AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal Crisis: ಕಲ್ಲಿದ್ದಲು ಬಿಕ್ಕಟ್ಟಿನ ಪರಿಸ್ಥಿತಿ ಅವಲೋಕನ; ಇಂದು ಪ್ರಧಾನಿ ಕಚೇರಿಯಿಂದ ಪರಿಶೀಲನಾ ಸಭೆ

ದೇಶದ ಉಷ್ಣಸ್ಥಾವರಗಳಲ್ಲಿ ಕಲ್ಲಿದ್ದಲು ಅಭಾವ ಉಂಟಾಗಿದೆ. ಇದು ದೇಶದಲ್ಲಿ ವಿದ್ಯುತ್​ ವ್ಯತ್ಯಯ ಸಮಸ್ಯೆಗೆ ಕಾರಣವಾಗಬಹುದು ಎಂದು ಕೇಂದ್ರ ವಿದ್ಯುತ್​ ಪ್ರಾಧಿಕಾರ ಅಕ್ಟೋಬರ್​ 5ರಂದು ತಿಳಿಸಿತ್ತು.

Coal Crisis: ಕಲ್ಲಿದ್ದಲು ಬಿಕ್ಕಟ್ಟಿನ ಪರಿಸ್ಥಿತಿ ಅವಲೋಕನ; ಇಂದು ಪ್ರಧಾನಿ ಕಚೇರಿಯಿಂದ ಪರಿಶೀಲನಾ ಸಭೆ
ನರೇಂದ್ರ ಮೋದಿ
TV9 Web
| Edited By: |

Updated on: Oct 12, 2021 | 12:39 PM

Share

ದೇಶದ 100ಕ್ಕೂ ಹೆಚ್ಚು ವಿದ್ಯುತ್​ ಸ್ಥಾವರಗಳಲ್ಲಿ ಕಲ್ಲಿದ್ದಲು ಅಭಾವ (Coal Shortage) ಉಂಟಾಗಿದ್ದು, ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ನಿನ್ನೆ ಗೃಹ ಸಚಿವ ಅಮಿತ್​ ಶಾ (Amit Shah), ಕೇಂದ್ರ ಇಂಧನ ಸಚಿವ ಆರ್​.ಕೆ.ಸಿಂಗ್​ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್​ ಜೋಶಿಯವರೊಟ್ಟಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಇನ್ನೂ ಕೆಲವು ಕೇಂದ್ರ ಸಚಿವರು ಪಾಲ್ಗೊಂಡಿದ್ದರು. ಅದರ ಬೆನ್ನಲ್ಲೇ ಈಗ ಪ್ರಧಾನಮಂತ್ರಿ ಕಚೇರಿ (PMO) ಕೂಡ ಇಂದು ಪರಿಶೀಲನಾ ಸಭೆ ನಡೆಸಲಿದೆ. ಭಾರತದಲ್ಲಿ ವಿದ್ಯುತ್​ ಸ್ಥಾವರಗಳಲ್ಲಿ ಎಷ್ಟರ ಮಟ್ಟಿಗೆ ಕಲ್ಲಿದ್ದಲು ಕೊರತೆ ಉಂಟಾಗಿದೆ? ನಿವಾರಿಸಲು ಏನೆಲ್ಲ ಕ್ರಮ ಕೈಗೊಳ್ಳಬೇಕು? ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚೆ, ಪರಿಶೀಲನೆಗಳು ಈ ಸಭೆಯಲ್ಲಿ ನಡೆಯಲಿವೆ.  

ದೇಶದಲ್ಲಿ ಯಾವ ಭಾಗದಲ್ಲಿಯೂ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳುವುದಿಲ್ಲ ಎಂದು ಈಗಾಗಲೇ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಹಾಗಿದ್ದಾಗ್ಯೂ ಪಂಜಾಬ್​, ರಾಜಸ್ಥಾನ, ದೆಹಲಿ, ತಮಿಳುನಾಡು ಈ ಬಗ್ಗೆ ಧ್ವನಿ ಎತ್ತಿವೆ. ಕಲ್ಲಿದ್ದಲು ಪೂರೈಕೆ ಸಾಕಾಗುತ್ತಿಲ್ಲ. ಹೀಗಾದರೆ ವಿದ್ಯುತ್​ ಪೂರೈಕೆ ಕಷ್ಟವಾಗಲಿದೆ ಎಂದೂ ಹೇಳಿಕೊಂಡಿವೆ.  ವಿದ್ಯುತ್​ ಕೊರತೆ ಎದುರಾಗಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಸರಿಯಾಗಿ ಮಾಡಬೇಕು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​, ಪಂಜಾಬ್​ ಸಿಎಂ ಚರಣಜಿತ್​ ಸಿಂಗ್ ಛನ್ನಿ ಕೇಂದ್ರಕ್ಕೆ ಪತ್ರವನ್ನೂ ಬರೆದಿದ್ದಾರೆ.

ಇನ್ನು ದೇಶದ ಉಷ್ಣಸ್ಥಾವರಗಳಲ್ಲಿ ಕಲ್ಲಿದ್ದಲು ಅಭಾವ ಉಂಟಾಗಿದೆ. ಇದು ದೇಶದಲ್ಲಿ ವಿದ್ಯುತ್​ ವ್ಯತ್ಯಯ ಸಮಸ್ಯೆಗೆ ಕಾರಣವಾಗಬಹುದು ಎಂದು ಕೇಂದ್ರ ವಿದ್ಯುತ್​ ಪ್ರಾಧಿಕಾರ ಬಿಡುಗಡೆ ಮಾಡಿದ ಡಾಟಾದಲ್ಲಿ ಉಲ್ಲೇಖವಾಗಿದೆ.  ಕಲ್ಲಿದ್ದಲು ಬಳಸಿ ವಿದ್ಯುತ್​ ಉತ್ಪಾದನೆ ಮಾಡುವ ಒಟ್ಟು 135 ಥರ್ಮಲ್​ ಸ್ಥಾವರಗಳಲ್ಲಿ ಸುಮಾರು 106 ಸ್ಥಾವರಗಳು (ಶೇ.80) ಕಲ್ಲಿದ್ದಲು ಸಮಸ್ಯೆ ಎದುರಿಸುತ್ತಿವೆ. ಅವರ ಬಳಿ ಇನ್ನು 6-7 ದಿನಗಳಿಗೆ ಸಾಕಾಗುವಷ್ಟು ಮಾತ್ರ ಕಲ್ಲಿದ್ದಲು ಸಂಗ್ರಹ ಇದೆ ಎಂದು ಅಕ್ಟೋಬರ್​ 5ರಂದು ಬಿಡುಗಡೆ ಮಾಡಿದ ಮಾಹಿತಿಯಲ್ಲಿ ತಿಳಿಸಲಾಗಿತ್ತು. ಅಂದಿನಿಂದಲೂ ಒಂದು ಆತಂಕದ ವಾತಾವರಣ ಶುರುವಾಗಿದೆ.  ಆದರೆ ಕೇಂದ್ರ ಇಂಧನ ಸಚಿವಾಲಯ ಮತ್ತು ಕಲ್ಲಿದ್ದಲು ಸಚಿವಾಲಯಗಳು ಇದನ್ನು ಅಲ್ಲಗಳೆದಿವೆ. ಕಲ್ಲಿದ್ದಲು ಸಾಕಷ್ಟು ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್​ ಅಭಾವ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿವೆ.

ಇದನ್ನೂ ಓದಿ: ನಿಮ್ಮ ಈ ಕೆಲವು ದಿನನಿತ್ಯದ ಅಭ್ಯಾಸಗಳು ಮೂತ್ರಪಿಂಡದ ಆರೋಗ್ಯಕ್ಕೆ ಹಾನಿಯುಂಟು ಮಾಡಬಹುದು! ಎಚ್ಚರ

ಸ್ಟಾರ್​ ಚಿತ್ರಗಳ ಜೊತೆ ಡಾರ್ಲಿಂಗ್​ ಕೃಷ್ಣ ಪೈಪೋಟಿ: ಅ.15ಕ್ಕೆ ಶ್ರೀಕೃಷ್ಣ ಜಿಮೇಲ್​ ಡಾಟ್​ ಕಾಮ್​ ಬಿಡುಗಡೆ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್