೋಜನವನ್ನು ಹೊಂದಿವೆ.ಹೀಗಾಗಿ ಆಹಾರ ಸಾಗಣೆಗೆ ಸಂಬಂಧಿಸಿದ ಇಂಗಾಲದ ಹೊರಸೂಸುವಿಕೆಯನ್ನು ತಡೆಯಬಹುದು. “ಸರ್ಕಾರಿ ಕಾರ್ಯಕ್ರಮಗಳು ಮತ್ತು ಮಧ್ಯಾಹ್ನದ ಊಟ ಉಪಕ್ರಮಗಳ ಮೂಲಕ ರಾಗಿಗಳನ್ನು ವಿತರಿಸಿದರೆ, ಭಾರತೀಯರು ಹೆಚ್ಚಿನ ಪೌಷ್ಟಿಕಾಂಶವನ್ನು ಪಡೆಯುತ್ತಾರೆ ಮತ್ತು ಕಡಿಮೆ ಮಧುಮೇಹ ಅಪಾಯವನ್ನು ಹೊಂದಿರುತ್ತಾರೆ” ಎಂದು ಅವರು ಹೇಳಿದರು.

ಈ ವಾರದ ಆರಂಭದಲ್ಲಿ ಕಾಮತ್ ಅವರನ್ನು ಭೇಟಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಈ ಟ್ವೀಟ್ ನ್ನು ರಿಟ್ವೀಟ್ ಮಾಡಿದ್ದು ಇದು ಓದುವಂತದ್ದು ಎಂದಿದ್ದಾರೆ. ಈ ತಿಂಗಳ ಆರಂಭದಲ್ಲಿ 2023 ರ ಬಜೆಟ್ ಭಾಷಣದಲ್ಲಿ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ರಾಗಿಯನ್ನು”ಶ್ರೀ ಅನ್ನ” ಎಂದು ಕರೆದರು, ಅಂದರೆ ಎಲ್ಲಾ ಧಾನ್ಯಗಳ ತಾಯಿ. ಎಲ್ಲಾ ರೀತಿಯ ರಾಗಿಗೆ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ಮಾಡಲು ಬಯಸುವುದಾಗಿ ಅವರು ಘೋಷಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ