AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Gold Smuggling ಪ್ರಕರಣ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಕಚೇರಿ

ತಿರುವನಂತಪುರಂ: ಕೇರಳದ ಗೋಲ್ಡ್​ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಧಾನಿ ಕಾರ್ಯಾಲಯ ಮಾಹಿತಿ ಪಡೆಯಲು ಮುಂದಾಗಿದೆ. ಇದಲ್ಲದೆ, ಕೇರಳದ ಸಚಿವರೊಬ್ಬರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮೊದಲು ಸೀಮಾ ಸುಂಕ (Customs) ಇಲಾಖೆಯಿಂದ ಕೇಂದ್ರ ಸರ್ಕಾರಕ್ಕೆ ವರದಿ ಸಿಗಬೇಕು. ಅದರ ಬಳಿಕ ಉನ್ನತ ತನಿಖೆ ಬಗ್ಗೆ ಕೇಂದ್ರ ನಿರ್ಧಾರ‌ ಕೈಗೊಳ್ಳಲಿದೆ. ಈ ಮಧ್ಯೆ ಎರ್ನಾಕುಲಂನಲ್ಲಿರುವ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಿಬಿಐ ತಂಡವೊಂದು ಸಭೆ ನಡೆಸಿದೆ. ಈ ನಡುವೆ ವಿಪಕ್ಷಗಳು ಸಿಎಂ […]

Kerala Gold Smuggling ಪ್ರಕರಣ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಕಚೇರಿ
KUSHAL V
| Edited By: |

Updated on:Jul 08, 2020 | 7:53 PM

Share

ತಿರುವನಂತಪುರಂ: ಕೇರಳದ ಗೋಲ್ಡ್​ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಧಾನಿ ಕಾರ್ಯಾಲಯ ಮಾಹಿತಿ ಪಡೆಯಲು ಮುಂದಾಗಿದೆ. ಇದಲ್ಲದೆ, ಕೇರಳದ ಸಚಿವರೊಬ್ಬರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೊದಲು ಸೀಮಾ ಸುಂಕ (Customs) ಇಲಾಖೆಯಿಂದ ಕೇಂದ್ರ ಸರ್ಕಾರಕ್ಕೆ ವರದಿ ಸಿಗಬೇಕು. ಅದರ ಬಳಿಕ ಉನ್ನತ ತನಿಖೆ ಬಗ್ಗೆ ಕೇಂದ್ರ ನಿರ್ಧಾರ‌ ಕೈಗೊಳ್ಳಲಿದೆ. ಈ ಮಧ್ಯೆ ಎರ್ನಾಕುಲಂನಲ್ಲಿರುವ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಿಬಿಐ ತಂಡವೊಂದು ಸಭೆ ನಡೆಸಿದೆ.

ಈ ನಡುವೆ ವಿಪಕ್ಷಗಳು ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆಗೆ ಒತ್ತಾಯಿಸಿವೆ. ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿತ್ತಲ ಪ್ರಕರಣದ ಮುಖ್ಯ ಆರೋಪಿ ಸ್ವಪ್ನಾ ಸುರೇಶ್​ ಗೆ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಆಯಕಟ್ಟಿನ ಜಾಗದಲ್ಲಿ ಉದ್ಯೋಗ ನೀಡಿ ತಿಂಗಳಿಗೆ 1.5 ಲಕ್ಷ ಸಂಬಳ ಸಹ ನಿಗದಿ ಮಾಡಲಾಗಿತ್ತು. ಇಲಾಖೆಯ ನೇರ ಜವಾಬ್ದಾರಿ ಹೊಂದಿರುವ ಸಿಎಂ ವಿಜಯನ್​ ಅರಿವಿಲ್ಲದೆ ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ಸಿಎಂ ಪಿಣರಾಯಿ ವಿಜಯನ್​ ವಜಾಗೊಂಡಿರುವ ಮಾಹಿತಿ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿವಶಂಕರ್​ ಮತ್ತು ಸ್ವಪ್ನಾ ಸುರೇಶ್​ರನ್ನ ಬಚಾವ್​ ಮಾಡುವ ಯತ್ನದಲ್ಲಿ ತೊಡಗಿದ್ದಾರೆ. ಅದಕ್ಕಾಗಿ, ಸಿಎಂ ಕಾರ್ಯಾಲಯವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Published On - 4:01 pm, Wed, 8 July 20

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ