Sign In

By signing in or creating an account, you agree with Associated Broadcasting Company's Terms & Conditions and Privacy Policy.

Ujjwala Yojana 2021 BPL Card: ಬಿಪಿಎಲ್ ಕಾರ್ಡ್​ ಪಡೆದವರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಪಾಲುದಾರರಾಗುವುದು ಹೇಗೆ?

Ujjwala Yojana 2021 BPL Card ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ದೇಶದಾದ್ಯಂತ ಬಿಪಿಎಲ್ (ಬಡತನ ರೇಖೆಗಿಂತ ಕೆಳಗೆ) ಕಾರ್ಡ್ ಹೊಂದಿರುವ ಮನೆಗಳಲ್ಲಿನ ಮಹಿಳೆಯರ ಹೆಸರಿನಲ್ಲಿ 5 ಕೋಟಿ ಎಲ್​ಪಿಜಿ ಸಂಪರ್ಕವನ್ನು ಉಚಿತವಾಗಿ ನೀಡುವ ಗುರಿಯನ್ನು ಹೊಂದಲು ಸರ್ಕಾರ ನಿರ್ಧಾರ ಮಾಡಿದೆ.

Ujjwala Yojana 2021 BPL Card: ಬಿಪಿಎಲ್ ಕಾರ್ಡ್​ ಪಡೆದವರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಪಾಲುದಾರರಾಗುವುದು ಹೇಗೆ?
ಸಾಂದರ್ಭಿಕ ಚಿತ್ರ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Feb 04, 2021 | 1:25 PM

ದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಇತ್ತೀಚಿಗಷ್ಟೇ ಡಿಜಿಟಲ್ ಕೇಂದ್ರ ಬಜೆಟ್ 2021-22ನ್ನು ಸಂಸತ್ತಿನಲ್ಲಿ ಮಂಡನೆ ಮಾಡಿದ್ದು, ಆ ಮೂಲಕ ಇದೇ ಮೊದಲ ಬಾರಿಗೆ ಕಾಗದರಹಿತ ಬಜೆಟ್ ಮಂಡನೆಗೆ ಸಾಕ್ಷಿಯಾಗಿದ್ದಾರೆ. ಆರು ಸ್ತಂಭಗಳಲ್ಲಿ ವಿಂಗಡಿಸಲಾದ ಕೇಂದ್ರ ಬಜೆಟ್ 2021-22ರಲ್ಲಿ ಅನೇಕ ಹೊಸ ಯೋಜನೆಗಳನ್ನು ಮತ್ತು ಸುಧಾರಣೆಗಳನ್ನು ಸೇರಿಸಿದ್ದಾರೆ. ನಿರ್ಮಲಾ ಸೀತರಾಮನ್ ಬಜೆಟ್ 2021-22ರ ಭಾಷಣದಲ್ಲಿ ಈ ವರ್ಷದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಹೆಚ್ಚುವರಿ 1 ಕೋಟಿ ಜನರನ್ನು ಒಳಗೊಳ್ಳುವುದಾಗಿ ಘೋಷಿಸಿದ್ದಾರೆ. ಆದ್ದರಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ (Ujjwala Yojana 2021) ಅಡಿ ಲಾಭ ಪಡೆಯಲು ಬಯಸುವವರಿಗೆ ಇದು ನಿಜಕ್ಕೂ ಒಂದು ಉತ್ತಮ ಅವಕಾಶವಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೆ ಏನು? ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಾಜ ಕಲ್ಯಾಣ ಯೋಜನೆಯಾಗಿದ್ದು, 2016ರ ಮೇ 1ರಂದು ಉತ್ತರ ಪ್ರದೇಶದ ಬಲ್ಲಿಯಾದಿಂದ ಮೊದಲ ಬಾರಿಗೆ ಈ ಯೋಜನೆ ಪ್ರಾರಂಭವಾಯಿತು. ಪ್ರಧಾನಿಯ ಉಜ್ವಲ ಯೋಜನೆ ಅಡಿಯಲ್ಲಿ ದೇಶದ ಬಿಪಿಎಲ್​ ಕಾರ್ಡ್​ ಹೊಂದಿರುವ ಮನೆಗಳಿಗೆ ಎಲ್​ಪಿಜಿ ಸಂಪರ್ಕವನ್ನು ಉಚಿತವಾಗಿ ಒದಗಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಗ್ರಾಮೀಣ ಭಾರತದಲ್ಲಿ ಹೆಚ್ಚಾಗಿ ಬಳಸುವ ಅಶುದ್ಧ ಅಡುಗೆ ಇಂಧನಗಳನ್ನು ಸ್ವಚ್ಛ ಮತ್ತು ಹೆಚ್ಚು ಪರಿಣಾಮಕಾರಿಯಾಗಿ ಮಾಡುವ ಉದ್ದೇಶದಿಂದ ಎಲ್​ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ)ಯನ್ನು ಮನೆಗಳಿಗೆ ತಲುಪಿಸುವಲ್ಲಿ ಈ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಉಜ್ವಲ ಯೋಜನೆಯಡಿ ಪ್ರತೀ ಬಡ ಕುಟುಂಬಕ್ಕೆ ಉಚಿತ ಎಲ್​ಪಿಜಿ ಸಂಪರ್ಕ ಒದಗಿಸುವ ಸರ್ಕಾರಿ ಸ್ವಾಮ್ಯದ ಇಂಧನ ಕಂಪೆನಿಗಳಿಗೆ ಸರ್ಕಾರವು ಪ್ರತೀ ಸಿಲಿಂಡರ್​ಗೆ 1600ರೂಪಾಯಿ ಸಬ್ಸಿಡಿ ನೀಡುತ್ತದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ದೇಶದಾದ್ಯಂತ ಬಿಪಿಎಲ್ (ಬಡತನ ರೇಖೆಗಿಂತ ಕೆಳಗೆ)ಕಾರ್ಡ್ ಹೊಂದಿರುವ ಮನೆಗಳಲ್ಲಿನ ಮಹಿಳೆಯರ ಹೆಸರಿನಲ್ಲಿ 5 ಕೋಟಿ ಎಲ್​ಪಿಜಿ ಸಂಪರ್ಕವನ್ನು ನೀಡುವ ಗುರಿಯನ್ನು ಹೊಂದಲು ಸರ್ಕಾರ ನಿರ್ಧಾರ ಮಾಡಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಗಿರುವ ಅರ್ಹತಾ ಮಾನದಂಡಗಳು:

  • ಅರ್ಜಿದಾರರು ಭಾರತದ ಖಾಯಂ ನಿವಾಸಿಯಾಗಿರಬೇಕು ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
  • ಅರ್ಜಿದಾರ ಮಹಿಳೆಯ ಕುಟುಂಬ ಬಿಪಿಎಲ್ ಕಾರ್ಡ್​ ಹೊಂದಿರಬೇಕು.
  • ಅರ್ಜಿದಾರ ಮನೆಯವರು ಈಗಾಗಲೇ ಮನೆಯ ಯಾರ ಹೆಸರಿನಲ್ಲಿಯೂ ಎಲ್​ಪಿಜಿ ಸಂಪರ್ಕವನ್ನು ಹೊಂದಿರಬಾರದು.
  • ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ವ್ಯಾಖ್ಯಾನಿಸಿದಂತೆ ಬಿಪಿಎಲ್ ಕುಟುಂಬದ ಮಾಸಿಕ ಮನೆಯ ಆದಾಯವು ನಿರ್ದಿಷ್ಟ ಮಟ್ಟವನ್ನು ಮೀರಬಾರದು.
  • ಎಸ್​ಇಸಿಸಿ-2011 (ಗ್ರಾಮೀಣ) ದತ್ತಸಂಚಯದ ಪ್ರಕಾರ ಅರ್ಜಿದಾರರ ದತ್ತಾಂಶವು ತೈಲ ಮಾರ್ಕೆಟಿಂಗ್ ಕಂಪನಿಗಳೊಂದಿಗೆ ಹೊಂದಿಕೆಯಾಗಬೇಕು.
  • ಅರ್ಜಿದಾರರು ಬೇರೆ ಯಾವುದೇ ಸರ್ಕಾರಿ ಯೋಜನೆಯಲ್ಲಿ ಇದೇ ರೀತಿಯ ಪ್ರಯೋಜನಗಳನ್ನು ಪಡೆಯಬಾರದು

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವ ಹಂತಗಳು: ಬಿಪಿಎಲ್​ ಕುಟುಂಬದ ಅರ್ಹ ಮಹಿಳೆಯು ಉಜ್ವಲ ಯೋಜನೆಯ ಅರ್ಜಿ (Ujjwala Yojana application form)ಯನ್ನು ಭರ್ತಿ ಮಾಡುವ ಮೂಲಕ ಯೋಜನೆಗೆ ಅರ್ಜಿಸಲ್ಲಿಸಬಹುದಾಗಿದೆ.

(KYC Application forms for Ujjwala Yojana ) ಆನ್​ಲೈನ್ ಅರ್ಜಿಯ ನಮೂನೆಯನ್ನು ಡೌನ್​ಲೋಡ್​ ಮಾಡಿ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಎಲ್​ಪಿಜಿ ಕೇಂದ್ರಕ್ಕೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಎಲ್ಲಾ ದಾಖಲೆಗಳ ಪರಿಶೀಲನೆಯ ನಂತರ ಅರ್ಜಿದಾರರಿಗೆ ಎಲ್​ಪಿಜಿ ಗ್ಯಾಸ್ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಈ ಯೋಜನೆಗೆ ಸಂಬಂಧಿಸಿದಂತೆ ಅಧಿಕೃತ ವೆಬ್​ಸೈಟ್ pmujjwalayojana.com ಭೇಟಿ ನೀಡಿ ನೊಂದಾಯಿಸಿಕೊಳ್ಳಬೇಕು.

ಆಸಕ್ತರು 2 ಪುಟಗಳ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ ಮತ್ತು ಅಗತ್ಯವಿರುವ ದಾಖಲೆಗಳನ್ನು ಫಾರ್ಮ್​ನೊಂದಿಗೆ ಲಗತ್ತಿಸಬೇಕು. ಅರ್ಜಿಯನ್ನು ಭರ್ತಿ ಮಾಡಲು ಮೂಲ ವಿವರಗಳಾದ ಹೆಸರು, ದಿನಾಂಕ, ಸ್ಥಳ, ಸಂಪರ್ಕ ವಿವರಗಳು, ಜನಧನ್ ಬ್ಯಾಂಕ್​ ಖಾತೆ ಸಂಖ್ಯೆ, ಆಧಾರ್ ಕಾರ್ಡ್​ ಸಂಖ್ಯೆ ಇತ್ಯಾದಿ ಅಗತ್ಯವಿದೆ.

ಅರ್ಜಿದಾರರು ತಮ್ಮ ಸಿಲಿಂಡರ್ ಪ್ರಕಾರದ ಅವಶ್ಯಕತೆಯನ್ನು ನಮೂದಿಸಬೇಕಾಗಿದೆ ಅಂದರೆ ಈ ಯೋಜನೆಯಲ್ಲಿ 14.2 ಕೆ.ಜಿ. ಸಿಲಿಂಡರ್ ಅಥವಾ 5 ಕೆ.ಜಿ ಸಿಲಿಂಡರ್ ಎಂಬ 2 ವಿಭಾಗಗಳಿವೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಎಷ್ಟು ಕೆ.ಜಿ ಸಿಲಿಂಡರ್​ನ ಅಗತ್ಯವಿದೆ ಎಂದು ತಿಳಿಸಬೇಕು. ಒಂದು ವೇಳೆ ಗ್ರಾಹಕರು ಈ 3 ತಿಂಗಳುಗಳ ಅವಧಿಯಲ್ಲಿ ರೀಫಿಲ್ ಸಿಲಿಂಡರ್ ಪಡೆಯದಿದ್ದಲ್ಲಿ, ಮುಂಗಡ ಹಣವನ್ನು 2021ರ ಮಾರ್ಚ್​ ವರೆಗೆ ಸಿಲಿಂಡರ್ ಪಡೆಯಲು ಬಳಸಬಹುದು.

ಭಾರತದಲ್ಲಿನ ಎಲ್​ಪಿಜಿ ವಿತರಣೆಯ ಪ್ರಸ್ತುತ ಸ್ಥಿತಿ: ಭಾರತವು 24 ಕೋಟಿಗೂ ಹೆಚ್ಚು ಕುಟುಂಬಗಳಿಗೆ ನೆಲೆಯಾಗಿದ್ದು, ಅದರಲ್ಲಿ ಸುಮಾರು 10 ಕೋಟಿ ಕುಟುಂಬಗಳು ಇನ್ನೂ ಕೂಡ ಎಲ್​ಪಿಜಿ ಅಡುಗೆ ಇಂಧನದಿಂದ ವಂಚಿತರಾಗಿದ್ದಾರೆ ಹಾಗೂ ಅಡುಗೆಯ ಪ್ರಾಥಮಿಕ ಮೂಲವಾಗಿ ಉರುವಲು, ಕಲ್ಲಿದ್ದಲು, ಸಗಣಿ ರೊಟ್ಟಿ ಇತ್ಯಾದಿಗಳನ್ನು ಅವಲಂಬಿಸಿದ್ದಾರೆ.

ಗೃಹಿಣಿಯರಿಗೆ ಗುಡ್​ ನ್ಯೂಸ್​: LPG ಗ್ಯಾಸ್​ ಸಿಲಿಂಡರ್​ ಬೆಲೆ ಕಡಿಮೆಯಾಗುವ ಲೆಕ್ಕಾಚಾರವಿದೆ!

ಪ್ರಿಯಕರನ ಜೊತೆ ಸೇರಿ ನಡುರಸ್ತೆಯಲ್ಲೇ ಗಂಡನನ್ನು ಥಳಿಸಿದ ಹೆಂಡತಿ!
ಪ್ರಿಯಕರನ ಜೊತೆ ಸೇರಿ ನಡುರಸ್ತೆಯಲ್ಲೇ ಗಂಡನನ್ನು ಥಳಿಸಿದ ಹೆಂಡತಿ!
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್