AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಸೂರ್ಯ ಘರ್ ಯೋಜನೆಯಡಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನ; ಪ್ರಲ್ಹಾದ್ ಜೋಶಿ

ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯು 1 ಕೋಟಿ ಕುಟುಂಬಗಳಿಗೆ 300 ಘಟಕಗಳವರೆಗೆ ಪ್ರಯೋಜನವನ್ನು ನೀಡುತ್ತದೆ. ಅಲ್ಲದೆ 1 ಕೋಟಿ ಕುಟುಂಬಗಳು ಉಚಿತ ವಿದ್ಯುತ್‌ಗಾಗಿ ಸೌರ ಫಲಕಗಳ ಪ್ರಯೋಜನವನ್ನು ಪಡೆಯುತ್ತವೆ. ಇದು ಮನೆಮಾಲೀಕರಿಗೆ ಸೌರ ಮೇಲ್ಛಾವಣಿಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಕಾರ್ಯಸಾಧ್ಯವಾಗುವಂತೆ ಮಾಡಿದೆ.

ಪಿಎಂ ಸೂರ್ಯ ಘರ್ ಯೋಜನೆಯಡಿ ಜಿಲ್ಲೆಗೊಂದು 'ಮಾದರಿ ಸೌರ ಗ್ರಾಮ' ಅನುಷ್ಠಾನ; ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
ಸುಷ್ಮಾ ಚಕ್ರೆ
|

Updated on: Aug 12, 2024 | 9:41 PM

Share

ನವದೆಹಲಿ: ಪಿಎಂ ಸೂರ್ಯ ಘರ್ ಯೋಜನೆಯಡಿ ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಮಾದರಿ ಸೌರ ಗ್ರಾಮ ಅನುಷ್ಠಾನಕ್ಕೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಕಾರ್ಯಾಚರಣೆ ಮಾರ್ಗಸೂಚಿಯನ್ನು ಕೂಡ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದೇಶಾದ್ಯಂತ ಪ್ರತಿ ಜಿಲ್ಲೆಗೆ ಒಂದು ಮಾದರಿ ಸೌರ ಗ್ರಾಮವನ್ನು ರಚಿಸಲು ಒತ್ತು ನೀಡಿದ್ದು, ಇದಕ್ಕಾಗಿ ಒಟ್ಟು 800 ಕೋಟಿ ರೂ. ಆರ್ಥಿಕ ವೆಚ್ಚವನ್ನು ನಿಗದಿಪಡಿಸಲಾಗಿದೆ. ಸೌರ ಮಾದರಿ ಗ್ರಾಮದಲ್ಲಿ ಪ್ರತಿ ಜಿಲ್ಲೆಯ ವಿಜೇತ ಗ್ರಾಮಕ್ಕೆ ಕೇಂದ್ರದಿಂದ ಹಣಕಾಸು ನೆರವಾಗಿ 1 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸೌರ ಮೇಲ್ಛಾವಣಿಗಳನ್ನು ಉತ್ತೇಜಿಸಲು ‘ಪಿಎಂ ಸೂರ್ಯ ಘರ್’ ಯೋಜನೆ ಘೋಷಿಸಿದ ಮೋದಿ

ಸೌರಶಕ್ತಿ ಅಳವಡಿಕೆಯನ್ನು ಉತ್ತೇಜಿಸುವ ಮತ್ತು ಗ್ರಾಮ ಸಮುದಾಯಗಳನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ಈ ಹೆಜ್ಜೆ ಇರಿಸಿ ಮಾದರಿ ಸೌರ ಗ್ರಾಮ ರಚಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ. ಸೌರ ಮೇಲ್ಛಾವಣಿಯ ಸೂರ್ಯ ಘರ್ ಯೋಜನೆ 75,021 ಕೋಟಿ ರೂ. ವೆಚ್ಚವನ್ನು ಹೊಂದಿದ್ದು, 2026-27ರ ಆರ್ಥಿಕ ವರ್ಷದವರೆಗೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

ಮಾರ್ಗಸೂಚಿ ವಿವರ:

1. ಮಾದರಿ ಸೌರ ಗ್ರಾಮವೆಂದು ಪರಿಗಣಿಸಲು ಆ ಗ್ರಾಮವು 5,000 (ವಿಶೇಷ ವರ್ಗದ ರಾಜ್ಯಗಳಿಗೆ 2,000) ಜನಸಂಖ್ಯೆಯುಳ್ಳ ಕಂದಾಯ ಗ್ರಾಮವಾಗಿರಬೇಕು.

2. ಆಯ್ಕೆ ಪ್ರಕ್ರಿಯೆ ಸ್ಪರ್ಧಾತ್ಮಕವಾಗಿದ್ದು, ಅಲ್ಲಿ ಜಿಲ್ಲಾ ಮಟ್ಟದ ಸಮಿತಿಯು (DLC) ಸಂಭಾವ್ಯ ಅಭ್ಯರ್ಥಿಯ ಘೋಷಣೆಯ ನಂತರ 6 ತಿಂಗಳ ನಂತರ ಸ್ಥಾಪಿಸಲಾದ ಒಟ್ಟಾರೆ ವಿತರಿಸಿದ ನವೀಕರಿಸಬಹುದಾದ ಶಕ್ತಿ (RE) ಸಾಮರ್ಥ್ಯದ ಮೇಲೆ ಗ್ರಾಮಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ.

ಇದನ್ನೂ ಓದಿ: ಸೂರ್ಯ ಘರ್ ಯೋಜನೆಯಡಿ 1.3 ಕೋಟಿ ನೋಂದಣಿ; ಸಾಲ, ಸಬ್ಸಿಡಿ ಎಲ್ಲವೂ ಇದೆ ಎಂದ ಪ್ರಲ್ಹಾದ್ ಜೋಶಿ

3. ಅತಿ ಹೆಚ್ಚು ಆರ್‌ಇ ಸಾಮರ್ಥ್ಯ ಹೊಂದಿರುವ ಪ್ರತಿ ಜಿಲ್ಲೆಯ ವಿಜೇತ ಗ್ರಾಮಕ್ಕೆ 1 ಕೋಟಿ ರೂ. ಕೇಂದ್ರ ಹಣಕಾಸು ನೆರವು ಸಿಗಲಿದೆ.

4. ಈ ಯೋಜನೆಯ ಅನುಷ್ಠಾನವನ್ನು ರಾಜ್ಯ/ ಕೇಂದ್ರಾಡಳಿತ ಪ್ರದೇಶದ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಏಜೆನ್ಸಿಯು ಜಿಲ್ಲಾ ಮಟ್ಟದ ಸಮಿತಿಯ (DLC) ಮೇಲ್ವಿಚಾರಣೆಯಲ್ಲಿ ಮಾಡುತ್ತದೆ. ಆಯ್ದ ಗ್ರಾಮಗಳು ಸೌರಶಕ್ತಿ-ಚಾಲಿತ ಸಮುದಾಯಗಳಿಗೆ ಪರಿಣಾಮಕಾರಿಯಾಗಿ ಪರಿವರ್ತನೆಯಾಗುವುದನ್ನು ಖಚಿತಪಡಿಸುತ್ತದೆ ಮತ್ತು ದೇಶದಾದ್ಯಂತ ಇತರ ಹಳ್ಳಿಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?