AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Gold Smuggling ಪ್ರಕರಣ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಕಚೇರಿ

ತಿರುವನಂತಪುರಂ: ಕೇರಳದ ಗೋಲ್ಡ್​ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಧಾನಿ ಕಾರ್ಯಾಲಯ ಮಾಹಿತಿ ಪಡೆಯಲು ಮುಂದಾಗಿದೆ. ಇದಲ್ಲದೆ, ಕೇರಳದ ಸಚಿವರೊಬ್ಬರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮೊದಲು ಸೀಮಾ ಸುಂಕ (Customs) ಇಲಾಖೆಯಿಂದ ಕೇಂದ್ರ ಸರ್ಕಾರಕ್ಕೆ ವರದಿ ಸಿಗಬೇಕು. ಅದರ ಬಳಿಕ ಉನ್ನತ ತನಿಖೆ ಬಗ್ಗೆ ಕೇಂದ್ರ ನಿರ್ಧಾರ‌ ಕೈಗೊಳ್ಳಲಿದೆ. ಈ ಮಧ್ಯೆ ಎರ್ನಾಕುಲಂನಲ್ಲಿರುವ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಿಬಿಐ ತಂಡವೊಂದು ಸಭೆ ನಡೆಸಿದೆ. ಈ ನಡುವೆ ವಿಪಕ್ಷಗಳು ಸಿಎಂ […]

Kerala Gold Smuggling ಪ್ರಕರಣ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಕಚೇರಿ
Follow us
KUSHAL V
| Updated By:

Updated on:Jul 08, 2020 | 7:53 PM

ತಿರುವನಂತಪುರಂ: ಕೇರಳದ ಗೋಲ್ಡ್​ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಧಾನಿ ಕಾರ್ಯಾಲಯ ಮಾಹಿತಿ ಪಡೆಯಲು ಮುಂದಾಗಿದೆ. ಇದಲ್ಲದೆ, ಕೇರಳದ ಸಚಿವರೊಬ್ಬರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೊದಲು ಸೀಮಾ ಸುಂಕ (Customs) ಇಲಾಖೆಯಿಂದ ಕೇಂದ್ರ ಸರ್ಕಾರಕ್ಕೆ ವರದಿ ಸಿಗಬೇಕು. ಅದರ ಬಳಿಕ ಉನ್ನತ ತನಿಖೆ ಬಗ್ಗೆ ಕೇಂದ್ರ ನಿರ್ಧಾರ‌ ಕೈಗೊಳ್ಳಲಿದೆ. ಈ ಮಧ್ಯೆ ಎರ್ನಾಕುಲಂನಲ್ಲಿರುವ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಿಬಿಐ ತಂಡವೊಂದು ಸಭೆ ನಡೆಸಿದೆ.

ಈ ನಡುವೆ ವಿಪಕ್ಷಗಳು ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆಗೆ ಒತ್ತಾಯಿಸಿವೆ. ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್​ ಮುಖಂಡ ರಮೇಶ್​ ಚೆನ್ನಿತ್ತಲ ಪ್ರಕರಣದ ಮುಖ್ಯ ಆರೋಪಿ ಸ್ವಪ್ನಾ ಸುರೇಶ್​ ಗೆ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಆಯಕಟ್ಟಿನ ಜಾಗದಲ್ಲಿ ಉದ್ಯೋಗ ನೀಡಿ ತಿಂಗಳಿಗೆ 1.5 ಲಕ್ಷ ಸಂಬಳ ಸಹ ನಿಗದಿ ಮಾಡಲಾಗಿತ್ತು. ಇಲಾಖೆಯ ನೇರ ಜವಾಬ್ದಾರಿ ಹೊಂದಿರುವ ಸಿಎಂ ವಿಜಯನ್​ ಅರಿವಿಲ್ಲದೆ ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ಸಿಎಂ ಪಿಣರಾಯಿ ವಿಜಯನ್​ ವಜಾಗೊಂಡಿರುವ ಮಾಹಿತಿ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿವಶಂಕರ್​ ಮತ್ತು ಸ್ವಪ್ನಾ ಸುರೇಶ್​ರನ್ನ ಬಚಾವ್​ ಮಾಡುವ ಯತ್ನದಲ್ಲಿ ತೊಡಗಿದ್ದಾರೆ. ಅದಕ್ಕಾಗಿ, ಸಿಎಂ ಕಾರ್ಯಾಲಯವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Published On - 4:01 pm, Wed, 8 July 20

ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ