AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಕೋರ್ಟ್​ಗೆ ಹೋದ ಭ್ರಷ್ಟ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ; ಪ್ರಧಾನಿ ಮೋದಿ ವಾಗ್ದಾಳಿ

ಕೆಲವು ಭ್ರಷ್ಟ ಪಕ್ಷಗಳು ತಮ್ಮ ಭ್ರಷ್ಟಾಚಾರ ಮುಚ್ಚಿಡುವುದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದವು. ಅಲ್ಲಿ ಆ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

Narendra Modi: ಕೋರ್ಟ್​ಗೆ ಹೋದ ಭ್ರಷ್ಟ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ; ಪ್ರಧಾನಿ ಮೋದಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ
Ganapathi Sharma
|

Updated on: Apr 08, 2023 | 2:53 PM

Share

ಹೈದರಾಬಾದ್: ಕೆಲವು ಭ್ರಷ್ಟ ಪಕ್ಷಗಳು ತಮ್ಮ ಭ್ರಷ್ಟಾಚಾರ ಮುಚ್ಚಿಡುವುದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದವು. ಅಲ್ಲಿ ಆ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದರು. ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲಿಗೆ ಚಾಲನೆ, ಸಿಕಂದರಾಬಾದ್ ರೈಲು ನಿಲ್ದಾಣದ ಮರು ಅಭಿವೃದ್ಧಿಗೆ ಶಂಕುಸ್ಥಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ನಂತರ ಮಾತನಾಡಿದ ಪ್ರಧಾನಿ, ಪ್ರತಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಕೇಂದ್ರ ಸರ್ಕಾರ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು, ಬೆದರಿಸಲು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ 14 ಪ್ರತಿಪಕ್ಷಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೆಲವು ದಿನಗಳ ಹಿಂದೆ ವಜಾಗೊಳಿಸಿತ್ತು.

ತೆಲಂಗಾಣದಲ್ಲಿ ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಹಲವು ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಯಾವುದೇ ಬೆಂಬಲ ಸಿಗುತ್ತಿಲ್ಲ. ಇದರಿಂದಾಗಿ ಯೋಜನೆಗಳು ವಿಳಂಬವಾಗುತ್ತಿವೆ. ಇದರಿಂದ ಜನರಿಗೆ ಸಾಕಷ್ಟು ನಷ್ಟವಾಗುತ್ತದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗಬಾರದು. ರಾಜ್ಯದಲ್ಲಿ ವಂಶಾಡಳಿತದಿಂದ ಭ್ರಷ್ಟಾಚಾರ ಹೆಚ್ಚಾಗಿದೆ. ಅವರಿಗೆ ಸಂಸಾರ ಬೆಳೆದರೆ ಸಾಕು ಎಂದು ಪ್ರಧಾನಿ ಮೋದಿ ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲಾ ವಿಷಯಗಳಲ್ಲಿ ಅವರು ಕುಟುಂಬದ ಸ್ವಹಿತಾಸಕ್ತಿಯನ್ನಷ್ಟೇ ಬಯಸುತ್ತಾರೆ. ತೆಲಂಗಾಣದ ಜನರು ಇಂತಹವರೊಂದಿಗೆ ಜಾಗರೂಕರಾಗಿರಬೇಕು. ವಂಶ ರಾಜಕಾರಣದೊಂದಿಗೆ ಭ್ರಷ್ಟಾಚಾರ ಪೋಷಣೆಯಾಗುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Vande Bharat Express: ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ತೆಲಂಗಾಣ ರಚನೆಯಾದಾಗ ಕೇಂದ್ರದಲ್ಲಿ ಎನ್​ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿತ್ತು. ಪ್ರತ್ಯೇಕ ರಾಜ್ಯ ರಚನೆಯಾದ ನಂತರ ಜನರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿಯನ್ನು ಕೇಂದ್ರದ ಎನ್​ಡಿಎ ಸರ್ಕಾರ ವಹಿಸಿಕೊಂಡಿತು ಎಂದು ಪ್ರಧಾನಿ ಹೇಳಿದರು.

ಕೇಂದ್ರದ ಅಭಿವೃದ್ಧಿ ಕಾರ್ಯಗಳಿಂದಾಗಿ ಕೆಲವರಿಗೆ ಹೆದರಿಕೆಯಾಗಿದೆ ಎಂದು ಪ್ರಧಾನಿ ಮೋದಿ ವಿರೋಧ ಪಕ್ಷಗಳನ್ನು ಟೀಕಿಸಿದ್ದಾರೆ. ಕುಟುಂಬ ರಾಜಕಾರಣ ಎಂದು ಮಾಡುವವರಿಗೆ ದೇಶದ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಅಂಥವರು ಸ್ವಾರ್ಥ ಚಿಂತನೆಯಲ್ಲಿ ತೊಡಗುತ್ತಾರೆ ಎಂದು ಮೋದಿ ಟೀಕಿಸಿದರು.

ದೇಶವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಬೇಕೇ ಅಥವಾ ಬೇಡವೇ ಎಂದು ಸಭೆಯಲ್ಲಿದ್ದ ಜನರನ್ನು ಪ್ರಧಾನಿ ಮೋದಿ ಪ್ರಶ್ನಿಸಿದರು. ಭ್ರಷ್ಟ ನಾಯಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ